By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    7 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    7 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    10 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    20 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    19 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    21 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    19 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    21 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಮಂತ್ರ | ಸಚಿವ ಡಿ.ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಮಂತ್ರ | ಸಚಿವ ಡಿ.ಸುಧಾಕರ್

News Desk Chitradurga News
Last updated: 14 April 2025 17:30
News Desk Chitradurga News
1 year ago
Share
ಡಾ.ಅಂಬೇಡ್ಕರ್ ಜಯಂತಿ
SHARE

CHITRADURGA NEWS | 14 APRIL 2025

ಚಿತ್ರದುರ್ಗ: ಡಾ.ಅಂಬೇಡ್ಕರ್ ಅವರ ಶಿಕ್ಷಣ-ಸಂಘಟನೆ-ಹೋರಾಟ ಎಂಬ ಮೂರು ಸಿದ್ಧಾಂತಗಳನ್ನು ನಾವೆಲ್ಲರೂ ಪಾಲಿಸಬೇಕಾದ ಜೀವನದ ಮಂತ್ರವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಹೇಳಿದರು.

Also Read: ಮಲ್ಲಾಡಿಹಳ್ಳಿಯ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 6 ರ‍್ಯಾಂಕ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ತ.ರಾ.ಸು. ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಲಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದಿಂದ ಜ್ಞಾನ, ಹೋರಾಟದಿಂದ ಹಕ್ಕುಗಳು, ಸಂಘಟನೆಯಿಂದ ಶಕ್ತಿ ಪಡೆದುಕೊಳ್ಳುವ ಮಾರ್ಗದಲ್ಲಿ ನಡೆಯುವುದು ನವ ಭಾರತ ನಿರ್ಮಾಣದ ಪ್ರಥಮ ಹೆಜ್ಜೆಯಾಗಿದೆ.

ಡಾ. ಅಂಬೇಡ್ಕರ್ ಅವರು ಕೇವಲ ಸಮಾಜಸೇವಕರಲ್ಲ, ಅವರು ಭಾರತದ ಪುನರ್ ನಿರ್ಮಾಣಕ್ಕೆ ಕೊಡುಗೆ ನೀಡಿದ ಮಹಾತ್ಮ. ಶೋಷಿತರಿಗೆ ಧೈರ್ಯ, ಶಿಕ್ಷಣ, ಆತ್ಮಗೌರವ ಮತ್ತು ನ್ಯಾಯದ ಮಾರ್ಗವನ್ನು ತೋರಿದ ದಾರಿದೀಪ. ಅವರ ಜೀವನದ ಪ್ರಮುಖ ಕೊಂಡಿಯಾಗಿದ್ದು ಭಾರತದ ಸಂವಿಧಾನ. ಅವರು ಅಧ್ಯಕ್ಷರಾಗಿದ್ದ ಕರಡು ಸಮಿತಿಯ ಮಾರ್ಗದರ್ಶನದಲ್ಲಿ ರೂಪುಗೊಂಡ ನಮ್ಮ ಸಂವಿಧಾನವು ಸಮಾನತೆ, ಧರ್ಮನಿರಪೇಕ್ಷತೆ, ಸಾಮಾಜಿಕ ನ್ಯಾಯ ಮತ್ತು ವ್ಯಕ್ತಿಗತ ಹಕ್ಕುಗಳನ್ನು ನಮ್ಮೆಲ್ಲರಿಗೂ ನೀಡುವ ಪವಿತ್ರ ಗ್ರಂಥವಾಗಿದೆ.

Also Read: ನಿವೃತ್ತ ಇಂಜಿನಿಯರ್ ಕೆ.ಸಿ.ನಿಂಗಪ್ಪ ನಿಧನ

12ನೇ ಶತಮಾನದಲ್ಲಿ ಈ ಭೂಮಿಯಲ್ಲಿ ಸಮಾನತೆಯ ಸಂದೇಶ ಸಾರಿ ಹೋಗಿದ್ದ ಮಹಾ ಮಾನವತಾವಾದಿ ಬಸವಣ್ಣ ಮತ್ತು 20ನೆಯ ಶತಮಾನದಲ್ಲಿ ಅದೇ ಸಂದೇಶವನ್ನು ಜಾರಿಗೊಳಿಸಿದ ಡಾ|| ಬಾಬಾ ಸಾಹೇಬ ಅಂಬೇಡ್ಕರ್ ಇಬ್ಬರಲ್ಲೂ ಹಲವು ಸಾಮ್ಯತೆಗಳು ಕಾಣುತ್ತವೆ.

