ಚಿತ್ರದುರ್ಗ ನ್ಯೂಸ್.ಕಾಂ: ಬೇಸಿಗೆಯಲ್ಲಿ ರೈತರಿಗರ ವಿದ್ಯುತ್ ಅಭಾವ ತಲೆದೂರಬಾರದು ಎನ್ನುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಂತರವಾಗಿ 5 ಗಂಟೆಗಳ ಕಾಲ ಹಗಲು ಹೊತ್ತಿನಲ್ಲಿ ವಿದ್ಯುತ್ ಸರಬರಾಜು ಮಾಡಲು ಬೆಸ್ಕಾಂ ಸೇರಿದಂತೆ ಎಲ್ಲ ಎಸ್ಕಾಂಗಳಿಗೆ ಸೂಚನೆ ನೀಡಿದ್ದರು.
ಆದರೆ, ಈ ಆದೇಶ ಕೆಲ ರೈತರಿಗೆ ಅನುಕೂಲವಾಗಿದ್ದರೆ, ಇನ್ನೂ ಕೆಲ ರೈತರಿಗೆ ಸಂಕಷ್ಟ ತಂದೊಡ್ಡಿತ್ತು. ಈ ವರ್ಷ ಮಳೆಯ ಅಭಾವದ ಕಾರಣಕ್ಕೆ ಬಹುತೇಕ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗಿದೆ. ಈ ಕಾರಣಕ್ಕೆ ನಿರಂತರವಾಗಿ 5 ತಾಸು ವಿದ್ಯುತ್ ನೀಡುವ ಬದಲು ಎರಡು ಶಿಫ್ಟ್ಗಳಲ್ಲಿ (shift) ನೀಡುವಂತೆ ಅಲ್ಲಲ್ಲಿ ಒತ್ತಾಯ ಕೇಳಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ಬೆಸ್ಕಾಂ ದಾವಣಗೆರೆ ವಲಯದ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್ ಹಾಗೂ ಚಿತ್ರದುರ್ಗ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮತ್ತಿತರೆ ಅಧಿಕಾರಿಗಳು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭೇಟಿ ಮಾಡಿ ಚರ್ಚಿಸಿದ್ದಾರೆ.
ಇದನ್ನೂ ಓದಿ: ವಿಜಯದಶಮಿ ದಿನ ಜಯಲಕ್ಷ್ಮೀ ಬಡಾವಣೆ ಗಲಾಟೆ
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 375 ಕೃಷಿ ಪಂಪ್ಸೆಟ್ ಮಾರ್ಗಗಳಿದ್ದು, ಸದರಿ ಮಾರ್ಗಗಳಿಗೆ 5 ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸಚಿವರಾದ ಡಿ.ಸುಧಾಕರ್, ಶಾಸಕರು ಹಾಗೂ ರೈತ ಮುಖಂಡರ ಜೊತೆಗೆ ಚರ್ಚೆ ನಡೆಸಲಾಗಿದೆ.
ಈ ವೇಳೆ ರೈತರ ಬೇಡಿಕೆಗೆ ಅನುಗುಣವಾಗಿ ಪ್ರತಿ ದಿನ ನಿರಂತರವಾಗಿ 5 ತಾಸು ಅಥವಾ ಹಗಲು ಹೊತ್ತಿನಲ್ಲಿ 3 ಗಂಟೆ, ರಾತ್ರಿ ವೇಳೆ 2 ಗಂಟೆಗಳಂತೆ ಪ್ರತಿ ದಿನ 5 ಗಂಟೆ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಮಾಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಿರಂತರ 5 ಗಂಟೆಗಳ ಕಾಲ ವಿದ್ಯುತ್ ನೀಡಿದರೆ ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿ ಮೋಟಾರ್ಗಳು ಸುಟ್ಟು ಹಾಳಾಗುವ ಬಗ್ಗೆ ರೈತರು ಆತಂಕ ವ್ಯಕ್ತಪಡಿಸಿದ್ದರು. ಬೆಸ್ಕಾಂ ತೆಗೆದುಕೊಂಡಿರುವ ಈ ನಿರ್ಧಾರದಿಂದಾಗಿ ರೈತರು ನಿಟ್ಟುಸಿರುವ ಬಿಡುವಂತಾಗಿದೆ ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number