CHITRADURGA NEWS | 30 JANUARY 2026
ಚಿತ್ರದುರ್ಗ: ಕೃಷಿ ಮತ್ತು ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಮುಂಬರುವ ಬಜೆಟ್ನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿಕ ಸಮಾಜದ ರಾಜ್ಯಧ್ಯಕ್ಷ ನಗರದ ಮಹದೇವಪ್ಪ ಹೇಳಿದರು.
ಇದನ್ನೂ ಓದಿ: ಫೆಬ್ರವರಿ 01 ರಂದು ಉದ್ಯೋಗ ಮೇಳ | ಹೊಸ QR CODE ಮೂಲಕ ನೊಂದಣಿಗೆ ಮನವಿ
ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕೃಷಿ ಮತ್ತು ನೀರಾವರಿ ಅಭಿವೃದ್ಧಿಗಾಗಿ ಸರ್ಕಾರ ಬಜೆಟ್ನಲ್ಲಿ ಮೀಸಲಿಡುವ ಅನುದಾನದ ಪ್ರಮಾಣ ಅತ್ಯಂತ ಕಡಿಮೆ ಇದೆ. ಹೀಗಾಗಿ ಮುಂಬರುವ ಬಜೆಟ್ನಲ್ಲಿ ರೈತರ ಅಬಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಕೃಷಿ ಮತ್ತು ನೀರಾವರಿ ಯೋಜನೆಗಳಿಗೆ ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಹಂಚಿಕೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿಶೇಷ ಪ್ರಸ್ತಾವನೆ ನೀಡುತ್ತೇನೆ ಎಂದು ನಗರದ ಮಹದೇವಪ್ಪ ಭರವಸೆ ನೀಡಿದರು.
ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಹನಿ ನೀರಾವರಿ ಯೋಜನೆಗೆ ರೈತರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಜಿಲ್ಲೆಯಲ್ಲಿ ಕೇವಲ 1,000 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಕಾಲುವೆ ನೀರಾವರಿ ಸೌಲಭ್ಯವಿದೆ. ಜಿಲ್ಲೆಯ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಇನ್ನು ಎರಡು-ಮೂರು ತಿಂಗಳಲ್ಲಿ ನೀರು ಒದಗಿಸುವ ಪ್ರಯತ್ನಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಹನಿ ನೀರಾವರಿಯಂತಹ ಆಧುನಿಕ ಪದ್ಧತಿಗಳು ಜಿಲ್ಲೆಯ ರೈತರಿಗೆ ವರದಾನವಾಗಲಿ ಎಂದರು.
ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ | ಸಾರ್ವಜನಿಕರಿಗೆ ಆಹ್ವಾನ ಪತ್ರಿಕೆ ವಿತರಣೆ
ಈಗಾಗಲೇ 3,000 ಕ್ಕೂ ಹೆಚ್ಚು ರೈತರು ಹನಿ ನೀರಾವರಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು ಅವರಿಗೆ ಕಾರ್ಯಾದೇಶ ನೀಡಲು ಹೆಚ್ಚುವರಿ ಅನುದಾನದ ಅಗತ್ಯವಿದೆ, ಜಿಲ್ಲೆಯ ರೈತರಿಗೆ ನೀರಿನ ಸಮಸ್ಯೆ ಅತಿ ದೊಡ್ಡ ಸವಾಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಹನಿ ನೀರಾವರಿ ಯೋಜನೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ನೀರಿನ ಉಳಿತಾಯ ಮತ್ತು ಬೆಳೆ ಉತ್ಪಾದನೆ ಹೆಚ್ಚಿಸಲು ಬಜೆಟ್ನಲ್ಲಿ ವಿಶೇಷ ಅನುದಾನ ನೀಡುವಂತೆ ಮನವಿ ಮಡಿದರು.
ಹನಿ ನೀರಾವರಿ ಯೋಜನೆಯು ಪ್ರಸ್ತುತ ವರ್ಷದಿಂದ ಸಾಮನ್ಯ ರೈತರಿಗೆ ಶೇ 50ರಷ್ಟು ಮತ್ತು ಎಸ್ಸಿ. ಎಸ್ಟಿ ವರ್ಗದ ಎಲ್ಲಾ ರೈತರಿಗೆ ಶೇ 90ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ರೈತರು ಒಮ್ಮೆ ಸೌಲಭ್ಯ ಪಡೆದರೆ ಮುಂದೆ ಏಳು ವರ್ಷಗಳ ನಂತರ ಮತ್ತೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ರೇಷ್ಮೆ ಸಿಬ್ಬಂದಿಗಳ ಕೊರತೆ :
ಜಿಲ್ಲೆಯಲ್ಲಿ ರೇಷ್ಮೆ ತಯಾರಿಗೆ ಕೌಶಲ್ಯ ಹೊಂದಿರುವ ಸಿಬ್ಬಂದಿಗಳ ಕೊರತೆಯಿದೆ. ಹೀಗಾಗಿ ಕೊರತೆ ಇರುವ ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇಮಕ ಮಾಡಲು ಅಗತ್ಯ ಕ್ರಮ ವಹಿಸಬೇಕು.