ಇಬ್ಬರದು ಧ್ಯೆಯ, ಉದ್ದೇಶ ಒಂದೇ ಆಗಿತ್ತು, ಸಮಾಜದಲ್ಲಿ ಮೇಲು, ಕೀಳು ಎನ್ನುವ ಭಾವನೆ ಇರಬಾರದು, ಎಲ್ಲರಿಗೂ ಬದುಕಿನ ಹಕ್ಕು ಸಮಾನವಾಗಿ ಸಿಗಬೇಕು. ನೈಸರ್ಗಿಕ ಸಂಪನ್ಮೂಲಗಳ ಬಳಕೆಗೆ ಸಮಾನ ಅಧಿಕಾರವಿರಬೇಕು, ಎಲ್ಲಾ ಹಕ್ಕುಗಳು ಸಮಾನವಿರಬೇಕು ಎನ್ನುವ ಉದ್ದೇಶದೊಂದಿಗೆ ಅರಿವಿನ ಸಮಾಜ ನಿರ್ಮಿಸಿ, ಹೊಸ ಬೆಳಕನ್ನು ಕಾಣುವ ಹೊಸ ಕನಸು ಹೊತ್ತವರು ಡಾ. ಅಂಬೇಡ್ಕರ್ ಅವರು ಎಂದರು.

ಸಮಾಜದಲ್ಲಿನ ಅಸಮಾನತೆಗಾಗಿ ಅಂಬೇಡ್ಕರ್ ಅವರಿಗೆ ಬಹಳ ದೊಡ್ಡಮಟ್ಟದ ಅಸಮಾಧಾನವಿತ್ತು, ಆದರೆ ಅದಕ್ಕಾಗಿ ಅವರೆಂದೂ ತಾಳ್ಮೆ ಕಳೆದುಕೊಳ್ಳಲಿಲ್ಲ. ಅಹಿಂಸೆಯ ಮಾರ್ಗ ತುಳಿಯಲಿಲ್ಲ ಅತ್ಯಂತ ಸಮಾಧಾನದಿಂದಲೇ ಅರಿವು ಮೂಡಿಸಲು ಪ್ರಯತ್ನಿಸಿದರು, ಅದೇ ತತ್ವದ ಆಧಾರದ ಮೇಲೆ ಸಂವಿಧಾನವನ್ನು ರಚಿಸಿದರು.

Also Read: ನಿಮ್ಮ ಮಗುವಿಗೆ ಆಟಿಸಂ ಸಮಸ್ಯೆ ಇದೇ ಎಂಬುದನ್ನು ಈ ಲಕ್ಷಣಗಳ ಮೂಲಕ ತಿಳಿದುಕೊಳ್ಳಿ

ಅವರ ಜೀವಿತದುದ್ದಕ್ಕೂ ಯಾರನ್ನೂ ದ್ವೇಷಿಸಲಿಲ್ಲ, ಯಾರ ಹಕ್ಕುಗಳನ್ನು ಅಧಿಕಾರವನ್ನು, ಅವರು ಕಸಿದುಕೊಳ್ಳಲು ಬಯಸಿರಲಿಲ್ಲ. ಮನುಷ್ಯನಾಗಿ ಹುಟ್ಟಿದವರು ಹೇಗೆ ಬದುಕಬಹುದು ಎಂದು ತೋರಿಸುವ ಮೂಲಕ ಇಡೀ ಮಾನವ ಕುಲಕ್ಕೆ ಆದರ್ಶರಾದರು.

ಕಾನೂನು ತಜ್ಞರಾಗಿ ಸಮಾಜ ಸುಧಾರಕರಾಗಿ ಅರ್ಥ ಶಾಸ್ತ್ರಜ್ಞರಾಗಿ, ಪತ್ರಕರ್ತರಾಗಿ, ತತ್ವಜ್ಞಾನಿಯಾಗಿ, ಸಾಹಿತಿಯಾಗಿ ತಮ್ಮ ಇರುವಿಕೆಯನ್ನು ತೋರ್ಪಡಿಸಿದರು. ಹಾಗಾಗಿ ಅವರ ಹೆಸರೇ ನಮಗೆಲ್ಲಾ ಸ್ಪೂರ್ತಿ, ಸಾಧನೆಗೆ ಪ್ರೇರಣೆ, ಅವರ ಬದುಕು ತತ್ವ ಆದರ್ಶಗಳು ನಮ್ಮೆಲ್ಲರ ಪಾಲಿಗೆ ಸರ್ವಕಾಲಿಕ ಮಾರ್ಗದರ್ಶಕ. ಸಮಾನತೆಯಿಂದಲೆ ಪ್ರಗತಿ ಎನ್ನುವುದು ಅವರ ಪರಮೋಚ್ಚ ನಂಬಿಕೆಯಾಗಿತ್ತು ಎಂದರು.

