By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
    ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
    7 hours ago
    ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
    ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
    7 hours ago
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    19 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    22 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 day ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    57 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    8 hours ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    9 hours ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    1 day ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
Reading: Ettinhola Project: ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ | ಇದು ಡಿಕೆಶಿ ಬದ್ದತೆ ಇಚ್ಛಾಶಕ್ತಿಯ ಪ್ರತಿರೂಪ | ಇಲ್ಲಿದೆ ನೋಡಿ ಯೋಜನೆಯ ಕಂಪ್ಲೀಟ್‌ ಡಿಟೇಲ್ಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Ettinhola Project: ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ | ಇದು ಡಿಕೆಶಿ ಬದ್ದತೆ ಇಚ್ಛಾಶಕ್ತಿಯ ಪ್ರತಿರೂಪ | ಇಲ್ಲಿದೆ ನೋಡಿ ಯೋಜನೆಯ ಕಂಪ್ಲೀಟ್‌ ಡಿಟೇಲ್ಸ್

News Desk Chitradurga News
Last updated: 6 September 2024 07:56
News Desk Chitradurga News
2 years ago
Share
Ettinhola Project 5
ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ
SHARE

CHITRADURGA NEWS |06 SEPTEMBER 2024
ಚಿತ್ರದುರ್ಗ: ಬಯಲುಸೀಮೆ ಜನರ ದಶಕದ ಕನಸು ‘ಗೌರಿಹಬ್ಬ’ದಂದು ನನಸಾಗುತ್ತಿದೆ. ಇದು ಡಿಕೆಶಿ ಬದ್ದತೆ ಇಚ್ಛಾಶಕ್ತಿಯ ಪ್ರತಿರೂಪ. ಏಳು ಜಿಲ್ಲೆಗಳ 29 ತಾಲ್ಲೂಕಿನ 38 ಪಟ್ಟಣ ಪ್ರದೇಶ ಹಾಗೂ 6,657 ಗ್ರಾಮಗಳ 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ ನೀರುಣಿಸುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಇದಾಗಿದೆ. ಮೊದಲ ಹಂತದಲ್ಲಿ ಚಿತ್ರದುರ್ಗದ ಹಿರಿಯೂರಿನ ವಾಣಿವಿಲಾಸ ಜಲಾಶಯಕ್ಕೆ ಹರಿಯಲಿದೆ.

ಪಶ್ಚಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗಡಹಳ್ಳ, ಕೇರಿಹೊಳೆ ಹಳ್ಳಗಳಿಗೆ ಅಡ್ಡಲಾಗಿ ಎಂಟು ವಿಯರ್‌ಗಳನ್ನು (ತಡೆ) ಕಟ್ಟಿ ಮಳೆಗಾಲದಲ್ಲಿ ಪ್ರವಾಹದಿಂದ ಸಿಗುವ ನೀರಿನಲ್ಲಿ 24.11 ಟಿಎಂಸಿ ಅಡಿಯನ್ನು ಬರಪೀಡಿತ ಏಳು ಜಿಲ್ಲೆಗಳಿಗೆ ಹರಿಸುವ ಯೋಜನೆ ಇದಾಗಿದೆ.

ಪ್ರತಿ ವರ್ಷ ಜೂನ್‌ 15ರಿಂದ ಅಕ್ಟೋಬರ್‌ 15ರವರೆಗೆ (ಮಳೆಗಾಲದ ವ್ಯತ್ಯಾಸಕ್ಕೆ ಅನುಗುಣವಾಗಿ ವ್ಯತ್ಯಾಸವಾಗಲಿದೆ) ನಾಲ್ಕು ತಿಂಗಳು ಪೂರ್ವಾಭಿಮುಖ ವಾಗಿ ನೀರು ಹರಿಸಿ ಏಳು ಜಿಲ್ಲೆಗಳ 29 ತಾಲ್ಲೂಕಿನ 38 ಪಟ್ಟಣ ಪ್ರದೇಶ ಹಾಗೂ 6,657 ಗ್ರಾಮಗಳ 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ ನೀರು ಒದಗಿಸುವುದು ಯೋಜನೆಯ ಉದ್ದೇಶವಾಗಿದೆ.

ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 06 | ವ್ಯಾಪಾರ– ವ್ಯವಹಾರ ಸುಗಮ, ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ

ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನದಿಂದಲೇ ಎತ್ತಿನ ಹೊಳೆ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದರು. 2019 ರಲ್ಲಿ ಮತ್ತು ವರ್ಷದ ಹಿಂದೆ (23, ಆಗಸ್ಟ್‌ 2023) ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದ ಸ್ಥಳಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿದ್ದ ಅವರು ಅಲ್ಲಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಕಾಮಗಾರಿ ಪರಿಶೀಲಿಸುತ್ತಲೇ ಅವರು ನಿವಾರಣೆಗೂ ತಮ್ಮಲೇ ಕ್ರಿಯಾಯೋಜನೆಯನ್ನು ರೂಪಿಸಿಕೊಂಡಿದ್ದರು.

Ettinhola Project 1
ಎತ್ತಿನಹೊಳೆ ಯೋಜನೆ

2014 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಎತ್ತಿನ ಹೊಳೆ ಯೋಜನೆಗೆ ಚಾಲನೆ ನೀಡಿದ್ದರು. 2018– 19ರ ಸಮ್ಮಿಶ್ರ ಸರ್ಕಾರದ ವೇಳೆ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಸಭೆಗಳನ್ನು ನಡೆಸಿ, ಸ್ಥಳ ಭೇಟಿ ಕೈಗೊಂಡು ಯೋಜನೆಗೆ ವೇಗ ನೀಡುವ ಪ್ರಯತ್ನ ನಡೆಸಿದ್ದರು. ಬದಲಾದ ಕಾಲದಲ್ಲಿ ಯೋಜನೆಯ ತನ್ನ ವೇಗವನ್ನು ಕಳೆದುಕೊಂಡು 2021 ರ ಹೊತ್ತಿಗೆ ಏದುಸಿರು ಬಿಡುತ್ತಿತ್ತು. ಕುಂಟುತ್ತಾ ಸಾಗಿದ್ದ ಈ ಯೋಜನೆಗೆ ಮತ್ತೊಮ್ಮೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರುಗಳು ಇನ್ನಿಲ್ಲದ ವೇಗ ನೀಡಿದ್ದರು.

