By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರ್ ಹಾಗೂ ಎಸ್‍ಡಿಎ ವಿದುದ್ಧ ಎಫ್‍ಐಆರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರ್ ಹಾಗೂ ಎಸ್‍ಡಿಎ ವಿದುದ್ಧ ಎಫ್‍ಐಆರ್

ಕ್ರೈಂ ಸುದ್ದಿಮುಖ್ಯ ಸುದ್ದಿ

ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರ್ ಹಾಗೂ ಎಸ್‍ಡಿಎ ವಿದುದ್ಧ ಎಫ್‍ಐಆರ್

chitradurganews.com
Last updated: 12 October 2023 17:56
chitradurganews.com
2 years ago
Share
FIR
FIR
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಮಾರಮ್ಮ ದೇವಾಲಯಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಡತ ಹಾಗೂ ಕರ್ನಾಟಕ ಹೈಕೊರ್ಟ್ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ನ್ಯಾಯಾಲಯದ ವಿಚಾರಣೆಗೆ ಮಂಡಿಸದೆ ಕರ್ತವ್ಯ ಲೋಪ ಎಸಗಿರುವ ಆರೋಪದಡಿ ಧಾರ್ಮಿಕ ದತ್ತಿ ಇಲಾಖೆಯ ತಹಶೀಲ್ದಾರ್ ಹಾಗೂ ದ್ವತೀಯ ದರ್ಜೆ ಸಹಾಯಕರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಮುಜರಾಯಿ ಶಾಖೆಯ ಧಾರ್ಮಿಕ ದತ್ತಿ ತಹಶೀಲ್ದಾರ್ ಬಿ.ಎಸ್.ವೆಂಕಟೇಶ್ ಹಾಗೂ ದ್ವಿತೀಯ ದರ್ಜೆ ಸಹಾಯಕ ವೀರಭದ್ರಪ್ಪ ವಿರುದ್ಧ ಅಕ್ಟೋಬರ್ 11 ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಪತ್ರಾಂಕಿತ ಸಹಾಯಕರಾದ ಸಂತೋಷ್ ಕುಮಾರ್ ಜಿ. ನೀಡಿದ ದೂರಿಗೆ ಅನುಗುಣವಾಗಿ ಎಫ್‍ಐಆರ್ ದಾಖಲಾಗಿದೆ.

ಗೌರಸಮುದ್ರ ಮಾರಮ್ಮ ದೇವಾಲಯದ ಪ್ರಕರಣದ ಕಡತ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಪ್ರಕರಣದ ಕಡತವು ಜಿಲ್ಲಾಧಿಕಾರಿ ಕಚೇರಿ ಮುಜರಾಯಿ ಶಾಖೆಯ ಧಾರ್ಮಿಕ ದತ್ತಿ ತಹಶೀಲ್ದಾರ್ ಕಚೇರಿಯಲ್ಲಿರುತ್ತದೆ. ಇವರು ಕಡತವನ್ನು 2023ರ ಸೆಪ್ಟೆಂಬರ್ 08 ರಂದು ಹಾಗೂ ಸೆಪ್ಟೆಂಬರ್ 27 ರಂದು ಜಿಲ್ಲಾಧಿಕಾರಿಗಳ ನ್ಯಾಯಾಲಯದ ವಿಚಾರಣೆಗೆ ಹಾಜರುಪಡಿಸಿರುವುದಿಲ್ಲ.

ಇದನ್ನೂ ಓದಿ: ಎಂಟು ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದವನಿಗೆ 20 ವರ್ಷ ಜೈಲು

ನ್ಯಾಯಾಲಯದ ವಿಚಾರಣೆಗೆ ಕಡತವನ್ನು ಹಾಜರು ಪಡಿಸದ ಕಾರಣ 2023ರ ಸೆಪ್ಟೆಂಬರ್ 30 ರಂದು ಜಿಲ್ಲಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಅನ್ನು ಜಾರಿ ಮಾಡಿದ್ದರು. ಅದಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಮುಂದಿನ ವಿಚಾರಣೆ ಒಳಗಾಗಿ ಕತಡವನ್ನು ಹಾಜರುಪಡಿಸುತ್ತೇವೆ ಎಂಬುದಾಗಿ ಉತ್ತರ ನೀಡಿದ್ದರು.

