ಕೃಷಿ ಪಂಪ್‍ಸೆಟ್‍ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಶುಲ್ಕ | ಬೆಸ್ಕಾಂ ಎದುರು ರೈತರ ಪ್ರತಿಭಟನೆ

ಕೃಷಿ ಪಂಪ್‍ಸೆಟ್‍ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಶುಲ್ಕ | ಬೆಸ್ಕಾಂ ಎದುರು ರೈತರ ಪ್ರತಿಭಟನೆ

CHITRADURGA NEWS | 16 MAY 2025

ಚಿತ್ರದುರ್ಗ: ರಾಜ್ಯ ಸರ್ಕಾರ ಕೃಷಿ ಪಂಪ್‍ಸೆಟ್‍ಗಳಿಗೆ ಸ್ಮಾರ್ಟ್‍ಕಾರ್ಡ್, ಡಿಜಿಟಲ್ ಮೀಟರ್ ಅಳವಡಿಸಲು 10 ಸಾವಿರ ರೂ.ಗಳ ಶುಲ್ಕ ನಿಗಧಿಪಡಿಸಿರುವುದನ್ನು ವಿರೋಧಿಸಿ ತಿಪ್ಪಜ್ಜಿ ಸರ್ಕಲ್ ಸಮೀಪವಿರುವ ಬೆಸ್ಕಾಂ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪ್ರತಿಭಟನೆ ನಡೆಸಿ ಕಾರ್ಯಪಾಲಕ ಇಂಜಿನಿಯರ್‍ ಗೆ ಮನವಿ ಸಲ್ಲಿಸಲಾಯಿತು.

Also Read: ರಾಜವೀರ ಮದಕರಿ ನಾಯಕ ಪುಣ್ಯಸ್ಮರಣೆ | ಶ್ರೀರಂಗಪಟ್ಟಣದಲ್ಲಿ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ

ಪ್ರವಾಸಿ ಮಂದಿರದಿಂದ ಇಂಧನ ಸಚಿವರ ಅಣಕು ಶವಯಾತ್ರೆ ಮೂಲಕ ಬೆಸ್ಕಾಂಗೆ ಆಗಮಿಸಿದ ರೈತರು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ವಿದ್ಯುತ್ ಕ್ಷೇತ್ರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಖಾಸಗಿಕರಣಗೊಳಿಸಲು ನಡೆಸುತ್ತಿರುವ ಹುನ್ನಾರ ನಿಲ್ಲಬೇಕು. ಅಕ್ರಮ-ಸಕ್ರಮ ಅಡಿಯಲ್ಲಿ ರೈತರಿಗೆ ಈ ಹಿಂದೆ ವಿದ್ಯುತ್ ಪರಿಕರಗಳನ್ನು ನೀಡಿದಂತೆ ಉಚಿತ ವಿದ್ಯುತ್ ಕಲ್ಪಿಸಬೇಕು. ವಿದ್ಯುತ್ ಸಂಪರ್ಕಕ್ಕೆ ರೈತರ ಆಧಾರ್ ಜೋಡಣೆ ಮಾಡುವುದನ್ನು ಕೈಬಿಡಬೇಕು.

ಸರ್ಕಾರ ಟಿ.ಸಿ.ಗಳನ್ನು ಮಾತ್ರ ನೀಡುತ್ತಿದ್ದು, ಕಂಬ ಮತ್ತು ವೈರ್‍ಗಳನ್ನು ರೈತರೆ ಸ್ವಂತ ಖರ್ಚಿನಿಂದ ಜೋಡಿಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ಸರ್ಕಾರವೇ ವಿತರಿಸಬೇಕು.

ಜಮೀನಿನಲ್ಲಿ ವಾಸವಾಗಿರುವ ರೈತರಿಗೆ, ವಿದ್ಯಾರ್ಥಿಗಳಿಗೆ, ಹೈನುಗಾರಿಕೆ ನಡೆಸುವವರಿಗೆ ಸಂಜೆ ಆರು ಗಂಟೆಯಿಂದ ಬೆಳಿಗ್ಗೆ 6 ಗಂಟೆತನಕ ಸಮರ್ಪಕ ವಿದ್ಯುತ್ ನೀಡಬೇಕು.

Also Read: ಚಿತ್ರದುರ್ಗಕ್ಕೆ ಮತ್ತೊಂದು ರೈಲು ಮಾರ್ಗ | ಮಲೆನಾಡಿನಿಂದ ಅರೆ ಮಲೆನಾಡು ಸಂಪರ್ಕ | 1825 ಕೋಟಿ ವೆಚ್ಚ

11 ಕೆ.ವಿ. ಮತ್ತು ಎಲ್.ಟಿ.ಲೈನ್‍ಗಳಲ್ಲಿ ಹದಿನೈದು ವರ್ಷಗಳಿಂದ ಬೆಳೆದಿರುವ ಗಿಡ ಮರಗಳಿಂದಾಗಿ ಕರೆಂಟ್ ತಾಗಿ ಲೈನ್ ವೈರ್‍ಗಳು ಸುಟ್ಟು ಹೋಗುತ್ತಿವೆ. ಕೃಷಿ ಪಂಪ್‍ಸೆಟ್, ಟಿ.ಸಿ.ಮೋಟಾರ್, ಕೇಬಲ್‍ಗಳು ಸುಟ್ಟು ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಗಿಡ-ಮರಗಳನ್ನು ಕೂಡಲೆ ತೆರವುಗೊಳಿಸುವಂತೆ ರೈತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಈ.ಎನ್.ಲಕ್ಷ್ಮಿಕಾಂತ್ ಲಿಂಗಾವರಹಟ್ಟಿ, ತಾಲ್ಲೂಕು ಅಧ್ಯಕ್ಷ ಶಿವಮೂರ್ತಿ, ಮಹಿಳಾಧ್ಯಕ್ಷೆ ಲೋಲಾಕ್ಷಮ್ಮ, ಜಿಲ್ಲಾ ಕಾರ್ಯಾಧ್ಯಕ್ಷ ಓಂಕಾರಪ್ಪ, ಸಿ.ಡಿ.ನಿಲಿಂಗಪ್ಪ, ತಿಪ್ಪೇಸ್ವಾಮಿ, ನಾಗರಾಜ್, ಶ್ರೀನಿವಾಸ್, ರಂಗಸ್ವಾಮಿ, ಜಯಲಕ್ಷ್ಮಿ, ಮಂಜುಳ, ನಾಗರಾಜ್, ರುದ್ರಮುನಿ, ತಿಪ್ಪೇಸ್ವಾಮಿ, ಶಶಿಕಲ, ಸೈಯದ್ ಮಮ್ತಾಜ್, ಬಸವರಾಜರೆಡ್ಡಿ, ಮಹೇಶ್ವರಿ, ಮಂಜುನಾಥ ಸೇರಿದಂತೆ ರೈತರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version