ಅದರಲ್ಲೂ ಎದುರಾದ ಸಮಸ್ಯೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ಆಯಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಅನುಮತಿ ಪಡೆದುಕೊಳ್ಳುವಲ್ಲಿಯೂ ಯಶಸ್ವಿಯಾಗಿದ್ದರು. ಇವುಗಳಿಗೆ ಕೆಲವೊಂದು ನಿರ್ದಶನಗಳು ಇಲ್ಲಿವೆ. 2021ರಲ್ಲಿ ಹೆಬ್ಬನಹಳ್ಳಿ ಸಬ್ ಸ್ಟೇಷನ್ ಪೂರ್ಣಗೊಂಡರೂ ಚಾರ್ಜಿಂಗ್ ಮಾಡಲು ಕೆಪಿಟಿಸಿಲ್‌ ನಿಂದ ನಿರಪೇಕ್ಷಣಾ ಪತ್ರ ಪಡೆಯಲು 3 ವರ್ಷಗಳಷ್ಟು ಕಾಲ ವಿಳಂಬವಾಗಿತ್ತು. ಇಂಧನ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿ ಈ ಯೋಜನೆಗೆ ಅಗತ್ಯ ಸಹಕಾರ ಪಡೆಯಲು ಯಶಸ್ವಿಯಾಗಿದ್ದರು. ಅದೇ ರೀತಿ, ಯೋಜನೆ ಮಾರ್ಗದಲ್ಲಿ ಬರುವ ಅರಣ್ಯ ಪ್ರದೇಶದ ಭೂಸ್ವಾಧೀನ ವಿಚಾರದಲ್ಲಿ ಉಂಟಾದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅರಣ್ಯ ಇಲಾಖೆ ಜತೆ ಸಮನ್ವಯತೆ ಸಾಧಿಸಿಸುವಲ್ಲಿ ಶಿವಕುಮಾರ್ ಅವರ ಪಾತ್ರ ಪ್ರಮುಖವಾಗಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಮೊದಲ ಹಂತದ ಏತ ಕಾಮಗಾರಿ ಪ್ಯಾಕೇಜ್-4ರ ಕಾಮಗಾರಿ ಕೆಲಸಕ್ಕೆ ಮೈಸೂರು ಮರ್ಕೆಂಟೈಲ್ ಕಂಪನಿ ಕಳೆದ ಐದು ವರ್ಷಗಳಿಂದಲೂ ಅಡ್ಡಿ ಪಡಿಸುತ್ತಿತ್ತು. ಜಲಸಂಪನ್ಮೂಲ ಸಚಿವರ ಸಂಧಾನದ ಮಾತುಕತೆ ಹಾಗೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಮೈಸೂರು ಮರ್ಕೆಂಟೈಲ್ ಕಂಪನಿಯ ಜಮೀನಿನಲ್ಲಿ ಪೈಪ್ ಅಳವಡಿಕೆ ಪೂರ್ಣಗೊಳಿಸಲಾಯಿತು.

ಅದೇ ರೀತಿ, ಮೊದಲ ಹಂತದ ಏತ ಕಾಮಗಾರಿಯ ಪ್ಯಾಕೇಜ್ 5ರ ಕೆಲಸಗಳಿಗೆ ಮೂರು ವರ್ಷಗಳಿಂದ ಅಡ್ಡಿಪಡಿಸುತ್ತಿದ್ದ ಕಾಡುಮನೆ ಎಸ್ಟೇಟ್ ಅವರ ಮನವೊಲಿಸಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇದ್ದ ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿ ಮುಂದುವರಿಯಲು ಪ್ರಮುಖ ಪಾತ್ರ ವಹಿಸಿದ್ದರು.

ಕ್ಲಿಕ್ ಮಾಡಿ ಓದಿ: ಸಿರಿಧಾನ್ಯ ‘ಸಾವೆ’ಗೆ ದರ ನಿಗದಿಗೊಳಿಸಿ | ಜಿಲ್ಲಾಡಳಿತಕ್ಕೆ ಅನ್ನದಾತರ ಡೆಡ್‌ ಲೈನ್‌

ಯೋಜನೆ ಹಂತ-2ರ ಗುರುತ್ವ ಕಾಲುವೆ ಕಾಮಗಾರಿಗೆ ಸಕಲೇಶಪುರ ತಾಲೂಕಿನ, ಬೆಳಗೂಡು ಹೋಬಳಿ ಮೂಗಲಿ ಗ್ರಾಮದ ಎಂ.ಪಿ. ಧೀರಜ್ ಬಿನ್ ಎಂ.ಪಿ ಪಾಲಾಕ್ಷರವರು ಅಡ್ಡಿಪಡಿಸಿದ್ದರು. ಇದರಿಂದ ಈ ಕಾಮಗಾರಿ 5 ವರ್ಷ ವಿಳಂಬವಾಗಿತ್ತು. ಈ ಸಮಸ್ಯೆಯನ್ನು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬಗೆಹರಿಸಿ ಕಾಮಗಾರಿಗೆ ವೇಗ ನೀಡಲಾಯಿತು. ಆಲೂರು ತಾಲ್ಲೂಕು, ಪಾಳ್ಯ ಗ್ರಾಮದ ಜನರು ಕಾಮಗಾರಿಗೆ ಅಡ್ಡಿಪಡಿಸಿದಾಗಲೂ ಶಿವಕುಮಾರ್ ಅವರ ಸಲಹೆ ಸೂಚನೆ ಮೇರೆಗೆ ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸಿ ಕಾಮಗಾರಿ ಪೂರ್ಣಗೊಳಿಸಿದ್ದರು.

