By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕಣ್ಮನ ಸೆಳೆದ ನವದುರ್ಗೆಯರ ಅಲಂಕಾರ | ಕೋಟೆನಾಡಲ್ಲಿ ಸಂಕ್ರಾಂತಿ ಸಂಭ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕಣ್ಮನ ಸೆಳೆದ ನವದುರ್ಗೆಯರ ಅಲಂಕಾರ | ಕೋಟೆನಾಡಲ್ಲಿ ಸಂಕ್ರಾಂತಿ ಸಂಭ್ರಮ

ಮುಖ್ಯ ಸುದ್ದಿ

ಕಣ್ಮನ ಸೆಳೆದ ನವದುರ್ಗೆಯರ ಅಲಂಕಾರ | ಕೋಟೆನಾಡಲ್ಲಿ ಸಂಕ್ರಾಂತಿ ಸಂಭ್ರಮ

News Desk Chitradurga News
Last updated: 15 January 2024 21:35
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 JANUARY 2024
ಚಿತ್ರದುರ್ಗ (CHITRADURGA): ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕೋಟೆನಾಡಿನ ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕಿದವು. ಕಣ್ಮನ ಸೆಳೆಯುವ ಅಲಂಕಾರಕ್ಕೆ ಭಕ್ತರು ಮನಸೋತರು.

ಭಾನುವಾರ ಮಧ್ಯಾಹ್ನದಿಂದ ಆರಂಭವಾದ ಅಲಂಕಾರಗಳು ತಡರಾತ್ರಿ ಮುಕ್ತಾಯಗೊಂಡವು. ಸೋಮವಾರ ಮುಂಜಾನೆ ವೇಳೆಗೆ ಭಕ್ತರು ದೇವರಕ್ಕೆ ಆಗಮಿಸಿದರು. ಎಲ್ಲೆಡೆಯ ವೈಭವ ಕಂಡು ಪುನೀತರಾದರು. ದೇವಸ್ಥಾನಗಳಲ್ಲಿ ಭಕ್ತರಿಗೆ ಸಿಹಿ ಪೊಂಗಲ್, ಪುಳಿಯೋಗರೆ, ಎಳ್ಳು-ಬೆಲ್ಲವನ್ನು ಭಕ್ತರಿಗೆ ವಿತರಿಸಲಾಯಿತು.

ಇದನ್ನೂ ಓದಿ: ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತೊಂದು ಆಡಿಯೋ ವೈರಲ್‌

ಜೋಗಿಮಟ್ಟಿ ರಸ್ತೆಯಲ್ಲಿರುವ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮನಿಗೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. ಅಭಿಷೇಕ, ಹೂವಿನ ಅಲಂಕಾರ, ಮಹಾ ಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

ದೇವಸ್ಥಾನದ ಮುಂಭಾಗ ಕಬ್ಬಿನ ಜಲ್ಲೆ ಹಾಗೂ ಬಾಳೆದಿಂಡಿನಿಂದ ಸಿಂಗರಿಸಲಾಗಿತ್ತು. ಬಣ್ಣ ಬಣ್ಣ ಹೂವು ಹಾರ, ದ್ರಾಕ್ಷಿ, ಅನಾನಸ್, ಕಿತ್ತಲೆ ಹಣ್ಣುಗಳಿಂದ ದೇವಸ್ಥಾನದ ಒಳಗಡೆ ಅಲಂಕರಿಸಲಾಗಿತ್ತು. ನಗರದ ಕೋಟೆ ರಸ್ತೆಯಲ್ಲಿರುವ ಉಚ್ಚಂಗಿಯಲ್ಲಮ್ಮನನ್ನು ಬಗೆ ಬಗೆಯ ಹೂವು ಹಾರ, ಹಸಿರುಪತ್ರೆ ಹಾಗೂ ನಾನಾ ರೀತಿಯ ಹಣ್ಣುಗಳಿಂದ ಕಣ್ಣು ಕೋರೈಸುವಂತೆ ಅಲಂಕರಿಸಲಾಗಿತ್ತು.

ಇದನ್ನೂ ಓದಿ: ಅನಂತ ಕುಮಾರ್‌ ಹೆಗಡೆ ಒಬ್ಬ ಹುಚ್ಚ | ಮಾಜಿ ಸಚಿವ ಎಚ್‌.ಆಂಜನೇಯ ಏಕವಚನದಲ್ಲೇ ವಾಗ್ದಾಳಿ

ಕಿತ್ತಳೆ, ದ್ರಾಕ್ಷಿ, ಸೇಬು, ಅನಾನಸ್ ಹಣ್ಣುಗಳಿಂದ ಉಚ್ಚಂಗಿಯಲ್ಲಮ್ಮನಿಗೆ ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ಸಹಸ್ರಾರು ಭಕ್ತರು ಉಚ್ಚಂಗಿಯಲ್ಲಮ್ಮನ ದರ್ಶನ ಪಡೆದು ಶ್ರದ್ದಾಭಕ್ತಿಯನ್ನು ಸಮರ್ಪಿಸಿದರು.