ಪ್ರಕರಣವು 2023ರ ಅಕ್ಟೋಬರ್ 11ರಂದು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಿಗದಿಯಾಗಿ, ಅಧಿಕಾರಿ, ಸಿಬ್ಬಂದಿ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದಿಲ್ಲ. ವಾದಿಗಳ ಪರ ವಕೀಲರು ವಕಾಲತನ್ನು ವಹಿಸಿದ್ದು, ವಕೀಲರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು, ಆದರೆ, ನ್ಯಾಯಾಲಯದ ಬೆಂಚ್ ಕ್ಲರ್ಕ್ ಅವರು ನ್ಯಾಯಾಲಯದಲ್ಲಿ ಕಡತ ಸಲ್ಲಿಸಿಲ್ಲ ಎಂಬುದಾಗಿ ತಿಳಿಸಿದ್ದು, ಜಿಲ್ಲಾಧಿಕಾರಿಗಳು ಸಿಬ್ಬಂದಿಗೆ ಕಡತದ ಬಗ್ಗೆ ವಿಚಾರಣೆ ಮಾಡಲಾಗಿ ಸಿಬ್ಬಂದಿಯವರು ಕಡತವು ಕಳೆದುಹೋಗಿರುತ್ತದೆ ಎಂದು ತಿಳಿಸಿರುತ್ತಾರೆ.

ಸಿಬ್ಬಂದಿಯವರು ನ್ಯಾಯಾಲಯದ ವಿಚಾರಣೆ ದಿನ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಗೌರಸಮುದ್ರ ಮಾರಮ್ಮ ದೇವಾಲಯದ ಪ್ರಕರಣದ ಕಡತ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಪ್ರಕರಣದ ಕಡತವನ್ನು ಹಾಜರುಪಡಿಸಿ, ಪ್ರಕರಣದ ಸಂಬಂಧ ವಾಸ್ತವಾಂಶದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು ಸಿಬ್ಬಂದಿಯ ಕರ್ತವ್ಯವಾಗಿದ್ದು, ನ್ಯಾಯಾಲಯಕ್ಕೆ ಕಡತ ಹಾಜರುಪಡಿಸದೇ, ತಮ್ಮ ಸುಪರ್ದಿಯಲ್ಲಿದ್ದ ಕಡತವನ್ನು ಕಳೆದು ಹಾಕಿ, ಪಕ್ಷಗಾರರ, ನ್ಯಾಯವಾದಿಗಳಿಗೆ ತೊಂದರೆಯನ್ನುಂಟು ಮಾಡಿ, ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷತನ ಮತ್ತು ಬೇಜವಾಬ್ದಾರಿತನ ತೋರಿರುವುದು ಅಪರಾಧವಾಗಿರುತ್ತದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaDistrict CollectorFIRGaurasandra Maramma DeviHigh CourtKannada Latest NewsMujuraiSDATehsildarಎಫ್‌ಐಆರ್‌ಎಸ್‍ಡಿಎಕನ್ನಡ ಲೇಟೆಸ್ಟ್ ನ್ಯೂಸ್ಗೌರಸಂದ್ರ ಮಾರಮ್ಮ ದೇವಿಚಿತ್ರದುರ್ಗಜಿಲ್ಲಾಧಿಕಾರಿತಹಶೀಲ್ದಾರ್ಮುಜುರಾಯಿಹೈಕೋರ್ಟ್‌
Share This Article
Facebook Email Print
Previous Article ಜಿಲ್ಲಾಧಿಕಾರಿ ದಿವ್ಯಪ್ರಭು ಬರ ಪರಿಹಾರಕ್ಕೆ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ | ಡಿಸಿ ದಿವ್ಯಪ್ರಭು
Next Article arecanut price list ಅಡಕೆ ಧಾರಣೆ | ಅಕ್ಟೋಬರ್ 12 ರಂದು ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ.
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up