ಮುಖ್ಯ ಸುದ್ದಿ
ಬಾಳೆದಿಂಡಿನಿಂದ ನಾರು ಸಂಸ್ಕರಣೆ ತರಬೇತಿ | ಬದಲಾಯ್ತು ದಿನಾಂಕ

ಚಿತ್ರದುರ್ಗನ್ಯೂಸ್.ಕಾಂ
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ-ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ಆಶ್ರಯದಲ್ಲಿ ಜ.8 ರಿಂದ 12 ರವರೆಗೆ ಆಯೋಜಿಸಿದ್ದ ‘ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ಅಭಿವೃದ್ಧಿ ತರಬೇತಿ’ ಕಾರ್ಯಾಗಾರ ಜ.16 ರಿಂದ 20ರವರೆಗೆ ನಡೆಯಲಿದೆ.
ಇದನ್ನೂ ಓದಿ: ಘೋಷಣೆಯಾಯ್ತು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ದಿನಾಂಕ
ಜಿಲ್ಲೆಯ ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಉಳ್ಳವರು ಮತ್ತು ಕುಶಲಕರ್ಮಿಗಳು ಐದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು ಜ.10 ರೊಳಗೆ ಗಣೇಶ್ ತೋಳಾರ್ ಅವರ ದೂರವಾಣಿ ಸಂಖ್ಯೆ 7349695100 ಹಾಗೂ ಕೋಟೇಶ್ ಕೊರವರ ಅವರ ದೂರವಾಣಿ ಸಂಖ್ಯೆ 9663364234 ಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗಿದೆ.
ಇದನ್ನೂ ಓದಿ: ತಿಂಗಳ ಅಂತ್ಯಕ್ಕೆ ದುರ್ಗಕ್ಕೆ ಕಾದಿದೆ ನೀರಿನ ಗಂಡಾಂತರ | ಕುಸಿಯುತ್ತಿದೆ ಸೂಳೆಕೆರೆ ನೀರಿನ ಮಟ್ಟ
ಅಭ್ಯರ್ಥಿಗಳು ನೋಂದಾಯಿಸಿದ ನಂತರ ಸಂಸ್ಥೆಯು ಅರ್ಹರನ್ನು ಆಯ್ಕೆ ಮಾಡಿ ತರಬೇತಿಗೆ ಆಹ್ವಾನಿಸುತ್ತದೆ. ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನ ತಂತ್ರಜ್ಞಾನ ಮತ್ತು ನಾವಿನ್ಯತಾ ಕೇಂದ್ರದ ಕಾರ್ಯಕ್ರಮ ವ್ಯವಸ್ಥಾಪಕ ಪ್ರತಾಪ್ ಮೂರ್ತಿ ತಿಳಿಸಿದ್ದಾರೆ.
