By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    22 minutes ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    25 minutes ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    3 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    10 hours ago
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    12 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    13 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    1 day ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಮಂತ್ರ | ಸಚಿವ ಡಿ.ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಮಂತ್ರ | ಸಚಿವ ಡಿ.ಸುಧಾಕರ್

News Desk Chitradurga News
Last updated: 14 April 2025 17:30
News Desk Chitradurga News
1 year ago
Share
ಡಾ.ಅಂಬೇಡ್ಕರ್ ಜಯಂತಿ
SHARE

CHITRADURGA NEWS | 14 APRIL 2025

ಚಿತ್ರದುರ್ಗ: ಡಾ.ಅಂಬೇಡ್ಕರ್ ಅವರ ಶಿಕ್ಷಣ-ಸಂಘಟನೆ-ಹೋರಾಟ ಎಂಬ ಮೂರು ಸಿದ್ಧಾಂತಗಳನ್ನು ನಾವೆಲ್ಲರೂ ಪಾಲಿಸಬೇಕಾದ ಜೀವನದ ಮಂತ್ರವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಹೇಳಿದರು.

Also Read: ಮಲ್ಲಾಡಿಹಳ್ಳಿಯ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 6 ರ‍್ಯಾಂಕ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ತ.ರಾ.ಸು. ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಲಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದಿಂದ ಜ್ಞಾನ, ಹೋರಾಟದಿಂದ ಹಕ್ಕುಗಳು, ಸಂಘಟನೆಯಿಂದ ಶಕ್ತಿ ಪಡೆದುಕೊಳ್ಳುವ ಮಾರ್ಗದಲ್ಲಿ ನಡೆಯುವುದು ನವ ಭಾರತ ನಿರ್ಮಾಣದ ಪ್ರಥಮ ಹೆಜ್ಜೆಯಾಗಿದೆ.

ಡಾ. ಅಂಬೇಡ್ಕರ್ ಅವರು ಕೇವಲ ಸಮಾಜಸೇವಕರಲ್ಲ, ಅವರು ಭಾರತದ ಪುನರ್ ನಿರ್ಮಾಣಕ್ಕೆ ಕೊಡುಗೆ ನೀಡಿದ ಮಹಾತ್ಮ. ಶೋಷಿತರಿಗೆ ಧೈರ್ಯ, ಶಿಕ್ಷಣ, ಆತ್ಮಗೌರವ ಮತ್ತು ನ್ಯಾಯದ ಮಾರ್ಗವನ್ನು ತೋರಿದ ದಾರಿದೀಪ. ಅವರ ಜೀವನದ ಪ್ರಮುಖ ಕೊಂಡಿಯಾಗಿದ್ದು ಭಾರತದ ಸಂವಿಧಾನ. ಅವರು ಅಧ್ಯಕ್ಷರಾಗಿದ್ದ ಕರಡು ಸಮಿತಿಯ ಮಾರ್ಗದರ್ಶನದಲ್ಲಿ ರೂಪುಗೊಂಡ ನಮ್ಮ ಸಂವಿಧಾನವು ಸಮಾನತೆ, ಧರ್ಮನಿರಪೇಕ್ಷತೆ, ಸಾಮಾಜಿಕ ನ್ಯಾಯ ಮತ್ತು ವ್ಯಕ್ತಿಗತ ಹಕ್ಕುಗಳನ್ನು ನಮ್ಮೆಲ್ಲರಿಗೂ ನೀಡುವ ಪವಿತ್ರ ಗ್ರಂಥವಾಗಿದೆ.

Also Read: ನಿವೃತ್ತ ಇಂಜಿನಿಯರ್ ಕೆ.ಸಿ.ನಿಂಗಪ್ಪ ನಿಧನ

12ನೇ ಶತಮಾನದಲ್ಲಿ ಈ ಭೂಮಿಯಲ್ಲಿ ಸಮಾನತೆಯ ಸಂದೇಶ ಸಾರಿ ಹೋಗಿದ್ದ ಮಹಾ ಮಾನವತಾವಾದಿ ಬಸವಣ್ಣ ಮತ್ತು 20ನೆಯ ಶತಮಾನದಲ್ಲಿ ಅದೇ ಸಂದೇಶವನ್ನು ಜಾರಿಗೊಳಿಸಿದ ಡಾ|| ಬಾಬಾ ಸಾಹೇಬ ಅಂಬೇಡ್ಕರ್ ಇಬ್ಬರಲ್ಲೂ ಹಲವು ಸಾಮ್ಯತೆಗಳು ಕಾಣುತ್ತವೆ.

