
CHITRADURGA NEWS | 05 JUNE 2026
ಚಿತ್ರದುರ್ಗ: ಪರಿಸರ ಉಳಿಸಿ ಬೆಳೆಸುವುದೇ ನಾವು ಮುಂದಿನ ಪೀಳಿಗೆಗೆ ಕೊಡುವ ಅತ್ಯುತ್ತಮ ಕೊಡುಗೆಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯನ್ನು ತಮ್ಮ ಆದ್ಯ ಕರ್ತವ್ಯವನ್ನಾಗಿ ಮಾಡಿಕೊಳ್ಳಬೇಕು ಎಂದು ಕೂನಬೇವು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಹನುಮಂತಪ್ಪ ತಿಳಿಸಿದರು.
ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ ಯಶಸ್ವಿ 12 ವರ್ಷ | ಚಂದ್ರವಳ್ಳಿ ಬಳಿ ಸ್ವಚ್ಛತೆ ಮಾಡಿದ ಬಿಜೆಪಿ ಕಾರ್ಯಕರ್ತರು
ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು.
ಭವಿಷ್ಯದಲ್ಲಿ ಎದುರಾಗಬಹುದಾದ ಮಳೆಯ ಅಭಾವ, ಆಮ್ಲಜನಕದ ಕೊರತೆ ಹಾಗೂ ಹೆಚ್ಚುತ್ತಿರುವ ಜಾಗತಿಕ ತಾಪಮಾನದಂತಹ ಜ್ವಲಂತ ಸಮಸ್ಯೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಬೆಳೆಸುವುದೊಂದೇ ಏಕೈಕ ಪರಿಹಾರವಾಗಿದೆ. ಪ್ರಧಾನಮಂತ್ರಿಗಳ ಆಶಯದಂತೆ ಪ್ರತಿಯೊಬ್ಬ ವಿದ್ಯಾರ್ಥಿಯೂ ‘ಅಮ್ಮನ ಹೆಸರಿನಲ್ಲಿ ಒಂದು ಮರ’ವನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಕೂನಬೇವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಧನಂಜಯ ರೆಡ್ಡಿ ಮಾತನಾಡಿ, ಉತ್ತಮವಾದ ಪರಿಸರದಿಂದ ಮಾತ್ರ ಉತ್ತಮ ಆರೋಗ್ಯ ಸಾಧ್ಯ. ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಮುಂದೆ ಸಂಭವಿಸಬಹುದಾದ ಭೀಕರ ಬರಗಾಲ ಹಾಗೂ ತಾಪಮಾನ ಏರಿಕೆಯನ್ನು ತಡೆಗಟ್ಟಬಹುದು. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೇರಳೆ, ಬೇವು, ಹೊಂಗೆ ಸೇರಿದಂತೆ ಇನ್ನಿತರ ಉಪಯುಕ್ತ ಗಿಡಗಳನ್ನು ವಿತರಿಸಲಾಗುತ್ತಿದೆ ಎಂದರು.
ಇದನ್ನೂ ಓದಿ: ರೋಟರಿ ಕ್ಲಬ್ ವತಿಯಿಂದ ಹೊಲಿಗೆ ಯಂತ್ರಗಳ ವಿತರಣೆ
ಕಾರ್ಯಕ್ರಮದಲ್ಲಿ ಕೂನಬೇವು ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ, ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

