
CHITRADURGA NEWS | 02 JULY 2025
ಚಿತ್ರದುರ್ಗ: ವಿಶ್ವಕ್ಕೆ ಮಾದರಿಯಾದ ವಚನ ಸಾಹಿತ್ಯದ ಸಂಶೋಧನೆಗೆ ಡಾ.ಫ.ಗು.ಹಳಕಟ್ಟಿ ಜೀವನವನ್ನೇ ಮುಡುಪಿಟ್ಟರು. ಲಾಭ ತರುವ ವಕೀಲಿ ವೃತ್ತಿಯನ್ನು ಬಿಟ್ಟು, ಸತತ 60 ವರ್ಷಗಳ ಕಾಲ ವಚನ ಸಂಶೋಧನೆ ಹಾಗೂ ಪ್ರಕಟಣೆ ಕಾರ್ಯಕೈಗೊಂಡು 250ಕ್ಕೂ ಅಧಿಕ ವಚನಕಾರರನ್ನು ನಾಡಿಗೆ ಪರಿಚಯಿಸಿಕೊಟ್ಟರು ಎಂದು ಪ್ರಾಂಶುಪಾಲೆ ಡಾ.ಎನ್.ಮಮತಾ ಹೇಳಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ, ಡಾ.ಫ.ಗು.ಹಳಕಟ್ಟಿ ಜನ್ಮ ದಿನದ ಅಂಗವಾಗಿ ಆಯೋಜಿಸಲಾಗಿದ್ದ, ವಚನ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.
ವಚನ ಸಾಹಿತ್ಯವನ್ನು ಪುನರುಜ್ಜೀವನಗೊಳಿಸಲು ಜನ್ಮಿಸಿದ ಕಾರಣೀಭೂತ ಡಾ. ಫ.ಗು.ಹಳಹಟ್ಟಿಯವರನ್ನು ಸಾಹಿತಿ ಸಿಂಪಗೆ ಲಿಂಗಣ್ಣ ‘ಕರ್ನಾಟಕದ ಮ್ಯಾಕ್ಸ್ಮುಲ್ಲರ್’ ಎಂದು ಕರೆದಿದ್ದಾರೆ. ಸಾಹಿತಿ ಬಿ.ಎಂ.ಶ್ರೀಕ0ಠಯ್ಯನವರು ‘ವಚನಗುಮ್ಮಟ’ ಎಂದು ಹೊಗಳಿದ್ದಾರೆ. ಉತ್ತರ ಕರ್ನಾಟಕದ ಮನೆಗಳಲ್ಲಿ ದೇವರ ಜಗಲಿಯಲ್ಲಿ ಪೂಜೆಗೆ ಇರಿಸಿದ್ದ ವಚನ ಸಾಹಿತ್ಯದ ತಾಳೆಗರಿಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಅಧ್ಯಯನ ಮಾಡಿ ವಚನಗಳನ್ನು ಪ್ರಕಟಿಸಿ, ವಚನಕಾರರ ಚಿಂತನೆಯನ್ನು ಜಗತ್ತಿಗೆ ತೊರರ್ಪಡಿಸಿದರು.
12 ಶತಮಾನದ ವಚನ ಕ್ರಾಂತಿ ‘ವಿಶ್ವಕ್ಕೆ ಮಾದರಿಯಾದ ಸಾಮಾಜಿಕ ಕ್ರಾಂತಿ’ಯಾಗಿದೆ. ಇದನ್ನು ಜಗತ್ತಿಗೆ ಪರಿಚಯಿಸಿದ ಡಾ.ಫ.ಗು.ಹಳಕಟ್ಟಿಯವರನ್ನು ‘ವಚನ ಸಾಹಿತ್ಯ ಪಿತಾಮಹ’ ಎಂದು ಕರೆಯಲಾಗುತ್ತದೆ ಎಂದರು.
Also Read: ಡಿಸೆಂಬರ್ 31ರವರೆಗೆ ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ SSS ಹುಬ್ಬಳ್ಳಿ ರೈಲು ಸೇವೆ ರದ್ದು
ಡಾ.ಫ.ಗು.ಹಳಕಟ್ಟಿ ಅವರು ಎಂದಿಗೂ ಹಣ ಹಾಗೂ ಸಂಪತ್ತಿಗಾಗಿ ವಚನಗಳ ಸಂಶೋಧನೆ ಕೈಗೊಳ್ಳಲಿಲ್ಲ. ಅವರ ಮಗ ಅಪಘಾತಕ್ಕೆ ತುತ್ತಾಗಿ ಮರಣ ಹೊಂದಿದರು, ಧೃತಿಗೆಡದೆ ವಚನ ಸಂಶೋಧನೆಯನ್ನು ಮುಂದುವರಿಸಿದರು. ಇವರ ವ್ಯಕ್ತಿತ್ವ ನಾಡಿಗೆ ಮಾದರಿಯಾಗಿದೆ. ದುರ್ಧೈವದ ಸಂಗತಿಯ0ದರೆ, ಡಾ.ಫ.ಗು.ಹಳಕಟ್ಟಿ ಜೀವಿತ ಕಾಲದಲ್ಲಿ ಅವರ ಕಾರ್ಯವನ್ನು ಜನರು ಹೆಚ್ಚಾಗಿ ಗುರುತಿಸಲಿಲ್ಲ. ಆದರೆ ವಿಜಯಪುರದಲ್ಲಿ ವಾಸವಿದ್ದ ಡಾ.ಫ.ಗು.ಹಳಕಟ್ಟಿಯವರ ಮನೆಗೆ ಅಂದಿನ ರಾಜ್ಯಪಾಲರಾದ ಜಯಚಾಮರಾಜೇಂದ್ರ ಒಡೆಯರ್ ಭೇಟಿ ನೀಡಿ ಗೌರವಿಸಿದರು.
