
CHITRADURGA NEWS | 23 AUGUST 2024
ಚಿತ್ರದುರ್ಗ: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಪ್ರಥಮ ದರ್ಜೆ ಸಹಾಯಕಿ ಆಯೇಷಾ ಸಿದ್ದಿಖಾ ಅವರನ್ನು ಜಿಲ್ಲಾಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಅಕ್ಷರ ದಾಸೋಹ ಕಾರ್ಯಕ್ರಮ ಅನುಷ್ಠಾನ ಸಂಬಂಧ ಇಲಾಖೆ ಉಪಯೋಗಕ್ಕೆ ಬಾಡಿಗೆ ಆಧಾರದಲ್ಲಿ ಹೊರಮೂಲ ಸಂಸ್ಥೆಯಿಂದ ವಾಹನ ಸೇವೆ ಪಡೆಯಲು ದ್ವಿ–ಲಕೋಟೆಯಲ್ಲಿ ಟೆಂಡರ್ ಕರೆಯಲಾಗಿತ್ತು. ಟೆಂಡರ್ ಪ್ರಕ್ರಿಯೆ ವೇಳೆ ಆಯೇಷಾ ಸಿದ್ದಿಖಾ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ (ಕೆಟಿಪಿಪಿ) ಉಲ್ಲಂಘಿಸಿರುವುದು ಕಂಡು ಬಂದಿದೆ.
ಕ್ಲಿಕ್ ಮಾಡಿ ಓದಿ: ಟ್ರಾಫಿಕ್ ಸ್ನಿಗಲ್ ಸಮಸ್ಯೆಗೆ ಶೀಘ್ರ ಮುಕ್ತಿ | ಎಸ್ಪಿ ರಂಜಿತ್ ಕುಮಾರ್ ಬಂಡಾರು
ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ನೋಟೀಸ್ ಜಾರಿ ಮಾಡಿದ್ದರು. ಆದರೆ ನೋಟೀಸ್ಗೆ ನೀಡಿದ ಉತ್ತ ಸಮರ್ಪಕವಾಗಿಲ್ಲದ ಕಾರಣ ಶುಕ್ರವಾರ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
