
CHITRADURGA NEWS | 23 SEPTEMBER 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸೇವಾ ಪಾಕ್ಷಿಕ ಅಭಿಯಾನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಆಧಾರಿತ ಪ್ರದರ್ಶನವನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿದರು.
ಇದನ್ನೂ ಓದಿ: ಶಿಕ್ಷಕರ ಸೇವಾ ಮನೋಭಾವ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪ | ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ

ನಂತರ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನ ಮಂತ್ರಿಯಾದ ಮೇಲೆ ದೇಶದ ಗೌರವ ಹೆಚ್ಚಾಗಿದೆ. ಮುಖ್ಯಮಂತ್ರಿಗಳಾಗಿ, ಪ್ರಧಾನ ಮಂತ್ರಿಗಳಾಗಿ ಉತ್ತಮವಾದ ಸೇವೆಯನ್ನು ಮಾಡಿದ್ದಾರೆ. ದೇಶದ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಮೋದಿಯವರನ್ನು ಕೊಂಡಾಡುತ್ತಿದ್ದಾರೆ ಎಂದು ತಿಳಿಸಿದರು.
ನರೇಂದ್ರ ಮೋದಿ ಅವರು 2014 ರಿಂದ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. 2001 ರಿಂದ2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು ಮತ್ತು ವಾರಣಾಸಿಯ ಸಂಸತ್ ಸದಸ್ಯರಾಗಿದ್ದಾರೆ . ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಬಲಪಂಥೀಯ ಹಿಂದುತ್ವ ಅರೆಸೈನಿಕ ಸ್ವಯಂಸೇವಕ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸದಸ್ಯರಾಗಿದ್ದಾರೆ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಹೊರಗೆ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದವರು ಎಂದರು.
ಮೋದಿ ಬಾಂಬೆ ರಾಜ್ಯದ (ಇಂದಿನ ಗುಜರಾತ್) ವಡ್ನಗರದಲ್ಲಿ ಹುಟ್ಟಿ ಬೆಳೆದರು, ಅಲ್ಲಿ ಅವರು ತಮ್ಮ ಮಾಧ್ಯಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದರು. ಅವರನ್ನು ಎಂಟನೇ ವಯಸ್ಸಿನಲ್ಲಿ ಆರ್ಎಸ್ಎಸ್ಗೆ ಪರಿಚಯಿಸಲಾಯಿತು, 1971 ರಲ್ಲಿ ಗುಜರಾತ್ನಲ್ಲಿ ಸಂಘಟನೆಯ ಪೂರ್ಣಾವಧಿ ಕಾರ್ಯಕರ್ತರಾದರು.
ಇದನ್ನೂ ಓದಿ: ಅಡಿಕೆ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕ ದೇಶದಲ್ಲೇ ಮೊದಲು
ಮುಖ್ಯಮಂತ್ರಿಯಾಗಿ ಅವರ ನೀತಿಗಳು ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಿದ ಕೀರ್ತಿಗೆ ಪಾತ್ರವಾದರೂ. 2014 ರ ಭಾರತೀಯ ಸಾರ್ವತ್ರಿಕ ಚುನಾವಣೆಯಲ್ಲಿ , ಮೋದಿ ಬಿಜೆಪಿಯನ್ನು ಸಂಸತ್ತಿನ ಬಹುಮತಕ್ಕೆ ಕರೆದೊಯ್ದರು, 1984 ರ ನಂತರ ಒಂದು ಪಕ್ಷಕ್ಕೆ ಇದು ಮೊದಲ ಬಾರಿ. ಅವರ ಆಡಳಿತವು ನೇರ ವಿದೇಶಿ ಹೂಡಿಕೆಯನ್ನು ಹೆಚ್ಚಿಸಿತು ಮತ್ತು ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡಿತು ಎಂದು ತಿಳಿಸಿದರು.
2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಮೋದಿ ಅವರ ಪಕ್ಷ ಗೆದ್ದಿತು . ಅದರ ಎರಡನೇ ಅವಧಿಯಲ್ಲಿ ಅವರ ಆಡಳಿತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪರಿಚಯಿಸಿತು, ಇದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಯಿತು.
ಸೆ.22 ರಿಂದ ಜಿ.ಎಸ್.ಟಿ.ಯಲ್ಲಿ ಕಡಿತವನ್ನು ಮಾಡುವುದರ ಮೂಲಕ ಜನರ ಮೇಲಿನ ಹೊರೆಯನ್ನು ಕಡಿತ ಮಾಡಿದೆ ಇದರಿಂದ ದೇಶದ ಜನತೆಯ ದುಬಾರಿ ಜೀವನದ ಪ್ರಮಾಣವನ್ನು ಕಡಿಮೆ ಮಾಡಿದೆ. ಜಿ.ಎಸ್.ಟಿ ಕಡಿತದಿಂದ ಜನತೆಗೆ ಸಹಾಯವಾಗಿದೆ.
ಇಂದು ಪೌರ ಕಾರ್ಮಿಕರ ದಿನಾಚರಣೆ ಅವರು ಮಾಡಿದ ಕೆಲಸದಿಂದಾಗಿ ಇಂದು ನಾವುಗಳು ಓಡಾಡುವಂತೆ ಆಗುತ್ತಿದೆ. ಇಂದಿಗೂ ಸಹಾ ಪೌರ ಕಾರ್ಮಿಕರು ಗುತ್ತಿಗೆ ಅಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಬೋಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ಸುಮಾರು 20 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಿದ್ದರು. ಇದೇ ರೀತಿ ಇಂದಿನ ಸರ್ಕಾರವೂ ಸಹಾ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವವರೆಗೂ ಖಾಯಂ ಮಾಡಬೇಕಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಈರುಳ್ಳಿ ಬೆಲೆ ಕುಸಿತ | ಈರುಳ್ಳಿ ಸುರಿದು ಜಿಲ್ಲಾಡಳಿತದ ವಿರುದ್ದ ಆಕ್ರೋಶ
ಈ ವೇಳೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಜಿಲ್ಲಾ ಅಧ್ಯಕ್ಷರಾದ ಕೆ.ಟಿ.ಕುಮಾರ ಸ್ವಾಮಿ, ಮಾಜಿ ಜಿಲ್ಲಾಧ್ಯಕ್ಷ ಹನುಮಂತೆ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಮುಖಂಡರುಗಳು, ಕಾರ್ಯಕರ್ತರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