Ettinhola Project 2
ಪೂಜೆ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇಂತಹ ಪ್ರಗತಿಯ ಪಥವನ್ನು ಕ್ರಮಿಸುವಲ್ಲಿ ಸರ್ಕಾರಕ್ಕೆ ಇರುವ ಬದ್ದತೆ ಮತ್ತು ಇಚ್ಛಾಶಕ್ತಿ ಇತರ ರಾಜ್ಯಗಳಿಗೂ ಪ್ರೇರಣೆಯಾಗಿದೆ. ಸರ್ಕಾರದ ನಿರಂತರ ಶ್ರಮದ ಪ್ರತಿಫಲವೇ ಎತ್ತಿನ ಹೊಳೆ ಯೋಜನೆ. ಅತ್ಯಂತ ಮಹತ್ವಾಕಾಂಕ್ಷೆಯ ಈ ಎತ್ತಿನ‌ಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡು ನಾಡಿಗೆ ಸಮರ್ಪಿಸುವ ಮೂಲಕ ಜನ – ಜಾನುವಾರುಗಳಿಗೆ ಕುಡಿಯುವ ನೀರಿನ ತಾತ್ವಾರವನ್ನು ಶಾಶ್ವತವಾಗಿ ನೀಗಿಸುವಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಬದ್ದತೆಗೆ ಸಾಕ್ಷಿಯಾಗಿದೆ.

ಎತ್ತಿನ ಹೊಳೆ ಯೋಜನೆ: ರಾಜ್ಯದಲ್ಲಿ ಯಥೇಚ್ಛವಾಗಿರುವ ಜಲಸಂಪನ್ಮೂಲವನ್ನು ಜನರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬಳಸಿಕೊಳ್ಳುವ ದೃಷ್ಟಿಯಿಂದ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ ಹಾಗೂ ಕೇರಿಹೊಳೆ ಹಳ್ಳಗಳ ಮುಂಗಾರು ಮಳೆ ಅವಧಿಯಲ್ಲಿ ದೊರೆಯಬಹುದಾದ ನೀರನ್ನು ಬಳಸಿಕೊಳ್ಳುವಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ಯೋಜನೆಯ ಮೊದಲನೇ ಹಂತದ ಏತ (ಲಿಫ್ಟ್) ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನಕ್ಕೆ ಬಹುದಿನಗಳಿಂದ ಉದ್ಭವಿಸಿದ್ದ ಎಲ್ಲಾ ಅಡೆತಡೆಗಳನ್ನು ಈ ಸರ್ಕಾರವು ಕಳೆದ 18 ತಿಂಗಳಲ್ಲಿ ನಿವಾರಿಸಿಕೊಂಡು ಕಾಮಗಾರಿ ಪೂರ್ಣಗೊಳಿಸುವ ಮೂಲಕ ತನ್ನ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ.

ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ ಹಾಗೂ ಕೇರಿಹೊಳೆ ಹಳ್ಳಗಳ ಪ್ರವಾಹದಿಂದ ಮುಂಗಾರಿನ ಅವಧಿಯಲ್ಲಿ ಪೂರ್ವಾಭಿಮುಖವಾಗಿ ತಿರುಗಿಸಿ, ದೊರೆಯಬಹುದಾದ ನೀರಿನ ಪೈಕಿ 24.01 ಟಿ.ಎಂ.ಸಿ ನೀರನ್ನು ಇವುಗಳಿಗೆ ಅಡ್ಡಲಾಗಿ 8 ವಿಯರ್‌ಗಳನ್ನು ನಿರ್ಮಿಸಿ ರಾಜ್ಯದ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಮಹಾಸಂಕಲ್ಪವೊಂದು ಈ ಯೋಜನೆಯ ಮೂಲಕ ಈಡೇರುತ್ತಿರುವುದು ಈ ಜಿಲ್ಲೆಗಳ ಜನರ ಕುಡಿವ ನೀರಿನ ಸಮಸ್ಯೆಯನ್ನು ಇಂಗಿಸಿದೆ.
ಒಟ್ಟಾರೆ 24.01 ಟಿ.ಎಂ.ಸಿ ನೀರಿನಲ್ಲಿ ಕುಡಿಯುವ ನೀರಿಗಾಗಿ 14.056 ಟಿ.ಎಂ.ಸಿ, 527 ಕೆರೆ ತುಂಬಿಸಲು 9.953 ಟಿ.ಎಂ.ಸಿ ಬಳಸಿಕೊಳ್ಳುವ ಯೋಜನೆ ರೂಪಿಸಲಾಗಿದ್ದು, ರೂ. 23,251.66 ಕೋಟಿಗಳ ಅಂದಾಜು ಮೊತ್ತದ ಮೊದಲ ಹಂತದ ಕಾಮಗಾರಿಯನ್ನು ಜನರಿಗೆ ಸಮರ್ಪಿಸಲಾಗುತ್ತಿದೆ.

ಮೊದಲನೇ ಹಂತದ ಏತ (ಲಿಫ್ಟ್‌) ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ 1 ರಿಂದ 8 ವಿಯರ್ ಗಳಿಂದ ಒಟ್ಟಾರೆ 79.50 ಕ್ಯುಮೆಕ್ಸ್ (2800.00 ಕ್ಯೂಸೆಕ್ಸ್) ನೀರನ್ನೆತ್ತಿ ವಿತರಣಾ ತೊಟ್ಟಿ – 3ರ ವರೆಗೆ ಪೂರೈಸಿ ತದನಂತರ ವಿತರಣಾ ತೊಟ್ಟಿ-3 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ -4 ರ ಮುಖಾಂತರ ಗುರುತ್ವ ಕಾಲುವೆಗೆ 79.50 ಕ್ಯುಮೆಕ್ಸ್ (2800.00 ಕ್ಯೂಸೆಕ್ಸ್) ನೀರನ್ನು ಹರಿಸಲು ಯೋಜಿಸಲಾಗಿದೆ.

ಗುರುತ್ವಕಾಲುವೆಯು ಒಟ್ಟು 252.61 ಕಿ.ಮೀ ಉದ್ದವಿದ್ದು, ಈ ಪೈಕಿ 164.47 ಕಿ.ಮೀ ಪೂರ್ಣಗೊಂಡಿದ್ದು, 25.87 ಕಿ.ಮೀ ಪ್ರಗತಿಯಲ್ಲಿರುತ್ತದೆ. ಗುರುತ್ವಕಾಲುವೆಯ ಒಟ್ಟು 42 ಕಿ.ಮೀ ವರಗಿನ ಕಾಮಗಾರಿಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಂಡಿದೆ. ನಂತರದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿರದ ಕಾರಣ, ಗುರುತ್ವಕಾಲುವೆಯ 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 132.50 ಕಿ.ಮೀ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ 1500 ಕ್ಯೂಸೆಕ್ಸ್‌ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

