Connect with us

    ದೇಹ ತಂಪಾಗಿರಲು ದ್ರವ ಆಹಾರ ಸೇವಿಸಿ | ಎನ್.ಎಸ್.ಮಂಜುನಾಥ್

    ಕಾರ್ಮಿಕರಿಗೆ ಆರೋಗ್ಯ ರಕ್ಷಣೆ ಕುರಿತು ಮಾಹಿತಿ

    ಮುಖ್ಯ ಸುದ್ದಿ

    ದೇಹ ತಂಪಾಗಿರಲು ದ್ರವ ಆಹಾರ ಸೇವಿಸಿ | ಎನ್.ಎಸ್.ಮಂಜುನಾಥ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 15 APRIL 2024

    ಚಿತ್ರದುರ್ಗ: ತಾಪಮಾನ ಹೆಚ್ಚುತ್ತಿರುವುದರಿಂದ ನಮ್ಮ ದೇಹ ತಂಪಾಗಿರಲು ಸರಾಗವಾಗಿ ಜೀರ್ಣವಾಗುವಂತಹ ದ್ರವ ಆಹಾರ ಸೇವಿಸುವುದು ಬಹು ಮುಖ್ಯ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.

    ಇದನ್ನೂ ಓದಿ: ರಾಜ್ಯ ಮಟ್ಟದ ಟೆನ್ನಿಸ್ ಟೂರ್ನಿ | ಕೋಟೆನಾಡಿನ ಕುವರಿಗೆ ಪ್ರಥಮ ಸ್ಥಾನ

    ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜೆ.ಎನ್.ಕೋಟೆ ಉಪ ಕೇಂದ್ರದ ಹೊರವಲಯದಲ್ಲಿ ಇರುವ ಶ್ರೀ ಕೃಷ್ಣ ಪೌಲ್ಟ್ರಿ ಫಾರಂನಲ್ಲಿ ಹೊರ ರಾಜ್ಯ ಬಿಹಾರ, ಮಧ್ಯಪ್ರದೇಶದಿಂದ ಬಂದು ಫಾರಂನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆರೋಗ್ಯ ರಕ್ಷಣೆ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಗಲೀಜುನಲ್ಲಿ ಕೆಲಸ ಮಾಡುವ ತಾವು ನಿತ್ಯ ಸ್ನಾನ ಮಾಡುವುದು, ಊಟಕ್ಕೂ ಮುನ್ನ ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳುವುದು, ತೆಳುವಾದ ಶುಭ್ರ ಕಾಟನ್ ಬಟ್ಟೆಗಳನ್ನು ಧರಿಸಿಕೊಂಡು, ಆಗಿಂದಾಗ್ಗೆ ನೀರು ಸೇವನೆ ಮಾಡುತ್ತಾ, ರಾಗಿ ಗಂಜಿ, ಮಜ್ಜಿಗೆ, ಬೇಳೆ ನೀರು ಜೀರ್ಣವಾಗುವಂತಹ ಆಹಾರ ಸೇವಿಸುತ್ತಾ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

    ಇದನ್ನೂ ಓದಿ: ನಾಳೆ ಚಿತ್ರದುರ್ಗಕ್ಕೆ ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ್

    ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ. ಮಾತನಾಡಿ, ಪರಿಸರ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ, ಯಾವುದೇ ರೋಗಕ್ಕೆ ಭಯ ಬೇಡ ಎಚ್ಚರಿಕೆ ಇರಲಿ, ರೋಗ ಭಾರದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ. ಆರೋಗ್ಯ ಸಮಸ್ಯೆ ಕಂಡು ಬಂದರೆ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತಮ್ಮ ಆರೋಗ್ಯ ಕಾಪಾಡಿಕೊಳ್ಳಿರಿ ಎಂದರು.

    ಇದನ್ನೂ ಓದಿ: ಶ್ರೀ ಲಕ್ಷ್ಮೀದೇವಿ ಜಾತ್ರೆಗೆ 23 ವರ್ಷಗಳ ನಂತರ ಅಪ್ಪಣೆ

    ಜಿಲ್ಲಾ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಎಚ್.ಆಂಜನೇಯ ಮಾತನಾಡಿ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಆರೋಗ್ಯವೇ ಭಾಗ್ಯ, ಕೆಲಸ ಕಾರ್ಯಗಳ ಕಡೆ ಎಷ್ಟು ಗಮನ ಹರಿಸುತ್ತೇವೆಯೋ ಆರೋಗ್ಯದ ಕಡೆ ಕೂಡ ಅಷ್ಟು ಗಮನ ಹರಿಸಬೇಕು. ತಾಪಮಾನ ಹೆಚ್ಚು ಇರುವುದರಿಂದ ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದೆ ವಾಂತಿ ಭೇದಿ ಸಂಭವಿಸುವ ಸಾಧ್ಯತೆ ಇದೆ. ಪ್ರಯುಕ್ತ ಶುದ್ಧ ಕುಡಿಯುವ ನೀರಿನ ಬಳಕೆ, ನಾರಿನಾಂಶ ಇರುವ ಹಸಿರು ತರಕಾರಿಗಳು, ಹಣ್ಣುಗಳು, ನಿಂಬೆ ಪಾನಕ, ಸೇವನೆ ಮಾಡಬೇಕು ಎಂದರು.

    ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್ ಮಾತನಾಡಿ, ಫಾರಂನಲ್ಲಿ ಕೆಲಸ ಮಾಡುವ ತಾವುಗಳು ಅವಶ್ಯ ಸಂದರ್ಭದಲ್ಲಿ ತಪ್ಪದೇ ಮಾಸ್ಕ್ ಧರಿಸುವುದು, ಆದಷ್ಟು ಬೆಳಗಿನ ಸಮಯದಲ್ಲಿ ಕೆಲಸ ನಿರ್ವಹಿಸಿ ಮಧ್ಯಾಹ್ನ ವಿರಾಮ ಪಡೆಯುವುದು ಒಳಿತು ಎಂದರು.

    ಸಂಶಯಾಸ್ಪದ ಇಬ್ಬರು ಕುಷ್ಟರೋಗ ಪ್ರಕರಣಗಳು ಕಂಡುಬಂದ ಪ್ರಯುಕ್ತ ಪೌಲ್ಟ್ರಿ ಫಾರಂನಲ್ಲಿ ಕೆಲಸ ಮಾಡುವ 25ಕ್ಕೂ ಹೆಚ್ಚು ಸಂಪರ್ಕಿಗಳ ಸಮೀಕ್ಷೆ ಮಾಡಿದರು.

    ಇದನ್ನೂ ಓದಿ: 50 ಸಾವಿರ ದಾಟಿದ ರಾಶಿ ಅಡಿಕೆ ಬೆಲೆ

    ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ರತ್ನಮ್ಮ ಬೀರಜ್ಜರ್, ಸಮುದಾಯ ಆರೋಗ್ಯ ಅಧಿಕಾರಿ ರಮೇಶ್, ಫೌಲ್ಟ್ರಿ ಫಾರಂನ ವ್ಯವಸ್ಥಾಪಕ ಪ್ರಸಾದ್ ಹಾಜರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top