ಇಬ್ಬರದು ಧ್ಯೆಯ, ಉದ್ದೇಶ ಒಂದೇ ಆಗಿತ್ತು, ಸಮಾಜದಲ್ಲಿ ಮೇಲು, ಕೀಳು ಎನ್ನುವ ಭಾವನೆ ಇರಬಾರದು, ಎಲ್ಲರಿಗೂ ಬದುಕಿನ ಹಕ್ಕು ಸಮಾನವಾಗಿ ಸಿಗಬೇಕು. ನೈಸರ್ಗಿಕ ಸಂಪನ್ಮೂಲಗಳ ಬಳಕೆಗೆ ಸಮಾನ ಅಧಿಕಾರವಿರಬೇಕು, ಎಲ್ಲಾ ಹಕ್ಕುಗಳು ಸಮಾನವಿರಬೇಕು ಎನ್ನುವ ಉದ್ದೇಶದೊಂದಿಗೆ ಅರಿವಿನ ಸಮಾಜ ನಿರ್ಮಿಸಿ, ಹೊಸ ಬೆಳಕನ್ನು ಕಾಣುವ ಹೊಸ ಕನಸು ಹೊತ್ತವರು ಡಾ. ಅಂಬೇಡ್ಕರ್ ಅವರು ಎಂದರು.

ಸಮಾಜದಲ್ಲಿನ ಅಸಮಾನತೆಗಾಗಿ ಅಂಬೇಡ್ಕರ್ ಅವರಿಗೆ ಬಹಳ ದೊಡ್ಡಮಟ್ಟದ ಅಸಮಾಧಾನವಿತ್ತು, ಆದರೆ ಅದಕ್ಕಾಗಿ ಅವರೆಂದೂ ತಾಳ್ಮೆ ಕಳೆದುಕೊಳ್ಳಲಿಲ್ಲ. ಅಹಿಂಸೆಯ ಮಾರ್ಗ ತುಳಿಯಲಿಲ್ಲ ಅತ್ಯಂತ ಸಮಾಧಾನದಿಂದಲೇ ಅರಿವು ಮೂಡಿಸಲು ಪ್ರಯತ್ನಿಸಿದರು, ಅದೇ ತತ್ವದ ಆಧಾರದ ಮೇಲೆ ಸಂವಿಧಾನವನ್ನು ರಚಿಸಿದರು.

Also Read: ನಿಮ್ಮ ಮಗುವಿಗೆ ಆಟಿಸಂ ಸಮಸ್ಯೆ ಇದೇ ಎಂಬುದನ್ನು ಈ ಲಕ್ಷಣಗಳ ಮೂಲಕ ತಿಳಿದುಕೊಳ್ಳಿ

ಅವರ ಜೀವಿತದುದ್ದಕ್ಕೂ ಯಾರನ್ನೂ ದ್ವೇಷಿಸಲಿಲ್ಲ, ಯಾರ ಹಕ್ಕುಗಳನ್ನು ಅಧಿಕಾರವನ್ನು, ಅವರು ಕಸಿದುಕೊಳ್ಳಲು ಬಯಸಿರಲಿಲ್ಲ. ಮನುಷ್ಯನಾಗಿ ಹುಟ್ಟಿದವರು ಹೇಗೆ ಬದುಕಬಹುದು ಎಂದು ತೋರಿಸುವ ಮೂಲಕ ಇಡೀ ಮಾನವ ಕುಲಕ್ಕೆ ಆದರ್ಶರಾದರು.

ಕಾನೂನು ತಜ್ಞರಾಗಿ ಸಮಾಜ ಸುಧಾರಕರಾಗಿ ಅರ್ಥ ಶಾಸ್ತ್ರಜ್ಞರಾಗಿ, ಪತ್ರಕರ್ತರಾಗಿ, ತತ್ವಜ್ಞಾನಿಯಾಗಿ, ಸಾಹಿತಿಯಾಗಿ ತಮ್ಮ ಇರುವಿಕೆಯನ್ನು ತೋರ್ಪಡಿಸಿದರು. ಹಾಗಾಗಿ ಅವರ ಹೆಸರೇ ನಮಗೆಲ್ಲಾ ಸ್ಪೂರ್ತಿ, ಸಾಧನೆಗೆ ಪ್ರೇರಣೆ, ಅವರ ಬದುಕು ತತ್ವ ಆದರ್ಶಗಳು ನಮ್ಮೆಲ್ಲರ ಪಾಲಿಗೆ ಸರ್ವಕಾಲಿಕ ಮಾರ್ಗದರ್ಶಕ. ಸಮಾನತೆಯಿಂದಲೆ ಪ್ರಗತಿ ಎನ್ನುವುದು ಅವರ ಪರಮೋಚ್ಚ ನಂಬಿಕೆಯಾಗಿತ್ತು ಎಂದರು.

