Connect with us

    BJP: ನಗರಸಭೆ ಉಪಾಧ್ಯಕ್ಷೆ ಸೇರಿ ನಾಲ್ವರ ಉಚ್ಛಾಟನೆ | ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ

    ಮುಖ್ಯ ಸುದ್ದಿ

    BJP: ನಗರಸಭೆ ಉಪಾಧ್ಯಕ್ಷೆ ಸೇರಿ ನಾಲ್ವರ ಉಚ್ಛಾಟನೆ | ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 16 SEPTEMBER 2-24

    ಚಿತ್ರದುರ್ಗ: ನಗರಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಆರೋಪದಡಿ ನಾಲ್ವರು ನಗರಸಭೆ ಸದಸ್ಯರನ್ನು ಬಿಜೆಪಿ (BJP) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

    33ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, 1ನೇ ವಾರ್ಡ್ ಸದಸ್ಯೆ ನಾಗಮ್ಮ, 17ನೇ ವಾರ್ಡ್ ಸದಸ್ಯ ಜಯ್ಯಪ್ಪ ಹಾಗೂ 30ನೇ ವಾರ್ಡ್ ಸದಸ್ಯ ಮಂಜಣ್ಣ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

    ಇದನ್ನೂ ಓದಿ: ನಗರಸಭೆಯಲ್ಲಿ ಶಾಸಕ ವೀರೇಂದ್ರ(ಪಪ್ಪಿ) ಮೇಲುಗೈ | ಬಹುಮತವಿದ್ದೂ ಸೋತ ಬಿಜೆಪಿ

    ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧವಾಗಿ ಮತ ಚಲಾಯಿಸಿದ್ದು, ಪಕ್ಷ ವಿಪ್ ನೀಡಿದ್ದರೂ ಕಡೆಗಣಿಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿರುವುದರಿಂದ ಪಕ್ಷದ ಶಿಸ್ತು ಉಲ್ಲಂಘನೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

    ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top