By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುಂಗಾರಿನಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಆಗಬಾರದು | ಡಿಸಿ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುಂಗಾರಿನಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಆಗಬಾರದು | ಡಿಸಿ ಸೂಚನೆ

ಮುಖ್ಯ ಸುದ್ದಿ

ಮುಂಗಾರಿನಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಆಗಬಾರದು | ಡಿಸಿ ಸೂಚನೆ

News Desk Chitradurga News
Last updated: 25 March 2025 22:42
News Desk Chitradurga News
3 months ago
Share
ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 26 MARCH 2025

ಚಿತ್ರದುರ್ಗ: ಮುಂಬರುವ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರಿಗೆ ಯಾವುದೇ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಉಂಟಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

Also Read: ಸಾಲ ನೀಡಲು ಲಂಚದ ಬೇಡಿಕೆ | ಡಿಸಿಸಿ ಬ್ಯಾಂಕ್ ನೌಕರ ಲೋಕಾಯುಕ್ತ ಬಲೆಗೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸುವ ಕುರಿತು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಬಾರಿ ಅಲ್ಪ ಪ್ರಮಾಣದಲ್ಲಿ ರಸಗೊಬ್ಬರ ಕೊರತೆ ಉಂಟಾಗಿತ್ತು. ಕೂಡಲೇ ಹೆಚ್ಚುವರಿ ರಸಗೊಬ್ಬರ ತರಿಸಿ ವಿತರಿಸಲಾಯಿತು. ಅಂತಹ ಪರಿಸ್ಥಿತಿ ಈ ಬಾರಿ ತಲೆದೋರಬಾರದು. ಅಗತ್ಯಕ್ಕಿಂತ ಶೇ.25 ರಷ್ಟು ಹೆಚ್ಚಿನ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರಗಳ ದಾಸ್ತಾನು ಇರಿಸಲು ಅಧಿಕಾರಿಗಳು ಹಾಗೂ ಮಾರಾಟಗಾರರು ಕ್ರಮ ಕೈಗೊಳ್ಳಬೇಕು.

Also Read: ಏಪ್ರಿಲ್ 1 ರಿಂದ 15ರ ವರೆಗೆ ಏಕನಾಥೇಶ್ವರಿ ಜಾತ್ರೆ

ಸಗಟು ಹಾಗೂ ಚಿಲ್ಲೆರೆ ವ್ಯಾಪಾರಿಗಳು ರಸಗೊಬ್ಬರ ಮಾರಾಟದ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಲಭ್ಯವಿರುವ ದಾಸ್ತಾನು ವಿವರಗಳನ್ನು ಪ್ರತಿ ಅಂಗಡಿಗಳ ಮುಂದೆ ಸೂಚನಾ ಫಲಕಗಳಲ್ಲಿ ನಮೂದಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸುವುದು ಕೃಷಿ ಇಲಾಖೆ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಬಿತ್ತನೆ ಬೀಜ ಮಾದರಿ ಸಂಗ್ರಹಣೆ ಹಾಗೂ ವಿಶ್ಲೇಷಣೆಗೆ ಸೂಚನೆ:

ಕಾಯ್ದೆ ಅನುಸಾರ ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಂದ ವಿಶ್ಲೇಷಣೆಗೆ ಒಳಪಡಿಸಬೇಕು. ಒಂದು ವೇಳೆ ವಿಶ್ಲೇಷಣೆ ವರದಿಯಲ್ಲಿ ಕಳಪೆ ಗುಣಮಟ್ಟ ಕಂಡುಬಂದರೆ ಕಾನೂನು ರಿತ್ಯ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ ಸರಬರಾಜು ಮಾಡುವ ಕಂಪನಿ, ಮಾರಾಟಗಾರರ ಸಂಪೂರ್ಣ ವಿವರಗಳನ್ನು ದಾಖಲೆ ಸಹಿತ ಸಂಗ್ರಹಿಸಿಡಬೇಕು.

ರೈತರು ಬಿತ್ತನೆ ಬೀಜದ ಗುಣಮಟ್ಟದ ಕುರಿತು ದೂರು ಸಲ್ಲಿಸಿದರೆ, ಕೂಡಲೇ ಕ್ರಮಕೈಗೊಳ್ಳಬೇಕು. ಯಾವ ಕಾರಣಕ್ಕಾಗಿ, ಯಾವ ಹಂತದಲ್ಲಿ ಬೆಳವಣಿಗೆ, ಇಳುವರಿ ಕಡಿಮೆಯಾಗಿದೆ ಎಂಬುದನ್ನು ತಾಂತ್ರಿಕವಾಗಿ ಪತ್ತೆ ಹಚ್ಚಬೇಕು. ಪತ್ತೆಯಾದ ಅಂಶಗಳನ್ನು ರೈತರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

Also Read: ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆ ಮತ್ತಷ್ಟು ಹೆಚ್ಚಳ

ಪಕೃತಿ ಸ್ನೇಹಿ ಕೃಷಿ ಪದ್ದತಿಗಳ ಕುರಿತು ಜಿಲ್ಲೆಯ ರೈತರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಅರಿವು ಮೂಡಿಸುವ ಕೆಲಸವನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಅಧಿಕಾರಿಗಳು ಕೈಗೊಳ್ಳಬೇಕು. ಜಿಲ್ಲೆಯ ನೈಸರ್ಗಿಕ ಹವಾಮಾನ, ಮಳೆ ಪ್ರಮಾಣ, ಭೂಮಿಯ ಫಲವತ್ತತೆ, ನೀರಿನ ಲಭ್ಯತೆ ಆಧರಿಸಿ ಕೃಷಿ ಬೆಳೆಗಳನ್ನು ಬೆಳೆಯಲು ತಿಳಿ ಹೇಳಬೇಕು.

