CHITRADURGA NEWS | 30 MAY 2025
ಚಿತ್ರದುರ್ಗ: ನಕಲಿ ವೈದ್ಯಕೀಯ ಸರ್ಟಿಫಿಕೇಟ್ಗಳನ್ನು ನೀಡಿ ನಿಜವಾಗಿಯೂ ಶ್ರವಣ ದೋಷವುಳ್ಳವರಿಗೆ ವಂಚನೆ ಮಾಡಿರುವ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಪಿ.ರವೀಂದ್ರ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾ ಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಜಿಲ್ಲಾಧ್ಯಕ್ಷ ವಿಶ್ವನಾರಾಯಣ ಮೂರ್ತಿ ಒತ್ತಾಯಿಸಿದರು.
Also Read: ಜನೌಷಧಿ ಕೇಂದ್ರ ಬಂದ್ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಹತ್ತು ಹದಿನೈದು ವರ್ಷಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಜ್ಞರಾಗಿದ್ದ ಡಾ.ಪಿ.ರವೀಂದ್ರ ಲಂಚ ಪಡೆದು ಯಾವುದೇ ದೋಷವಿಲ್ಲದವರಿಗೂ ಶ್ರವಣ ದೋಷವಿದೆ ಎಂದು ಸರ್ಟಿಫಿಕೇಟ್ಗಳನ್ನು ನೀಡಿದ್ದಾರೆ.
ಸಲೀಸಾಗಿ ಕಿವಿ ಕೇಳಿಸುವವರಿಗೆ ದೋಷವಿದೆ ಎಂದು ವೈದ್ಯಕೀಯ ಪ್ರಮಾಣ ಪತ್ರಗಳನ್ನು ನೀಡಿ ಅರ್ಹರಿಗೆ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ.
ಚಿತ್ರದುರ್ಗ ಬೆಸ್ಕಾಂನಲ್ಲಿ ಎಂಟು ಮಂದಿ ಕೆಲಸ ಪಡೆದಿರುವುದನ್ನು ತನಿಖೆ ನಡೆಸುವಂತೆ ಒತ್ತಾಯಿಸಿದಾಗ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯವರು ಪರಿಶೀಲಿಸಿ ಒಬ್ಬರಿಗೆ ಮಾತ್ರ ಕಿವಿ ಕೇಳಿಸುತ್ತೆ, ಉಳಿದ ಏಳು ಮಂದಿಗೆ ಶ್ರವಣ ದೋಷವಿಲ್ಲ ಎಂಬ ಸರ್ಟಿಫಿಕೇಟ್ ನೀಡಿರುವುದು ಬೆಳಕಿಗೆ ಬಂದಿದೆ.
Also Read: ತಮಿಳು ನಟ ಕಮಲಹಾಸನ್ ವಿವಾದಾತ್ಮಕ ಹೇಳಿಕೆ | ಕ್ಷಮೆ ಕೇಳುವಂತೆ ಕರವೇ ಪ್ರತಿಭಟನೆ
ಮೈಸೂರಿನ ವಾಕ್ಶ್ರವಣ ಸಂಸ್ಥೆಯವರು ಪರಿಶೀಲಿಸಿದಾಗ ಡಾ.ಪಿ.ರವೀಂದ್ರ ನೀಡಿರುವ ಸರ್ಟಿಫಿಕೇಟ್ಗಳು ಫೇಕ್ ಎನ್ನುವುದು ಖಾತ್ರಿಯಾಗಿದೆ. ಅಮಾನತ್ತುಗೊಳಿಸಿ ತನಿಖೆಗೊಳಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಸುದ್ದಿಗೊಷ್ಟಿಯಲ್ಲಿ ಚಂದ್ರಪ್ಪಘಾಟ್, ತಿಪ್ಪೇಸ್ವಾಮಿ ಬೆಳಗಟ್ಟ, ಕೃಷ್ಣಪ್ಪ, ಪ್ರಹ್ಲಾದ್, ದೇವರಾಜ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number