CHITRADURGA NEWS | 16 JANUARY 2025
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯ ತುಂಬಿ ಕೋಡಿ ಬಿದ್ದಿದ್ದರೂ, ಭದ್ರಾ ಜಲಾಶಯದಿಂದ ಅನಗತ್ಯವಾಗಿ ನೀರು ಹರಿಸಿ ಪೋಲು ಮಾಡಲಾಗುತ್ತಿದೆ ಎಂದು ದಾವಣಗೆರೆ ರೈತರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಭಾರತೀಯ ರೈತ ಒಕ್ಕೂಟದ ಅಧ್ಯಕ್ಷ ಎಚ್.ಆರ್.ಲಿಂಗರಾಜ ಶಾಮನೂರು ಈ ಬಗ್ಗೆ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಡಿಸೆಂಬರ್ ಮೊದಲ ವಾರದಿಂದ ಪ್ರತಿ ದಿನ 700 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿ ಹುದ್ದೆ | 1:3 ಆಯ್ಕೆಪಟ್ಟಿ ಪ್ರಕಟ | ಆಕ್ಷೇಪಣೆಗೆ ಅವಕಾಶ
ಜನವರಿ 18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿ ಸಾಗರಕ್ಕೆ ಬಾಗೀನ ಅರ್ಪಿಸಲು ಬರುತ್ತಿದ್ದಾರೆ. ಇದಕ್ಕಾಗಿ ದಿನವೂ ನೀರು ಹರಿಸಲಾಗುತ್ತಿದೆ. ಹೀಗೆ ಕಾನೂನು ಬಾಹೀರವಾಗಿ ಭದ್ರಾ ನೀರು ಹರಿಸಿದರೆ ಮುಂದೆ ದಾವಣಗೆರೆ ರೈತರಿಗೆ ತೊಂದರೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಭದ್ರಾ ಜಲಾಶಯದಲ್ಲಿ 71.355 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯವಿದ್ದು, ಈಗ ಜಲಾಶಯದಲ್ಲಿ 61.503 ಟಿಎಂಸಿ ನೀರಿದೆ. ಇದರಲ್ಲಿ ಕುಡಿಯಲು, ಕೈಗಾರಿಕೆಗಳಿಗೆ, ಡೆಡ್ ಸ್ಟೋರೇಜ್ ಸೇರಿದಂತೆ ಎಲ್ಲವೂ ಕಳೆದು ರೈತರಿಗೆ ಸಿಗುವುದೇ 15 ರಿಂದ 18 ಟಿಎಂಸಿ ನೀರು ಎಂದು ವಿವರಿಸಿದರು.
ಇದನ್ನೂ ಓದಿ: ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಮತ್ತೆ ಜಿಗಿತ
ಭದ್ರಾ ಮೇಲ್ದಂಡೆ ಯೋಜನೆಗೆ ಕಾಡಾದವರೇ ನೀರು ಹರಿಸಬೇಕು. ಆದರೆ, ಇವರು ಭದ್ರಾ ಮೇಲ್ದಂಡೆ ಅಧಿಕಾರಿಗಳ ಕೈಗೆ ಕೀ ಕೊಟ್ಟಿದ್ದು, ಅವರು ಬೇಕಾಬಿಟ್ಟಿಯಾಗಿ ನೀರು ಹರಿಸುತ್ತಿದ್ದಾರೆ. ಹೀಗೆ ಬೇಕಾಬಿಟ್ಟಿಯಾಗಿ ನೀರು ಬಿಟ್ಟುಕೊಳ್ಳುವುದಾದರೆ ಕಾಡಾ ಏಕೆ ಬೇಕು ಎಂದು ಲಿಂಗರಾಜ್ ಪ್ರಶ್ನಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
ಭದ್ರ ಮೇಲ್ದಂಡೆ ನೀರಿನಿಂದ ವಿ ವಿ ಸಾಗರದ ಕೋಡಿ ಬಿದ್ದಿದೆ ಅದು ನಮ್ಮ ಚಿತ್ರದುರ್ಗ ಜಿಲ್ಲೆಯ ರೈತರ ಕನಸು ಜೊತೆಗೆ ನಮ್ಮ ಕನಸು ಕೂಡ ಇದೆ
ದಾವಣಗೆರೆ ಜಿಲ್ಲೇ ರೈತ ಮುಖಂಡರು ಸ್ವಲ್ಪ ತಾಳ್ಮೆಯಿಂದ ಇರಬೇಕು ಭದ್ರ ಮೇಲ್ದಂಡೆ ನೀರು ನಿಲ್ಲೇ ನಿಲ್ಲುತ್ತದೆ
ನಾವೆಲ್ಲರೂ ಕರ್ನಾಟಕ ರಾಜ್ಯದ ರೈತರು
ನಮ್ಮೆಲರೀಗೂ ಒಳ್ಳೇದು ಆದರೆ ಸಾಕು