CHITRADURGA NEWS | 26 NOVEMBER 2024
ಚಿತ್ರದುರ್ಗ: 2024-25ನೇ ಸಾಲಿನ ಹಿಂಗಾರು ಹಂಗಾಮಿನ ಈರುಳ್ಳಿ(Onion) ನೀರಾವರಿ ಬೆಳೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಮಂಗಳವಾರದ ಹತ್ತಿ ರೇಟ್ ಇಲ್ಲಿದೆ
ಚಿತ್ರದುರ್ಗ ತಾಲ್ಲೂಕು ಕಸಬಾ ಹಾಗೂ ತುರುವನೂರು, ಚಳ್ಳಕೆರೆ ತಾಲ್ಲೂಕಿನ ಕಸಬಾ ಹಾಗೂ ತಳಕು, ಹಿರಿಯೂರು ತಾಲ್ಲೂಕಿನ ಐಮಂಗಲ ಹಾಗೂ ಜೆ.ಜಿ.ಹಳ್ಳಿ ಹೋಬಳಿಗೆ ಈರುಳ್ಳಿ ನೀರಾವರಿ ಬೆಳೆಯನ್ನು ಅಧಿಸೂಚಿಸಲಾಗಿದೆ.
ಶೇ.90 ಇಡಿಮ್ಮಿಟಿ ಮಟ್ಟದ ನೀರಾವರಿ ಈರುಳ್ಳಿ ವಿಮೆ ಮೊತ್ತ ಹೆಕ್ಟೇರ್ಗೆ ರೂ.80500 ಇದ್ದು, ಇದರ ಶೇ.5 ರಷ್ಟು ರೈತ ವಿಮಾ ಕಂತು ರೂ.4025 ಆಗಿದೆ. ದಿ ಓರಿಯಂಟಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಕಂಪನಿಯಾಗಿ ಜಿಲ್ಲೆಗೆ ನಿಗಧಿಪಡಿಸಲಾಗಿದೆ.
ಬೆಳೆ ವಿಮೆ ನೊಂದಣಿಗೆ ಡಿಸೆಂಬರ್ 30 ಕಡೆಯ ದಿನವಾಗಿದೆ. ರೈತರು ವಿಮೆಯನ್ನು ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಆರ್ಥಿಕ ಸಂಸ್ಥೆಗಳಲ್ಲಿ ನೊಂದಣಿ ಮಾಡಬಹುದು.
ಕ್ಲಿಕ್ ಮಾಡಿ ಓದಿ: ಶಾಸಕ ಟಿ.ರಘುಮೂರ್ತಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕ | ರಾಜ್ಯ ಸರ್ಕಾರದಿಂದ ಆದೇಶ
ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರ ಅಥವಾ ಹತ್ತಿರದ ಬ್ಯಾಂಕುಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
