CHITRADURGA NEWS | 14 JULY 2026
ಚಿತ್ರದುರ್ಗ: ವಿದ್ಯಾರ್ಥಿಗಳು ಜೀವನದಲ್ಲಿ ಗುರು ಮತ್ತು ಗುರಿಯನ್ನು ಹೊಂದಿದ್ದು, ಉತ್ತಮ ಶಿಕ್ಷಣ ಹಾಗೂ ಸಂಸ್ಕಾರವನ್ನು ಪಡೆದಾಗ ಮಾತ್ರ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ. ಇದರಿಂದ ಸಮಾಜವೂ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ದಾವಣಗೆರೆ ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
ನಗರದ ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.
“ವಿದ್ಯಾರ್ಥಿಗಳು ಬಸವಾದಿ ಶರಣರ ತತ್ವ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟು, ಪರಿಶುದ್ಧ ಜೀವನ ಹಾಗೂ ಸಂಸ್ಕಾರಯುತ ಶಿಕ್ಷಣ ಪಡೆಯಬೇಕು. ಸತ್ಯ ಶುದ್ಧ ಕಾಯಕದಲ್ಲಿ ತೊಡಗುವ ಮೂಲಕ ಸಮಾಜವನ್ನು ಶ್ರೀಮಂತಗೊಳಿಸಬೇಕು. ಪೋಷಕರ ಬೆಂಬಲ ಹಾಗೂ ಗುರು-ಹಿರಿಯರ ಮಾರ್ಗದರ್ಶನದೊಂದಿಗೆ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಹೊರಹೊಮ್ಮಬೇಕು” ಎಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, “ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಂತೆ ಭವ್ಯ ಭವಿಷ್ಯದ ಚಿಂತನೆ ಹೊಂದಿರಬೇಕು. ಸಾಧನೆಯ ಹಾದಿಯಲ್ಲಿ ಆತ್ಮವಿಶ್ವಾಸ, ಪ್ರಾಮಾಣಿಕ ಪ್ರಯತ್ನ ಹಾಗೂ ಛಲವನ್ನು ಮೈಗೂಡಿಸಿಕೊಂಡು ಬದುಕನ್ನು ಯಶಸ್ವಿಗೊಳಿಸಬೇಕು. ತಂದೆ-ತಾಯಿಯ ಆಸೆ-ಆಕಾಂಕ್ಷೆಗಳಿಗೆ ಪೂರಕವಾಗಿ ನಡೆದುಕೊಂಡು, ಧರ್ಮ ಮತ್ತು ಪರಂಪರೆಯ ಪ್ರಜ್ಞೆಯೊಂದಿಗೆ ಸಮಾಜಕ್ಕೆ ಕೀರ್ತಿ ತರಬೇಕು ಎಂದರು.
ಇದನ್ನೂ ಓದಿ: ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಅಧ್ಯಕ್ಷತೆ ವಹಿಸಿದ್ದ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ಎಸ್. ತಿಪ್ಪೇಸ್ವಾಮಿ ಮಾತನಾಡಿ, ಸಮಾಜದ ಪ್ರಗತಿ ಆರ್ಥಿಕ ಹಾಗೂ ಶೈಕ್ಷಣಿಕ ಸಬಲೀಕರಣದಿಂದ ಮಾತ್ರ ಸಾಧ್ಯ. ಇಂದಿನ ಆಧುನಿಕತೆಗೆ ತಕ್ಕಂತೆ ಶಿಕ್ಷಣ ಪಡೆದು ಉತ್ತಮ ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳಬೇಕು. ನಿರಂತರ ಅಧ್ಯಯನ ಮತ್ತು ಪರಿಶ್ರಮದಿಂದ ಮಾತ್ರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ವೀರಶೈವ ಸಮಾಜದ ಕಾರ್ಯದರ್ಶಿ ಪಿ. ವೀರೇಂದ್ರ ಕುಮಾರ್ ಅವರು ಸಮಾಜದ ಕಾರ್ಯಯೋಜನೆಗಳು, ಅನುಷ್ಠಾನ ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ಮಾಹಿತಿ ನೀಡಿದರು.
ಇದನ್ನೂ ಓದಿ: ಚೋಳಗುಡ್ಡದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
ಸಹ ಕಾರ್ಯದರ್ಶಿ ಜಿತೇಂದ್ರ ಹುಲಿಕುಂಟೆ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲಿ ಸಮಾಜದ ನಿರ್ದೇಶಕರಾದ ಎಸ್.ಷಡಕ್ಷರಯ್ಯ, ಟಿ.ಕೆ.ಲತಾ ಉಮೇಶ್, ಸಿದ್ಧವ್ವನಹಳ್ಳಿ ಎಸ್.ಪರಮೇಶ್, ಡಿ.ಎಸ್.ಮಲ್ಲಿಕಾರ್ಜುನ, ಡಿ.ವಿ.ಎಸ್.ಪ್ರದೀಪ್, ಟಿ.ಜಯಣ್ಣ, ಜಿ.ಎಂ.ಪ್ರಕಾಶ್, ನಿರಂಜನ ದೇವರಮನೆ, ಎಂ.ಸಿದ್ದಪ್ಪ ಇತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

