By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮಾಜಿ ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಗಲಾಟೆ; ಸ್ಥಳಕ್ಕೆ ದೌಡಾಯಿಸಿದ ಪೊಲೀಸರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮಾಜಿ ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಗಲಾಟೆ; ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

ಮುಖ್ಯ ಸುದ್ದಿ

ಮಾಜಿ ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಗಲಾಟೆ; ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

News Desk Chitradurga News
Last updated: 18 December 2023 15:56
News Desk Chitradurga News
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್‌.ಕಾಂ

ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಿದ್ದ ರಾಜ್ಯದ ಎಲ್ಲೆಡೆ ಮಾದಿಗ ಮುನ್ನೆಡೆ ‘ಮಾದಿಗರ ಆತ್ಮ ಗೌರವ ಸಮಾವೇಶ’ದ ಉದ್ಘಾಟನೆಗೆ ಸೋಮವಾರ ಮಾಜಿ ಸಚಿವ ಗೋವಿಂದ ಕಾರಜೋಳ ಆಗಮಿಸಿದ್ದರು. ಸಮಾವೇಶ ಸ್ಥಳಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿ ವೇಳೆ ಕೆಲವರು ಏಕಾಏಕಿ ಸಭಾಂಗಣಕ್ಕೆ ನುಗ್ಗಿ ಗಲಾಟೆ ನಡೆಸಿದ ಪ್ರಸಂಗ ನಡೆಯಿತು.

ಇದನ್ನೂ ಓದಿ: ಪ್ರವಾಸಿ ಮಂದಿರದಲ್ಲಿ ಇಸ್ಪೀಟ್ ಆಡುತ್ತಿದ್ದ 14 ಮಂದಿ ಬಂಧನ

ನೀವು ಸಮಾಜ ಕಲ್ಯಾಣ ಸಚಿವರಾಗಿದ್ದಾಗ ದಲಿತರಿಗೆ ಅನ್ಯಾಯ ಆಗಿದೆ ಎಂದು ಕಿಡಿಕಾರಿ ಆಕ್ರೋಶ ಹೊರ ಹಾಕಿದರು. ದಲಿತರಿಗೆ ಸಾಲ, ಸಬ್ಸಿಡಿ ನೀಡುವ ಯೋಜನೆಯಲ್ಲಿ ಕಡಿತವಾಗಿದೆ ಎಂದು ಗೋವಿಂದ ಕಾರಜೋಳ ಜತೆ ದಲಿತ ಮುಖಂಡ ಹನುಮಂತಪ್ಪ ದುರ್ಗಾ ಮತ್ತಿತರರು ವಾಗ್ವಾದ ನಡೆಸಿದರು.

ಸುದ್ದಿಗೋಷ್ಠಿ ವೇಳೆ ಏಕಾಏಕಿ ನುಗ್ಗಿ ಗುಂಡಾಗಿರಿ ಮಾಡುವುದು ಸರಿಯಲ್ಲ. ನೀವು ಮೊದಲು ಹೊರಗೆ ನಡೆಯಿರಿ. ನಲವತ್ತು ವರ್ಷದ ರಾಜಕೀಯದಲ್ಲಿ ನಾನು ಈ ರೀತಿ ನೋಡಿಲ್ಲ. ಇದು ಗುಂಡಾಗಿರಿ, ಗುಂಡಾರಾಜ್ಯ ಆಗಿದೆ ಎಂದು ಕಾರಜೋಳ ಕಿಡಿಕಾರಿದರು.

ಇದನ್ನೂ ಓದಿ: ಜಂಗಮ ಸಮಾಜ ಆಲದ ಮರ ಇದ್ದಂತೆ ; ಕರಿವೃಷಭದೇಶೀಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಸಲಹೆ

ಕೂಡಲೇ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನಹರಿಸಬೇಕು. ಗಲಾಟೆ ಮಾಡಿದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಪೂರ್ವವಲಯ ಐಜಿಪಿ ತ್ಯಾಗರಾಜ್‌ಗೆ ಕರೆ ಮಾಡಿ, ಸುದ್ದಿಗೋಷ್ಠಿ ವೇಳೆ ಗುಂಡಾಗಳು ನುಗ್ಗಿ ದಾಂಧಲೆ ಮಾಡಿದ್ದಾರೆ. ಕೂಡಲೇ ಇವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂರುತ್ತೇನೆ ಎಂದು ತಿಳಿಸಿದರು.

ಪ್ರವಾಸಿ ಮಂದಿರಕ್ಕೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ, ನಗರಠಾಣೆ ಸಿಪಿಐ ತಿಪ್ಪೇಸ್ವಾಮಿ ಆಗಮಿಸಿ ಮಾಹಿತಿ ಪಡೆದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaDistrict Collector's OfficeFormer MinisterInjusticePolicepress ConferenceRiotಅನ್ಯಾಯಗಲಾಟೆಚಿತ್ರದುರ್ಗಜಿಲ್ಲಾಧಿಕಾರಿ ಕಚೇರಿಪೊಲೀಸ್ಮಾಜಿ ಸಚಿವಸುದ್ದಿಗೋಷ್ಠಿ
Share This Article
Facebook Email Print
Previous Article ಗುರುಲಿಂಗಣ್ಣ ಬರೆದ ಡೆತ್‍ನೋಟ್‍ ಆತ್ಮಹತ್ಯೆಗೆ ಶರಣಾದ ಗುರುಲಿಂಗಣ್ಣ ಬರೆದ ಡೆತ್‍ನೋಟ್‍ನಲ್ಲಿ ಏನಿದೆ..?
Next Article ಗೋವಿಂದ ಕಾರಜೋಳ ಸುದ್ದಿಗೋಷ್ಠಿ ವೇಳೆ ಗಲಾಟೆ ಪ್ರಕರಣ | ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up