ಅತಿ ಕಡಿಮೆ ಮಳೆ ಬೀಳುವ, ಅಧಿಕ ಉಷ್ಣಾಂಶ ಇರುವ ಜಿಲ್ಲೆಯ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ರೈತರು ಅಡಿಕೆ ತೋಟ ಮಾಡಲು ಮುಂದಾಗುತ್ತಿದ್ದಾರೆ. ಇದು ಅವೈಜ್ಞಾನಿಕ ಹಾಗೂ ನಿಸರ್ಗಕ್ಕೆ ವಿರುದ್ದವಾದ ಕ್ರಿಯೆಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಅಂರ್ತಜಲ ಬಳಕೆ ಮಿತಿ ಮೀರಿದೆ.

ಇದಕ್ಕೆ ಕಡಿವಾಣ ಹಾಕದಿದ್ದರೆ, ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ. ಆದರೆ ರೈತರು ಹೆಚ್ಚಿನ ನೀರು ಬೇಡುವ ಅಡಿಕೆ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. ಇದನ್ನು ತಪ್ಪಿಸಿ ವೈಜ್ಞಾನಿಕ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರನ್ನು ಪ್ರೇರೆಪಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಜಿಲ್ಲೆಯಲ್ಲಿ 23 ಖಾಸಗಿ ಹಾಗೂ 6 ಸಹಕಾರಿ ಸಂಘ ಸೇರಿ 29 ಸಗಟು ರಸಗೊಬ್ಬರ ಮಾರಾಟಗಾರರು, 405 ಖಾಸಗಿ , 64 ಸಹಕಾರಿ ಸಂಘ, 30 ಎಫ್.ಪಿ.ಓ ಸೇರಿ 499 ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಇದ್ದಾರೆ. ಜೂನ್, ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ಡಿ.ಎ.ಪಿ ಮತ್ತು ಕಾಂಪ್ಲೇಕ್ಸ್ ರಸಗೊಬ್ಬರ ಹಾಗೂ ಜುಲೈ, ಅಗಸ್ಟ್, ಸೆಪ್ಟಂಬರ್ ಮಾಹೆಗಳಲ್ಲಿ ಯುರಿಯಾ ರಸಗೊಬ್ಬರಕ್ಕೆ ಹೆಚ್ಚು ಬೇಡಿಕೆ ಉಂಟಾಗುತ್ತದೆ.

Also Read: ನಮ್ಮ ಅವಧಿಯಲ್ಲೇ ರಸ್ತೆ ಅಗಲೀಕರಣ | ಸಚಿವ ಡಿ.ಸುಧಾಕರ್

ದಾವಣಗೆರೆ, ಶಿವಮೊಗ್ಗ ಮತ್ತು ಹಾವೇರಿ ರೈಲ್ವೇ ರೇಕ್ ಪಾಯಿಂಟ್‍ಗಳಿಂದ ಜಿಲ್ಲೆಯ ರಸಗೊಬ್ಬರಗಳನ್ನು ಸರಬರಾಜು ಸಂಸ್ಥೆಗಳು ಪಡೆದುಕೊಳ್ಳುತ್ತಿವೆ. ಸದ್ಯ ಜಿಲ್ಲೆಯಲ್ಲಿ ಮಾರ್ಚ್ 10ನೇ ತಾರೀಖಿನ ಅಂತ್ಯಕ್ಕೆ 5,615 ಮೆಟ್ರಿಕ್ ಟನ್ ಯೂರಿಯಾ, 2,385 ಮೆಟ್ರಿಕ್ ಟನ್ ಡಿ.ಎ.ಪಿ, 887 ಮೆಟ್ರಿಕ್ ಟನ್ ಎಂ.ಒ.ಪಿ, 7,981 ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ಹಾಗೂ 265 ಮೆಟ್ರಿಕ್ ಟನ್ ಎಸ್.ಎಸ್.ಪಿ ರಸಗೊಬ್ಬದ ದಾಸ್ತಾನು ಲಭ್ಯವಿದೆ ಎಂದು ಜಿಂಟಿ ಕೃಷಿ ನಿರ್ದೇಶಕ ಮಂಜುನಾಥ ಸಭೆಯಲ್ಲಿ ಮಾಹಿತಿ ನೀಡಿದರು.

ರಿಯಾಯಿತ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರದ ಅಕ್ರಮ ಸಾಗಾಣಿಕೆ ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡುವುದನ್ನು ತಡೆಗಟ್ಟುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಖುರೇಶಿ, ಕೃಷಿ ಇಲಾಖೆ ಉಪನಿರ್ದೇಶಕರುಗಳಾದ ಶಿವಕುಮಾರ್, ಪ್ರಭಾಕರ್ ಸೇರಿದಂತೆ ರಸಗೊಬ್ಬರ ಮಾರಾಟಗಾರರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDC VenkateshFarmersFertilizerKannada Latest NewsKannada NewsMonsoonsowing seedsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್ಬಿತ್ತನೆ ಬೀಜಮುಂಗಾರುರಸಗೊಬ್ಬರರೈತರು
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮಾರ್ಚ್ 26 | ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಉದ್ಯೋಗದಲ್ಲಿ ಬಡ್ತಿ, ಹೊಸ ವಾಹನ ಖರೀದಿ
Next Article ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪ್ರೊ.ಜಿ.ಪರಮೇಶ್ವರಪ್ಪಗೆ ಡಯಟ್‌ನಲ್ಲಿ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಗೆ ನೇರ ಅಹ್ವಾನ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
ಎಬಿವಿಪಿ ಹಿರಿಯೂರು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪ್ರಾಧ್ಯಾಪಕ ರಂಗಸ್ವಾಮಿ
ಹಿರಿಯೂರು
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up