ಅಂಬೇಡ್ಕರ್ ಅವರ ಕನಸಿನಂತೆ, ಎಲ್ಲಾ ಹಂತಗಳಲ್ಲಿಯೂ ಶಿಕ್ಷಣ-ಸಮಾನತೆಯನ್ನು ನೀಡುವಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಕಂಕಣ ಬದ್ಧವಾಗಿದೆ. ಅಂಬೇಡ್ಕರ್ ಜಯಂತಿ ಎನ್ನುವುದು ಕೇವಲ ಪುಷ್ಪಾರ್ಚನೆಗೆ ಸೀಮಿತವಾಗಬಾರದು.

ಇದು ಪ್ರತಿಜ್ಞಾ ದಿನವಾಗಬೇಕು, ನಾವು ಜಾತಿಯ ಹೆಸರಿನಲ್ಲಿ ನಡೆಯುವ ಯಾವುದೇ ಹಿಂಸೆಯನ್ನು ವಿರೋಧಿಸೋಣ. ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ, ಮಹಿಳೆಯರಿಗೆ ಗೌರವ, ದಲಿತರಿಗೆ ಸವಲತ್ತು, ಪರಿಶ್ರಮಿಕರಿಗೆ ಪರಿಗಣನೆ, ಎಲ್ಲ ವರ್ಗದ ಜನತೆಗೆ ಸನ್ಮಾನ, ಈ ಎಲ್ಲವನ್ನು ನಾವು ಕಲ್ಪಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಆಶಿಸಿದರು.

Also Read: ಬೇಸಿಗೆಯಲ್ಲಿ ತ್ವಚೆಯ ಕಾಂತಿ ಹೆಚ್ಚಾಗಲು ಮಲಗುವ ಮೊದಲು ಇವೆರಡನ್ನು ಮುಖಕ್ಕೆ ಹಚ್ಚಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, 1927 ರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಧೃಢ ನಿರ್ಧಾರ ಕೈಗೊಂಡು ಮನಸ್ಮøತಿ ಎನ್ನುವ ಅಲಿಖಿತ ಸಂವಿಧಾನವನ್ನು ಸುಟ್ಟು ಹಾಕಿದರು. ವಿದ್ಯಾಭ್ಯಾಸದಿಂದ ಅಂಬೇಡ್ಕರ್ ಗಳಿಸಿದ ವಿದ್ವತ್ ಇಂತಹ ಧೃಡ ನಿರ್ಧಾರ ಕೈಗೊಳ್ಳಲು ಕಾರಣವಾಯಿತು. ಬಹಳಷ್ಟು ಜನರು ಇದನ್ನು ವಿರೋಧಿಸಿದರು.

ದೇಶದ ಸಂವಿಧಾನ ರಚನೆ ಮಾಡಿ, ದೇಶದಲ್ಲಿ ಜಾರಿಯಾದ ಮೇಲೂ ಅಂಬೇಡ್ಕರ್ ರಚಿಸಿದ ಸಂವಿಧಾನ ಒಪ್ಪದಂತೆ ವಿರೋಧಿಸಿ ಅಂದಿನ ಕಾಲದಲ್ಲಿ ಚಳುವಳಿಯನ್ನು ಸಹ ನಡೆಸಲಾಯಿತು. ಇಂದಿಗೂ ಸಂವಿಧಾನವನ್ನು ಬದಲಾವಣೆ ಮಾಡುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ.

ಸಂವಿಧಾನವನ್ನು ರಕ್ಷಿಸಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಸಂವಿಧಾನ ರಚಿಸಿ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದವರು ಡಾ.ಬಿ.ಆರ್.ಅಂಬೇಡ್ಕರ್, ದೇಶದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ರಾಜಯಕೀಯ ಸಮಾನತೆ ಮೂಡಬೇಕು ಎನ್ನುವುದು ಅವರ ಆಶಯವಾಗಿತ್ತು. ಇಂದು ಮಹಿಳೆಯರಿಗೆ ಸ್ವಾತಂತ್ರ್ಯ ದೊರಕಲು ಬಾಬಾ ಸಾಹೇಬ್ ಅಂಬೇಡ್ಕರ್ ಕಾರಣವಾಗಿದ್ದಾರೆ.

