By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರೈತರ ಸಭೆ ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರೈತರ ಸಭೆ ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ

ಮುಖ್ಯ ಸುದ್ದಿ

ರೈತರ ಸಭೆ ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ

News Desk Chitradurga News
Last updated: 25 March 2025 22:32
News Desk Chitradurga News
3 months ago
Share
ಜಿಲ್ಲಾ ಪಂಚಾಯಿತಿ ಎದುರು ರೈತರು ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

 CHITRADURGA NEWS | 26 MARCH 2025

ಚಿತ್ರದುರ್ಗ: ಬೇಸಿಗೆಯಲ್ಲಿ ವಿದ್ಯುತ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಮಂಗಳವಾರ ಜಿಲ್ಲಾಡಳಿತದಿಂದ ಕರೆದಿದ್ದ ರೈತರ ಸಭೆಯನ್ನು ರೈತರು ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಹೊರಟರು.

Also Read: ನಮ್ಮ ಅವಧಿಯಲ್ಲೇ ರಸ್ತೆ ಅಗಲೀಕರಣ | ಸಚಿವ ಡಿ.ಸುಧಾಕರ್

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ, ಬೆಳೆ ವಿಮೆ ಪರಿಹಾರ, ಭದ್ರಾ ಮೇಲ್ದಂಡೆ ಕಾಮಗಾರಿ ಕುರಿತಂತೆ ಚರ್ಚಿಸಲು ರೈತರ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾ.25 ಮಂಗಳವಾರ ಬೆಳಗ್ಗೆ 11 ಗಂಟೆಗೆ ಕರೆಯಲಾಗಿತ್ತು.

ಆದರೆ, ಈ ಸಭೆ ಕಾರಣಾಂತರಗಳಿಂದ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಸ್ತಳಾಂತರವಾಗಿತ್ತು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮ ನಡೆಯುತ್ತಿದ್ದ ಕಾರಣ, ಮಿನಿ ಸಭಾಂಗಣದಲ್ಲಿ ರೈತರ ಸಭೆಗೆ ವ್ಯವಸ್ಥೆ ಮಾಡಿದ್ದರು.

ಆದರೆ, ಮಿನಿ ಸಭಾಂಗಣದಲ್ಲಿ ರೈತರಿಗೆ ಕುಳಿತುಕೊಳ್ಳಲು ಜಾಗ ಇಲ್ಲದಂತಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ರೈತರು ಸಭೆಗೆ ಆಗಮಿಸಿದ್ದರಿಂದ ಅಧಿಕಾರಿಗಳು ಕುರ್ಚಿ ವ್ಯವಸ್ಥೆ ಮಾಡಿದರೂ, ಜಾಗ ಸಾಲದಾಯಿತು. ಇದರಿಂದ ಕೆರಳಿದ ಹಲವು ರೈತರು ಇಂತಹ ಕಾಟಾಚಾರದ ಸಭೆ ಯಾಕೆ ಮಾಡುತ್ತೀರಿ. ರೈತರು ಕುಳಿತುಕೊಳ್ಳಲು ಜಾಗವೇ ಇಲ್ಲದಂತಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

Also Read: ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆ ಮತ್ತಷ್ಟು ಹೆಚ್ಚಳ

ಇಲ್ಲಿಂದ ಮುಖ್ಯ ಸಭಾಂಗಣಕ್ಕೆ ಬಂದ ರೈತರು, ಅಲ್ಲಿಯೂ ಆರೋಗ್ಯ ಇಲಾಖೆ ಕಾರ್ಯಕ್ರಮ ಬೇಗ ಮುಗಿಯದಿರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು. ಬೆಳಗ್ಗೆ 11 ಗಂಟೆಗೆ ಕರೆದಿದ್ದ ಸಭೆಗೆ 12.45 ಆದರೂ ಜಿಲ್ಲಾಧಿಕಾರಿಗಳು ಸೇರಿದಂತೆ ಯಾವುದೇ ಇಲಾಖೆಯ ಅಧಿಕಾರಿಗಳು ಆಗಮಿಸದಿರುವುದನ್ನು ಕಂಡು ರೈತರು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್ ರೈತರನ್ನು ಸಮಾಧನಪಡಿಸಲು ಪ್ರಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ಈ ವೇಳೆ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ ಮಾತನಾಡಿ, ರೈತರ ಸಭೆ ಗೊಂದಲದ ಗೂಡಾಗಿದೆ. ಸರಿಯಾದ ಜಾಗವೇ ನಿಗಧಿ ಆಗಿಲ್ಲ. ಒಂದೂವರೆ ಗಂಟೆಯಾದರೂ ಅಧಿಕಾರಿಗಳು ಬಂದಿಲ್ಲ. ಆದ್ದರಿಂದ ಈ ಸಭೆಯನ್ನು ಬರ್ಖಾಸ್ತು ಮಾಡಿ ಯುಗಾದಿ ಹಬ್ಬದ ನಂತರ ಕರೆಯಲಿ ಎಂದಾಗ ರೈತರು ಸಹಮತ ವ್ಯಕ್ತಪಡಿಸಿದರು.

ಈ ವೇಳೆಗೆ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಾಗೂ ಡಿವೈಎಸ್‌ಪಿ ದಿನಕರ್ ಕೆಲ ರೈತರ ಜೊತೆಗೆ ಮಾತುಕತೆ ನಡೆಸಿ, ಯುಗಾದಿ ಹಬ್ಬದ ನಂತರ ರೈತರ ಸಭೆ ನಡೆಸಿ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

Also Read: ಸಾಲ ನೀಡಲು ಲಂಚದ ಬೇಡಿಕೆ | ಡಿಸಿಸಿ ಬ್ಯಾಂಕ್ ನೌಕರ ಲೋಕಾಯುಕ್ತ ಬಲೆಗೆ

ಸಭೆಯಲ್ಲಿ ರೈತ ಮುಖಂಡರಾದ ಹಂಪಯ್ಯನಮಾಳಿಗೆ ಧನಂಜಯ, ಬಸ್ತಿಹಳ್ಳಿ ಸುರೇಶ್‌ಬಾಬು, ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಎನ್.ಇ.ಲಕ್ಷ್ಮಿಕಾಂತ್ , ಹುಣಸೆಕಟ್ಟೆ ಕಾಂತರಾಜ್, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಸಿದ್ದಪ್ಪ, ತಿಮ್ಮಣ್ಣ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಹಲವು ರೈತರು ಆಗಮಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BoycottChitradurgaChitradurga newsChitradurga UpdatesFarmersFarmers MeetingKannada Latest NewsKannada NewsofficersZilla Panchayatprotestಅಧಿಕಾರಿಗಳುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪಂಚಾಯತ್ಪ್ರತಿಭಟನೆಬಹಿಷ್ಕರರೈತರ ಸಭೆರೈತರು
Share This Article
Facebook Email Print
Previous Article ಚಿತ್ರಹಳ್ಳಿಯ ಮೊರಾರ್ಜಿ ಶಾಲೆಯಲ್ಲಿ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿಗೆ ಭೂಮಿಪೂಜೆ
Next Article today bhavishya Astrology: ದಿನ ಭವಿಷ್ಯ | ಮಾರ್ಚ್ 26 | ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಉದ್ಯೋಗದಲ್ಲಿ ಬಡ್ತಿ, ಹೊಸ ವಾಹನ ಖರೀದಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up