ಐತಿಹಾಸಿಕ ಚಿತ್ರದುರ್ಗದ ಬೆಟ್ಟದಲ್ಲಿರುವ ಏಕನಾಥೇಶ್ವರಿ ಅಮ್ಮನನ್ನು ಮಕರ ಸಂಕ್ರಾಂತಿಯಂದು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. ಬೃಹಧಾಕಾರವಾದ ಸುಗಂಧರಾಜ ಹಾರ, ಗುಲಾಬಿ, ಕನಕಾಂಬರ, ಸೇವಂತಿಗೆ, ಹಸಿರುಪತ್ರೆ, ಕಣಗಲ ಹೂವಿನಿಂದ ಸಿಂಗರಿಸಿ ಪೂಜಿಸಲಾಯಿತು. ನೂರಾರು ಭಕ್ತರು ಬೆಟ್ಟವೇರಿ ಏಕನಾಥೇಶ್ವರಿ ಅಮ್ಮನ ದರ್ಶನ ಪಡೆದರು.

ಹೊಳಲ್ಕೆರೆ ರಸ್ತೆಯ ಬರಗೇರಮ್ಮ ದೇವಿಗೆ ಸಾವಿರಾರು ಚೆರ‌್ರಿ, ದ್ರಾಕ್ಷಿ, ನೂರಾರು ಲಾಡು, ಪೇಡಾ, ವಿವಿಧ ವರ್ಣದ ಬರ್ಫಿ ಒಳಗೊಂಡು ಹಲವು ಸ್ವೀಟ್ಸ್‌ಗಳಿಂದ ವಿಶೇಷ ಅಲಂಕಾರ ಸೇವೆ ಜರುಗಿತು.  ದೇಗುಲಗಳು ಗ್ರಾಮೀಣ ಸೊಗಡಿನೊಂದಿಗೆ ಭಕ್ತರನ್ನು ಆಕರ್ಷಿಸಿದವು. ಆವರಣ ಮುಂಭಾಗ ಕಬ್ಬಿನ ಜಲ್ಲೆಯ ರಾಶಿ, ಬೆಲ್ಲದ ಅಚ್ಚಿನ ರಾಶಿ, ಸುತ್ತಲೂ ಹಲವು ಪದಾರ್ಥಗಳಿಂದ ಅಲಂಕರಿಸಲಾಗಿತ್ತು.

ಜಿಲ್ಲೆಯ ಹಲವು ಗ್ರಾಮೀಣ ಭಾಗಗಳಲ್ಲಿ ರೈತರು ತಾವು ಬೆಳೆದ ರಾಶಿಯನ್ನು ಗುಡ್ಡೆಯಾಕಿ ವಿಶಿಷ್ಟವಾಗಿ ಸಂಕ್ರಾಂತಿ ಹಬ್ಬ ಆಚರಿಸುವ ಪರಂಪರೆ ಇದೆ. ಬರಗಾಲದ ಕಾರಣಕ್ಕೆ ಕೈಸೇರಿದ ಬೆಳೆಯನ್ನೇ ರಾಶಿಯಾಕಿ, ರಾಸುಗಳಿಗೆ ವಿವಿಧ ವಸ್ತುಗಳಿಂದ ಸಿಂಗರಿಸಿ ಆಚರಿಸಿದರು.
ನಗರ, ಪಟ್ಟಣ, ಹಳ್ಳಿಗಳಲ್ಲಿ ಸಂಜೆ ಹೆಣ್ಣು ಮಕ್ಕಳು ಸ್ನೇಹಿತರಿಗೆ, ನೆರೆ-ಹೊರೆಯವರಿಗೆ, ಸಂಬಂಧಿಕರಿಗೆ ಎಳ್ಳು ಬೆಲ್ಲ ಹಂಚುವ ಮೂಲಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಸಂಕ್ರಾಂತಿ ಮಹೋತ್ಸವದ ಅಂಗವಾಗಿ ಮಾಸ್ತಮ್ಮದೇವಿಯ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು. ಉಚ್ಚಂಗಿಯಲ್ಲಮ್ಮ ದೇವಸ್ಥಾನದಿಂದ ಹೊರಟ ಮಾಸ್ತಮ್ಮದೇವಿ ಮೆರವಣಿಗೆ ಸಣ್ಣಗರಡಿ ಸಮೀಪವಿರುವ ದೇವಸ್ಥಾನಕ್ಕೆ ತಲುಪಿತು. ಪೂರ್ಣಕುಂಭ ಹೊತ್ತ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು.

ನಗರಸಭೆ ಸದಸ್ಯರಾದ ಆರ್.ನಾಗಮ್ಮ, ಭಾಸ್ಕರ್, ಗುತ್ತಿಗೆದಾರ ಕುಮಾರಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮಾಜಿ ಸದಸ್ಯ ಮಹೇಶ್ ಹಾಗೂ ದೇವಸ್ಥಾನದ ಭಕ್ತ ಮಂಡಳಿಯವರು ಮೆರವಣಿಗೆಯಲ್ಲಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AttractionDarshanDecorationSankrantiWorshipಅಲಂಕಾರಆಕರ್ಷಣೆದರ್ಶನಪೂಜೆಸಂಕ್ರಾಂತಿ
Share This Article
Facebook Email Print
Previous Article ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತೊಂದು ಆಡಿಯೋ ವೈರಲ್ | ಡಿಸಿ ದಿವ್ಯಪ್ರಭು ಹಾಗೂ ಹೊಸದುರ್ಗ ಶಾಸಕರ ಬಗ್ಗೆ ಆರೋಪ
Next Article ಮುದ್ದಾದ ಕರಡಿ ಮರಿಗಳ ಆಟ ಕರಡಿಗಳ ಮುದ್ದಾದ ಗುದ್ದಾಟ ನೊಡಿದ್ದೀರಾ | ಇಲ್ಲಿದೆ ನೋಡಿ ಸುದ್ದಿ ಮತ್ತು ವಿಡಿಯೋ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up