Ettinhola Project 3
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಕಳೆದ ವರ್ಷದ ನವೆಂಬರ್‌ ನಿಂದಲೇ ಪೂರ್ವ ಪರಿಕ್ಷಾರ್ಥ ಚಾಲನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ವಿಯರ್- 4 ಮತ್ತು 5 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ – 3 ರವರೆಗೆ ನೀರನ್ನು ಪೂರೈಸಲಾಗಿದೆ. ಪ್ರಸ್ತುತ ಇವುಗಳ ಜೊತೆ ವಿಯರ್ 1, 2 ಮತ್ತು 8ರಿಂದಲೂ ಸಹ ನೀರನ್ನೆತ್ತಿ ವಿತರಣಾ ತೊಟ್ಟಿ -4ರ ವರೆಗೆ ಪೂರೈಸಿ, ಅಲ್ಲಿಂದ ಗುರುತ್ವ ಕಾಲುವೆಗೆ ಕಳೆದ ಆ. 26 ರಂದು ಯಶಸ್ವಿಯಾಗಿ ನೀರು ಹರಿಸಲಾಗಿದ್ದು, ಗುರುತ್ವಕಾಲುವೆಯಲ್ಲಿನ ನೀರು 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿಯನ್ನು ಪ್ರವೇಶಿಸಿ ಈಗಾಗಲೇ ಹಳೇಬೀಡು ಕೆರೆಯು ತುಂಬಿ ಕೋಡಿ ಬಿದ್ದು ತದನಂತರ ಬೆಳವಾಡಿ ಕೆರೆಯನ್ನುಪ್ರವೇಶಿಸಿದ್ದು ಇಲ್ಲಿಂದ ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್‌ಗಳಿಂದ ಸೆಪ್ಟೆಂಬರ್‌ 6 ರಿಂದ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲಾಗುತ್ತಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನಯೋಜನೆಗಾಗಿ 2024ರ ಜುಲೈ ಅಂತ್ಯಕ್ಕೆ ರೂ.16,152.05 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಯೋಜನೆ ಜಾರಿ ಬಗ್ಗೆ ಅನೇಕ ಟೀಕೆ, ಅನುಮಾನಗಳು ವ್ಯಕ್ತವಾದರೂ ಈ ಯೋಜನೆಯನ್ನು 2026-27ನೇ ಸಾಲಿನ ಮಾರ್ಚ್‌ ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ.

ಕ್ಲಿಕ್ ಮಾಡಿ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಪುನಃ ವಿಘ್ನ | ಕಾಲುವೆ ನಿರ್ಮಾಣಕ್ಕೆ ಎದುರಾಯಿತು ತೊಡಕು

ಪ್ರಸ್ತುತ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1 ರ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಗೌರಿ ಹಬ್ಬದಂದು (ಸೆ. 6) ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರುಗಳು ನೇರವೇರಿಸಲಿದ್ದಾರೆ. ಈ ಮೂಲಕ ರಾಜ್ಯದ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜನ – ಜಾನುವಾರುಗಳಿಗೆ ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಗಂಗಮ್ಮನೂ ಸೇರಿ ಕುಡಿವ ನೀರಿನ ಸುಧೆಯನ್ನು ಹರಿಸಲಿದ್ದಾಳೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BaddateComplete DetailsCounterpartDkeshiEttinholeplanReservoirVanivilasaWillಇಚ್ಛಾಶಕ್ತಿಎತ್ತಿನಹೊಳೆಕಂಪ್ಲೀಟ್‌ ಡಿಟೇಲ್ಸ್ಜಲಾಶಯಡಿಕೆಶಿಪ್ರತಿರೂಪಬದ್ದತೆಯೋಜನೆವಾಣಿವಿಲಾಸ
Share This Article
Facebook Email Print
Previous Article today bhavishya Dina Rashi Bhavishya: ದಿನ ಭವಿಷ್ಯ | ಸೆಪ್ಟೆಂಬರ್ 06 | ವ್ಯಾಪಾರ– ವ್ಯವಹಾರ ಸುಗಮ, ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ
Next Article Govinda karajola ಎತ್ತಿನಹೊಳೆ Project ಬಟನ್ ಹೊಡೆಯಿರಿ | ಜನರಿಗೆ ಸುಳ್ಳು ಹೇಳಬೇಡಿ | ಸಂಸದ ಗೋವಿಂದ ಕಾರಜೋಳ ಗರಂ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಮಾರುಕಟ್ಟೆ ಧಾರಣೆ
ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
ಮುಖ್ಯ ಸುದ್ದಿ
ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
ಮುಖ್ಯ ಸುದ್ದಿ
Dark spots on the neck
ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up