ಅಂಬೇಡ್ಕರ್ ಅವರ ಕನಸಿನಂತೆ, ಎಲ್ಲಾ ಹಂತಗಳಲ್ಲಿಯೂ ಶಿಕ್ಷಣ-ಸಮಾನತೆಯನ್ನು ನೀಡುವಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಕಂಕಣ ಬದ್ಧವಾಗಿದೆ. ಅಂಬೇಡ್ಕರ್ ಜಯಂತಿ ಎನ್ನುವುದು ಕೇವಲ ಪುಷ್ಪಾರ್ಚನೆಗೆ ಸೀಮಿತವಾಗಬಾರದು.

ಇದು ಪ್ರತಿಜ್ಞಾ ದಿನವಾಗಬೇಕು, ನಾವು ಜಾತಿಯ ಹೆಸರಿನಲ್ಲಿ ನಡೆಯುವ ಯಾವುದೇ ಹಿಂಸೆಯನ್ನು ವಿರೋಧಿಸೋಣ. ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ, ಮಹಿಳೆಯರಿಗೆ ಗೌರವ, ದಲಿತರಿಗೆ ಸವಲತ್ತು, ಪರಿಶ್ರಮಿಕರಿಗೆ ಪರಿಗಣನೆ, ಎಲ್ಲ ವರ್ಗದ ಜನತೆಗೆ ಸನ್ಮಾನ, ಈ ಎಲ್ಲವನ್ನು ನಾವು ಕಲ್ಪಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಆಶಿಸಿದರು.

Also Read: ಬೇಸಿಗೆಯಲ್ಲಿ ತ್ವಚೆಯ ಕಾಂತಿ ಹೆಚ್ಚಾಗಲು ಮಲಗುವ ಮೊದಲು ಇವೆರಡನ್ನು ಮುಖಕ್ಕೆ ಹಚ್ಚಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, 1927 ರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಧೃಢ ನಿರ್ಧಾರ ಕೈಗೊಂಡು ಮನಸ್ಮøತಿ ಎನ್ನುವ ಅಲಿಖಿತ ಸಂವಿಧಾನವನ್ನು ಸುಟ್ಟು ಹಾಕಿದರು. ವಿದ್ಯಾಭ್ಯಾಸದಿಂದ ಅಂಬೇಡ್ಕರ್ ಗಳಿಸಿದ ವಿದ್ವತ್ ಇಂತಹ ಧೃಡ ನಿರ್ಧಾರ ಕೈಗೊಳ್ಳಲು ಕಾರಣವಾಯಿತು. ಬಹಳಷ್ಟು ಜನರು ಇದನ್ನು ವಿರೋಧಿಸಿದರು.

ದೇಶದ ಸಂವಿಧಾನ ರಚನೆ ಮಾಡಿ, ದೇಶದಲ್ಲಿ ಜಾರಿಯಾದ ಮೇಲೂ ಅಂಬೇಡ್ಕರ್ ರಚಿಸಿದ ಸಂವಿಧಾನ ಒಪ್ಪದಂತೆ ವಿರೋಧಿಸಿ ಅಂದಿನ ಕಾಲದಲ್ಲಿ ಚಳುವಳಿಯನ್ನು ಸಹ ನಡೆಸಲಾಯಿತು. ಇಂದಿಗೂ ಸಂವಿಧಾನವನ್ನು ಬದಲಾವಣೆ ಮಾಡುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ.

ಸಂವಿಧಾನವನ್ನು ರಕ್ಷಿಸಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಸಂವಿಧಾನ ರಚಿಸಿ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದವರು ಡಾ.ಬಿ.ಆರ್.ಅಂಬೇಡ್ಕರ್, ದೇಶದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ರಾಜಯಕೀಯ ಸಮಾನತೆ ಮೂಡಬೇಕು ಎನ್ನುವುದು ಅವರ ಆಶಯವಾಗಿತ್ತು. ಇಂದು ಮಹಿಳೆಯರಿಗೆ ಸ್ವಾತಂತ್ರ್ಯ ದೊರಕಲು ಬಾಬಾ ಸಾಹೇಬ್ ಅಂಬೇಡ್ಕರ್ ಕಾರಣವಾಗಿದ್ದಾರೆ.