ಇದನ್ನೂ ಓದಿ: ಶೀಘ್ರದಲ್ಲೇ ಬೆಂಗಳೂರಿನಲ್ಲಿ SC – ST ಸಮಾವೇಶ | ಮಾಜಿ ಸಚಿವ ಎಚ್.ಆಂಜನೇಯ
ರೇಷ್ಮೆ ಬೆಳೆಯುವ ರೈತರಿಗೆ ಸಬ್ಸಿಡಿ ಎರಡು ಕಂತುಗಳಲ್ಲಿ ನೀಡಲಾಗಿದ್ದು ಮೊದಲನೆಯ ಕಂತು ರಾಜ್ಯ ಸರ್ಕಾರದಿಂದ ಒಂದು ವರ್ಷಕ್ಕೆ ಹಾಗೂ ಎರಡನೇ ಕಂತು ಕೇಂದ್ರ ಸರ್ಕಾರದಿಂದ ಒಂದುವರೆ ವರ್ಷಕ್ಕೆ ಸಬ್ಸಿಡಿ ನೀಡುತ್ತಿದ್ದು, ಹೀಗಾಗಿ ಸಬ್ಸಿಡಿ ಪಾವತಿ ಅವಧಿ ತುಂಬಾ ದೀರ್ಘವಾಗಿದೆ. ಇದರಿಂದ ರೇಷ್ಮೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಬರುವ ಅನುದಾನವನ್ನು ಒಂದೇ ಕಂತಿನಲ್ಲಿ ನೀಡುವುದು ಸೂಕ್ತ. ಈ ನಿಟ್ಟಿನಲ್ಲಿ ಯೋಜನೆ ಮಾರ್ಪಾಡು ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಲಾಯಿತು.
ಕೋಲ್ಡ್ ಸ್ಟೋರೆಜ್ ಸಮಸ್ಯೆ :
ಜಿಲ್ಲೆಯಲ್ಲಿ ಪಪ್ಪಾಯಿ, ಮಾವಿನಹಣ್ಣು, ಈರುಳ್ಳಿ, ದಾಳಿಂಬೆ, ಕಲ್ಲಂಗಡಿ ಇನ್ನು ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯಾಲಾಗುತ್ತಿದೆ. ಹಿರಿಯೂರಿನಲ್ಲಿರುವ ಸುಮಾರು 10 ವರ್ಷಗಳಷ್ಟು ಹಳೆಯದಾದ ಅಕ್ಷಯ್ ಪುಡ್ ಪಾರ್ಕ್ ಶೀತಲೀಕರಣ ಘಟಕವು ಪ್ರಸ್ತುತ ಸ್ಥಗಿತಗೊಂಡಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 30 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಇದರಿಂದ ಸುತ್ತಮುತ್ತಲಿನ ರೈತರಿಗೆ ತೊಂದರೆಯಾಗುತ್ತಿದ್ದು, ಇದನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಾದರೂ ಪುನರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಕ್ರಮ ಆಗಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿನಿರ್ದೇಶಕಿ ಸವಿತಾ ಮನವಿ ಮಾಡಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ವಿ.ಜಿ.ಪರಮೇಶ್ವರಪ್ಪ, ಜಿಲ್ಲಾ ಕೃಷಿ ಸಮಾಜ ಖಜಾಂಚಿ ಭಕ್ತ ಪ್ರಹ್ಲಾದ್, ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ರಾಗಿ ಶಿವಮೂರ್ತಪ್ಪ, ಜಿಲ್ಲಾ ಪ್ರತಿನಿಧಿಗಳಾದ ಕೇಶವ, ಶಶಿಧರ್, ರಮೇಶಪ್ಪ, ಶಿವಲಿಂಗಪ್ಪ, ಚಂದ್ರಶೇಖರಪ್ಪ, ರಮೇಶಪ್ಪ, ಜಗದೀಶ್ ಕಂದಿಕೆರೆ, ಹಾಗೂ ವಿವಿದ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
