CHITRADURGA NEWS | 12 MARCH 2025
ಚಿತ್ರದುರ್ಗ: ಸಂಸದ ಗೋವಿಂದ ಕಾರಜೋಳ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯ ಕಛೇರಿಯಲ್ಲಿ ಭೇಟಿ ಮಾಡಿ, ಕಳೆದ 7, 8 ತಿಂಗಳುಗಳಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆದ್ದಾರಿಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಹೆದ್ದಾರಿ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಈ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
Also Read: ಟೀಚರ್ಸ್ ಕಾಲೋನಿ, ಜಡ್ಜ್ ಕ್ವಾಟ್ರಸ್ ರಸ್ತೆಗೆ ಡಾಂಬಾರು ಭಾಗ್ಯ ಯಾವಾಗ ?
ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ-48, ರಾಷ್ಟ್ಥೀಯ ಹೆದ್ದಾರಿ 150 ಎ ಈ ಎರಡೂ ಹೆದ್ದಾರಿಗಳು ಸಂಧಿಸುವ ಜಾಗದಲ್ಲಿ ಕ್ಲೋವರ್ ಲೀಫ್ ಜಂಕ್ಷನ್ ನಿರ್ಮಾಣ.
ಚಳ್ಳಕೆರೆ ನಗರ ಪರಿಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ-150 ಎ ಅನ್ನು ಒನ್ ಟೈಮ್ ಇಂಪ್ರೂವ್ಮೆಂಟ್ ಯೋಜನೆಯಡಿ ಅಭಿವೃದ್ದಿಪಡಿಸುವುದು.
ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48 ರಿಂದ ಚಳ್ಳಕೆರೆ-ಪಾವಗಡ-ಪುಟ್ಟಪರ್ತಿ-ರಾಷ್
Also Read: ಪ್ರಯಾಣಿಕರ ಗಮನಕ್ಕೆ | ಹುಬ್ಬಳ್ಳಿ – ಚಿತ್ರದುರ್ಗ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದತಿ ಮುಂದುವರಿಕೆ
ಮೂಡಿಗೆರೆಯಿಂದ-ಚಿಕ್ಕಮಗಳೂರು-ಕಡೂರು
ಸಿರಾ ಪಟ್ಟಣ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ-48ನ್ನು ಒನ್ ಟೈಮ್ ಇಂಪ್ರೂವ್ಮೆಂಟ್ ಯೋಜನೆಯಡಿ ಅಭಿವೃದ್ದಿಪಡಿಸುವುದು.
ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಹಿರಿಯೂರು ಹತ್ತಿರ ಆದಿವಾಲ-ಪಟ್ರೆಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ, ಸಿರಾ ತಾಲ್ಲೂಕು ಚಿಕ್ಕನಹಳ್ಳಿ ಬಳಿಯಿರುವ ಕೆಳಸೇತುವೆಯಲ್ಲಿರುವ ನ್ಯೂನ್ಯತೆಗಳನ್ನು ಸರಿಪಡಿಸುವುದು ಸೇರಿದಂತೆ ಇನ್ನಿತರೆ ಯೋಜನೆಗಳನ್ನು ಪ್ರಥಮ ಆದ್ಯತೆ ಮೇಲೆ ಪರಿಗಣಿಸುವಂತೆ ಮನವಿ ಮಾಡಿಕೊಂಡರು.
Also Read: ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಪತಿರಾಯ | ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಸದರಿಗೆ ಭರವಸೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number