CHITRADURGA NEWS | 23 AUGUST 2024
ಚಿತ್ರದುರ್ಗ: ಅಖಿಲ ಭಾರತ ವೀರಶೈವ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ಚುನಾವಣೆ ಆ. 25ರಂದು ನಡೆಯಲಿದೆ.
ಚಿತ್ರದುರ್ಗ ನಗರದ ರೋಟರಿ ಬಾಲ ಭವನದಲ್ಲಿ ಮತದಾನ ಕೇಂದ್ರ ತೆರೆಯಲಾಗಿದೆ. ಆ.25 (ಭಾನುವಾರ) ರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ಮತದಾರರು ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಕಾರ್ಯಕಾರಿ ಸಮಿತಿಯ 27 ಸ್ಥಾನಗಳಿಗೆ, ರಾಜ್ಯದ ವಿವಿಧ ಜಿಲ್ಲೆಗಳಿಂದ 57 ಮಂದಿ ಸ್ಪರ್ಧಿಸಿದ್ದಾರೆ. ಒಬ್ಬ ಮತದಾರ ಗರಿಷ್ಠ 27 ಅಭ್ಯರ್ಥಿಗಳಿಗೆ ಮತ ಚಲಾಯಿಸುವ ಅವಕಾಶವಿದೆ. ಸದಸ್ಯರು ಮತದಾನಕ್ಕೆ ಬರುವಾಗ ಕಡ್ಡಾಯವಾಗಿ ಫೋಟೊ ಗುರುತಿನ ಪತ್ರದೊಂದಿಗೆ ಬರುವಂತೆ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಪ್ರವಾಸಿಗರ ಗಮನಕ್ಕೆ; ದುಬಾರಿಯಾಗಿದೆ ಜೋಗ ಜಲಪಾತ ವೀಕ್ಷಣೆ | ಗಂಟೆ ಲೆಕ್ಕದಲ್ಲಿ ಶುಲ್ಕ ನಿಗದಿ
ಮತದಾನದ ನಂತರ ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಎಲ್ಲಾ ಜಿಲ್ಲೆಗಳ ಮತಗಳನ್ನು ಕ್ರೋಡೀಕರಿಸಿ ಬೆಂಗಳೂರು ಮಹಾಸಭಾ ಕೇಂದ್ರ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಘಟಕ ಅಧ್ಯಕ್ಷ ಮಹಡಿ ಶಿವಮೂರ್ತಿ (9448122555) ಹಾಗೂ ಚುನಾವಣಾ ಅಧಿಕಾರಿ ಟಿ.ಪಿ.ಜ್ಞಾನ ಮೂರ್ತಿ (944974004) ಸಂಪರ್ಕಿಸಬಹುದಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
