Connect with us

    ತೋಟ ಒಣಗುತ್ತಿವೆ ಭದ್ರಾ ನೀರು ಹರಿಸಿ | 29.90 ಟಿಎಂಸಿ ನೀರು ಪೂರೈಕೆಗೆ ಅವಕಾಶ

    ಭದ್ರಾ ಮೇಲ್ದಂಡೆ ಯೋಜನೆ

    ಮುಖ್ಯ ಸುದ್ದಿ

    ತೋಟ ಒಣಗುತ್ತಿವೆ ಭದ್ರಾ ನೀರು ಹರಿಸಿ | 29.90 ಟಿಎಂಸಿ ನೀರು ಪೂರೈಕೆಗೆ ಅವಕಾಶ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 23 APRIL 2024
    ಚಿತ್ರದುರ್ಗ: ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ಹರಿಸಬೇಕು. ಈ ಮೂಲಕ ನೀರಿನ ಸಮಸ್ಯೆ ಜತೆ ಒಣಗುತ್ತಿರುವ ತೋಟಗಳನ್ನು ರಕ್ಷಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.

    ಕ್ಲಿಕ್ ಮಾಡಿ ಓದಿ: ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ

    ಭದ್ರಾ ಮೇಲ್ದಂಡೆ ಮುಖಾಂತರ ನಾಲ್ಕು ಜಿಲ್ಲೆಗಳಿಗೆ 29.90 ಟಿಎಂಸಿ ನೀರು ಪೂರೈಕೆ ಮಾಡಬಹುದು. ಚುನಾವಣೆ ಪ್ರಚಾರದ ವೇಳೆ ಜಿಲ್ಲೆಯ ಜನರು ನೀರಿಗಾಗಿ ಪರಿತಪಿಸುತ್ತಿರುವುದು ಕಂಡು ಬಂತು. ಕೇಂದ್ರ, ರಾಜ್ಯ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಬೇಕು. ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮನವಿ ಮಾಡಿದರು.

    ಕ್ಲಿಕ್ ಮಾಡಿ ಓದಿ: ಗೋವಿಂದ ಕಾರಜೋಳ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗ್ತಾರೆ | ಗೂಳಿಹಟ್ಟಿ ಶೇಖರ್‌

    2007-08ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 21,473.67 ಕೋಟಿ ಪರಿಷ್ಕೃತ ಯೋಜನಾ ವರದಿಗೆ ಅನುಮೋದನೆ ದೊರೆತಿದೆ. ಎರಡೂ ಸರ್ಕಾರಗಳು ಇಚ್ಛಾಶಕ್ತಿ ತೋರಿಸಿ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ಈ ಯೋಜನೆಯ ಮೂಲಕ ನಾಲ್ಕು ಜಿಲ್ಲೆಗಳ 2,25,515 ಹೆಕ್ಟೇರ್‌ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯ, 367 ಕೆರೆಗಳಿಗೆ ಶೇ 50ರಷ್ಟು ನೀರು ತುಂಬಿಸಬಹುದು. ವಾಣಿ ವಿಲಾಸ ಜಲಾಶಯಕ್ಕೆ 2 ಟಿಎಂಸಿ ನೀರು ಹರಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

    ಮಧುಗಿರಿ ತಾಲ್ಲೂಕಿನ ದೊಡ್ಡೇರಿ, ಬಡವನಹಳ್ಳಿ, ಹೊಸಕೆರೆ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆ ಅನುಭವಿಸುತ್ತಿದ್ದಾರೆ. ಅಡಿಕೆ, ತೆಂಗಿನ ತೋಟಗಳು ನೀರಿಲ್ಲದೆ ಒಣಗುತ್ತಿವೆ. ಸಮುದ್ರ ಸೇರುವ ಸಾವಿರಾರು ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಸರ್ಕಾರ ವ್ಯವಸ್ಥಿತ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top