ಪೋಲಿಸರ ದೌರ್ಜನ್ಯ ಖಂಡಿಸಿ ರೈತರ ಪ್ರತಿಭಟನೆ

ಪೋಲಿಸರ ದೌರ್ಜನ್ಯ ಖಂಡಿಸಿ ರೈತರ ಪ್ರತಿಭಟನೆ

CHITRADURGA NEWS | 26 JUNE 2025

ಚಿತ್ರದುರ್ಗ: ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಹೊರಾಟಗಾರರ ಮೇಲೆ ನಡೆದ ಪೋಲಿಸ್ ದೌರ್ಜನ್ಯ ಖಂಡಿಸಿ ಚಿತ್ರದುರ್ಗ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಸಂಯುಕ್ತ ಹೋರಾಟ ಸಮಿತಿ ವತಿಯಿಂದ ರೈತರು ಪ್ರತಿಭಟನೆ ನಡೆಸಿದರು.

Also Read: ಮಹಿಳಾ ಇಲಾಖೆ ಉಪನಿರ್ದೇಶಕರಾಗಿ ವಿಜಯ್ ಕುಮಾರ್ ಅಧಿಕಾರ ಸ್ವೀಕಾರ

ದೇವನಹಳ್ಳಿಯಲ್ಲಿ ಅತ್ಯಂತ ಶಾಂತಿಯುತವಾಗಿ ನಡೆದಿದ್ದ ರೈತರ ಪ್ರತಿಭಟನೆಯನ್ನು ಪೊಲಿಸ್ ಬಲ ಬಳಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಕಾಂಗ್ರೆಸ್ ಸರ್ಕಾರ ನಡೆಸಿದೆ.

ವಯಸ್ಸಾದ ಮಹಿಳೆರನ್ನು ಬಿಡದೆ ಎಲ್ಲಾ ಹೋರಾಟಗಾರರನ್ನು ಸಿಕ್ಕಾಪಟ್ಟಿ ಎಳೆದಾಡಿ ಪೋಲಿಸ್ ವಶಕ್ಕೆ ಪಡೆದಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂದೆಕೊರರಿಗೆ ಲಾಭ ಮಾಡಿಕೊಡಲು ಅಸಂಖ್ಯಾತ ರೈತ ಸಮುದಾಯವನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಆಗ್ರಹಿಸಿದರು.

ದೇವನಹಳ್ಳಿ ಚನ್ನರಾಯಪಟ್ಟಣ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು, ಬಂಧಿತ ರೈತರನ್ನು ಬಿಡುಗಡೆ ಮಾಡಬೇಕು, ಹೊರಾಟಗಾರರೊಂದಿಗೆ ಹೀನಾಯವಾಗಿ ವರ್ತಿಸಿದ ಪೋಲಿಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Also Read: ಜಿಲ್ಲೆಗೆ ಮತ್ತೊಂದು ಏಕಲವ್ಯ ವಸತಿ ಶಾಲೆಗೆ ಮನವಿ | ಜೆ.ಪಿ.ನಡ್ಡಾಗೆ ಗೋವಿಂದ ಕಾರಜೋಳ ಪತ್ರ

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಧನಂಜಯ, ಮಲ್ಲಿಕಾರ್ಜನ್, ಬಸ್ತಿಹಳ್ಳಿ ಸುರೇಶ್‍ಬಾಬು, ನಾಗರಾಜ್, ಪುರುಷೋತ್ತಮ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಸಿದ್ದಪ್ಪ, ಯಾದವರೆಡ್ಡಿ, ಹೊರಕೇರಪ್ಪ ಜಿ.ಕೆ.ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version