ಭಾರತ ದೇಶ ಇಂದು ಆಧುನಿಕವಾಗಿ ಪ್ರಗತಿ ಹೊಂದಲು ಅಂಬೇಡ್ಕರ್ ಅವರ ಕೊಡುಗೆ ಮಹತ್ವÀದ್ದಾಗಿದೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಗುತ್ತಿಗೆಯಲ್ಲೂ ಮೀಸಲಾತಿ ನೀಡಿದೆ. ಅಂಬೇಡ್ಕರ್ ಅವರ ಆಶಯ ಈಡೇರಿಸುವಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

Also Read: ಹೆರಿಗೆಯ ನಂತರ ನಿಮ್ಮ ಗರ್ಭಾಶಯ ಜಾರುತ್ತಿದೆಯೇ? ಹಾಗಾದ್ರೆ ಈ ಸಲಹೆ ಪಾಲಿಸಿರಿ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಚಳ್ಳಕೆರೆ ಕೋಟೆ ಬೋರಮ್ಮ ಪಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಸಂಜೀವ್ ಕುಮಾರ್ ಪೋತೆ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ರಂಗಮಂದಿರದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ ಸೇರಿದಂತೆ ಎಲ್ಲ ಗಣ್ಯಮಾನ್ಯರು ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಡಾ. ಅಂಬೇಡ್ಕರ್ ಜಯಂತಿ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಇದೇ ಸಂದರ್ಭದಲ್ಲಿ ಬೋಧಿಸಿದರು.

ವಿವಿಧ ಸಂಘಟನೆಗಳ ಮೂಲಕ ಸಮಾಜದ ಏಳಿಗೆಗಾಗಿ ಹೋರಾಟ ನಡೆಸಿ, ಜನಸೇವೆಗೈದ ಪರಿಶಿಷ್ಟ ಜಾತಿಯ ವಿವಿಧ ಮುಖಂಡರುಗಳನ್ನು ಇದೇ ಸಂದರ್ಭEducationದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Also Read: ಒಳಮೀಸಲಾತಿ ಸಿಗುವವರೆಗೆ ಜನ್ಮ ದಿನಾಚರಣೆ ಇಲ್ಲ | ಎಚ್.ಆಂಜನೇಯ

ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್, ನಗರಸಭೆ ಪೌರಾಯುಕ್ತೆ ರೇಣುಕಾ, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಲಿಡ್ಕರ್ ಮಾಜಿ ಅಧ್ಯಕ್ಷ ಶಂಕರ್, ಮುಖಂಡರುಗಳಾದ ರಾಜಣ್ಣ, ನಿರಂಜನಮೂರ್ತಿ, ಬಾಳೆಕಾಯಿ ಶ್ರೀನಿವಾಸ್, ಸಿ.ಹೆಚ್. ಮಂಜುನಾಥ್, ತಿಪ್ಪೇಸ್ವಾಮಿ, ಹೆಚ್. ಮಹಾಂತೇಶ್, ಕೆ.ಟಿ. ಶಿವಕುಮಾರ್, ವೈ. ರಾಜಣ್ಣ ತುರುವನೂರು, ಎಂ. ಶಿವಮೂರ್ತಿ, ಪಾಂಡುರಂಗಪ್ಪ, ಕೈನಡು ಚಂದ್ರಣ್ಣ, ನಾಗಭೂಷಣ್, ನರಸಿಂಹರಾಜು, ಸೋಮಶೇಖರ್, ಸಮೀವುಲ್ಲಾ ಮುಂತಾದವರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ambedkarChitradurgaChitradurga newsChitradurga UpdatesConstitutionEducationjayantiKannada Latest NewsKannada NewsMinister D. SudhakarOrganizationಅಂಬೇಡ್ಕರ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಯಂತಿಶಿಕ್ಷಣಸಂಘಟನೆಸಚಿವ ಡಿ.ಸುಧಾಕರ್‌ಸಂವಿಧಾನ
Share This Article
Facebook Email Print
Previous Article ಮಲ್ಲಾಡಿಹಳ್ಳಿಯ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 6 ರ‍್ಯಾಂಕ್
Next Article ಸಂವಿಧಾನದಿಂದ ಎಲ್ಲರಿಗೂ ಸಮಾನ ಅವಕಾಶ | ಕೆ.ಎಸ್.ನವೀನ್
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up