ಮಠಗಳು ಡಾ.ಫ.ಗು.ಹಳಕಟ್ಟಿಯವರನ್ನು ಸ್ಮರಿಸುವ ಕೆಲಸ ಮಾಡಬೇಕು. ಇಂದಿನ ಪೀಳಿಗೆಗೆ ಅವರ ಕೊಡುಗೆ ಮತ್ತು ವ್ಯಕ್ತಿತ್ವದ ಪರಿಚಯ ಮಾಡಿಕೊಡಬೇಕು ಎಂದು ಪ್ರಾಂಶುಪಾಲೆ ಡಾ.ಎನ್.ಮಮತಾ ಹೇಳಿದರು.
ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಮಾತನಾಡಿ, ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ.ಫ.ಗು.ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ. ವಚನ ಸಾಹಿತ್ಯ ಮತ್ತು ವಚನಕಾರರ ಬಗ್ಗೆ ಅಮೂಲಾಗ್ರವಾಗಿ ತಿಳಿಯಲು ಡಾ.ಫ.ಗು.ಹಳಕಟ್ಟಿ ಅವರಿಂದ ಸಾಧ್ಯವಾಗಿದೆ ಎಂದರು.
Also Read: ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯದ ಮೂಲ ಪ್ರತಿಗಳ ಸಂಗ್ರಹಕ್ಕೆ ಮನೆ ಮನೆಗಳಿಗೆ ಸೈಕಲ್ ಮೂಲಕ ತೆರಳಿ, ಹುಡುಕಿ, ಸಂಗ್ರಹಿಸಿ ವಚನ ಸಾಹಿತ್ಯದ ಬೆಳಕು ಹರಡಿದ್ದಾರೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ, ಫ.ಗು.ಹಳಕಟ್ಟಿಯವರು ಸ್ವಾತಂತ್ರö್ಯ ಪೂರ್ವದಲ್ಲಿ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದರು. ವಚನ ಸಂಶೋಧನೆ ಜೊತೆಗೆ ನಿಸ್ವಾರ್ಥ ಜನಸೇವೆಯನ್ನು ಮಾಡಿದರು. ಆಕಸ್ಮಿಕವಾಗಿ ದೊರೆತ ವಚನಗಳ ಗಂಟು ಮುಂದೆ ಫ.ಗು.ಹಳಕಟ್ಟಿಯವರ ಜೀವನದ ಮುಖ್ಯ ಉದ್ದೇಶವಾಯಿತು. ಈ ಆಕಸ್ಮಿಕ ಘಟನೆಯ ಹಿಂದೆ ದೇವರ ಇಚ್ಚೆಯಿದೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಡಾ.ಫ.ಗು ಹಳಕಟ್ಟಿಯವರು ವಿಧಾನ ಪರಿಷತ್ ಸದಸ್ಯರಾಗಿ, ವಕೀಲರಾಗಿ, ಪತ್ರಕರ್ತರಾಗಿಯೂ ಕೆಲಸ ಮಾಡಿದ್ದಾರೆ. ಇಂತಹ ಮಹನೀಯರ ಸ್ಮರಿಸುವ ಅಗತ್ಯವಿದೆ ಎಂದರು.
Also Read: ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಉಪವಿಭಾಗಾಧಿಕಾರಿಗಳ ಕಚೇರಿ ತಹಶೀಲ್ದಾರ್ ನರಸಿಂಹಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಮಳಲಿ ಶ್ರೀನಿವಾಸ್, ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್ ಕಾರ್ಯದರ್ಶಿ ಷಣ್ಮುಖಪ್ಪ, ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಶ್ಮಣ್, ಸಾಹಿತಿ ಆನಂದ ಮೂರ್ತಿ ಸೇರಿದಂತೆ ಮತ್ತಿತರರು ಇದ್ದರು. ಶಿಕ್ಷಕಿ ಗೀತಾ ಭರಮಸಾಗರ ನಿರೂಪಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