ಭಾರತ ದೇಶ ಇಂದು ಆಧುನಿಕವಾಗಿ ಪ್ರಗತಿ ಹೊಂದಲು ಅಂಬೇಡ್ಕರ್ ಅವರ ಕೊಡುಗೆ ಮಹತ್ವÀದ್ದಾಗಿದೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಗುತ್ತಿಗೆಯಲ್ಲೂ ಮೀಸಲಾತಿ ನೀಡಿದೆ. ಅಂಬೇಡ್ಕರ್ ಅವರ ಆಶಯ ಈಡೇರಿಸುವಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

Also Read: ಹೆರಿಗೆಯ ನಂತರ ನಿಮ್ಮ ಗರ್ಭಾಶಯ ಜಾರುತ್ತಿದೆಯೇ? ಹಾಗಾದ್ರೆ ಈ ಸಲಹೆ ಪಾಲಿಸಿರಿ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಚಳ್ಳಕೆರೆ ಕೋಟೆ ಬೋರಮ್ಮ ಪಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಸಂಜೀವ್ ಕುಮಾರ್ ಪೋತೆ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ರಂಗಮಂದಿರದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ ಸೇರಿದಂತೆ ಎಲ್ಲ ಗಣ್ಯಮಾನ್ಯರು ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಡಾ. ಅಂಬೇಡ್ಕರ್ ಜಯಂತಿ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಇದೇ ಸಂದರ್ಭದಲ್ಲಿ ಬೋಧಿಸಿದರು.

ವಿವಿಧ ಸಂಘಟನೆಗಳ ಮೂಲಕ ಸಮಾಜದ ಏಳಿಗೆಗಾಗಿ ಹೋರಾಟ ನಡೆಸಿ, ಜನಸೇವೆಗೈದ ಪರಿಶಿಷ್ಟ ಜಾತಿಯ ವಿವಿಧ ಮುಖಂಡರುಗಳನ್ನು ಇದೇ ಸಂದರ್ಭEducationದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Also Read: ಒಳಮೀಸಲಾತಿ ಸಿಗುವವರೆಗೆ ಜನ್ಮ ದಿನಾಚರಣೆ ಇಲ್ಲ | ಎಚ್.ಆಂಜನೇಯ

ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್, ನಗರಸಭೆ ಪೌರಾಯುಕ್ತೆ ರೇಣುಕಾ, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಲಿಡ್ಕರ್ ಮಾಜಿ ಅಧ್ಯಕ್ಷ ಶಂಕರ್, ಮುಖಂಡರುಗಳಾದ ರಾಜಣ್ಣ, ನಿರಂಜನಮೂರ್ತಿ, ಬಾಳೆಕಾಯಿ ಶ್ರೀನಿವಾಸ್, ಸಿ.ಹೆಚ್. ಮಂಜುನಾಥ್, ತಿಪ್ಪೇಸ್ವಾಮಿ, ಹೆಚ್. ಮಹಾಂತೇಶ್, ಕೆ.ಟಿ. ಶಿವಕುಮಾರ್, ವೈ. ರಾಜಣ್ಣ ತುರುವನೂರು, ಎಂ. ಶಿವಮೂರ್ತಿ, ಪಾಂಡುರಂಗಪ್ಪ, ಕೈನಡು ಚಂದ್ರಣ್ಣ, ನಾಗಭೂಷಣ್, ನರಸಿಂಹರಾಜು, ಸೋಮಶೇಖರ್, ಸಮೀವುಲ್ಲಾ ಮುಂತಾದವರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ambedkarChitradurgaChitradurga newsChitradurga UpdatesConstitutionEducationjayantiKannada Latest NewsKannada NewsMinister D. SudhakarOrganizationಅಂಬೇಡ್ಕರ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಯಂತಿಶಿಕ್ಷಣಸಂಘಟನೆಸಚಿವ ಡಿ.ಸುಧಾಕರ್‌ಸಂವಿಧಾನ
Share This Article
Facebook Email Print
Previous Article ಮಲ್ಲಾಡಿಹಳ್ಳಿಯ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 6 ರ‍್ಯಾಂಕ್
Next Article ಸಂವಿಧಾನದಿಂದ ಎಲ್ಲರಿಗೂ ಸಮಾನ ಅವಕಾಶ | ಕೆ.ಎಸ್.ನವೀನ್
Leave a Comment

Leave a Reply Cancel reply

Your email address will not be published. Required fields are marked *

ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ
ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up