By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹರಿಹರೇಶ್ವರ ಸನ್ನಿಧಿಯಲ್ಲಿ ನಿಧಿಗಳ್ಳರ ದುಷ್ಕೃತ್ಯ; ದೇಗುಲದ ಬಾಗಿಲಿಗೆ ಬೆಂಕಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹರಿಹರೇಶ್ವರ ಸನ್ನಿಧಿಯಲ್ಲಿ ನಿಧಿಗಳ್ಳರ ದುಷ್ಕೃತ್ಯ; ದೇಗುಲದ ಬಾಗಿಲಿಗೆ ಬೆಂಕಿ

ಮುಖ್ಯ ಸುದ್ದಿ

ಹರಿಹರೇಶ್ವರ ಸನ್ನಿಧಿಯಲ್ಲಿ ನಿಧಿಗಳ್ಳರ ದುಷ್ಕೃತ್ಯ; ದೇಗುಲದ ಬಾಗಿಲಿಗೆ ಬೆಂಕಿ

News Desk Chitradurga News
Last updated: 27 December 2023 14:01
News Desk Chitradurga News
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗನ್ಯೂಸ್‌.ಕಾಂ

ನಿಧಿ ಆಸೆಗೆ ಕೋಟೆ, ಕೊತ್ತಲು, ಪುರಾತನ ದೇವಸ್ಥಾನ ಶೋಧ ಕಾರ್ಯದಂತಹ ದುಷ್ಕೃತ್ಯ ನಡೆಸುತ್ತಿರುವ ಘಟನೆ ಇತ್ತೀಚಿಗೆ ಹೆಚ್ಚಾಗಿವೆ. ಕಳ್ಳರು ಮಾಡುವ ಇಂತಹ ಕೃತ್ಯಕ್ಕೆ ದೇವಸ್ಥಾನಗಳು, ವಿಗ್ರಹಗಳು ಹಾಳಾಗುವ ಮೂಲಕ ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ. ಇಂತಹದ್ದೊಂದು ಕೃತ್ಯ ಹೊಸದುರ್ಗ ತಾಲ್ಲೂಕಿನ ನಡೆದಿದೆ.

ಹೊಸದುರ್ಗ ಸಮೀಪದ ಕಾರೇಹಳ್ಳಿಯಲ್ಲಿನ ಇತಿಹಾಸ ಪ್ರಸಿದ್ಧ ಹೊಯ್ಸಳರ ಕಾಲದ ಹರಿಹರೇಶ್ವರ ದೇವಾಲಯದ ಬಾಗಿಲಿಗೆ ಕಳ್ಳರು ಬೆಂಕಿ ಹಚ್ಚಿದ್ದಾರೆ ದುಷ್ಕೃತ್ಯ ಮೆರೆದಿದ್ದಾರೆ.

ವೇದಾವತಿ ನದಿ ತಟದಲ್ಲಿರುವ ಹೊಯ್ಸಳರ ಕಾಲದ ಈ ದೇವಾಲಯ ಗ್ರಾಮದ ಹೊರವಲಯದಲ್ಲಿದೆ. ಇದನ್ನು ಬೇಚಾರ ಅಥವಾ ಹಾಳೂರು ಎನ್ನಲಾಗುತ್ತದೆ. ಇಲ್ಲಿ ಎಲ್ಲೇ ಅಗೆದರೂ ಗ್ರಾಮದ ಅವಶೇಷಗಳು ಪತ್ತೆಯಾಗಿವೆ. ಹಾಗಾಗಿ ಇಲ್ಲಿ ಹಿಂದೆ ಊರಿದ್ದಿರಬಹುದು ಎಂದು ಊಹಿಸಲಾಗಿದೆ.

ಈ ಎಲ್ಲವನ್ನು ತಿಳಿದ ಕಳ್ಳರ ಗ್ಯಾಂಗ್ ದೇವಾಲಯದಲ್ಲಿನ ಬಾಗಿಲಿನ ಬೀಗ ತೆಗೆಯಲು ಪ್ರಯತ್ನಿಸಿ, ಅದು ಸಾಧ್ಯವಾಗದೇ ಇದ್ದಾಗ ಬೆಂಕಿ ಹಚ್ಚಿದ್ದಾರೆ ಎಂದು ಶಂಕಿಸಲಾಗಿದೆ. ಹುಣ್ಣಿಮೆ ಕಾರಣಕ್ಕೆ ಸೋಮವಾರ ರಾತ್ರಿ ದೇಗುಲದಲ್ಲಿ ಕಳ್ಳತನ ಅಥವಾ ನಿಧಿ ಶೋಧಕ್ಕೆ ಪ್ರಯತ್ನ ನಡೆದಿದೆ ಎನ್ನುತ್ತಾರೆ ಜನರು.

ದೇವಸ್ಥಾನದ ಗರ್ಭಗುಡಿ ಬಾಗಿಲು ಭದ್ರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸ್‌ ಶ್ವಾನದಲ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ActCaseFireHarihareshwarPoliceTempleಕೃತ್ಯದೇವಸ್ಥಾನಪೊಲೀಸ್ಪ್ರಕರಣಬೆಂಕಿಹರಿಹರೇಶ್ವರ
Share This Article
Facebook Email Print
Previous Article ಬೇಟೆಗಾರರ ಬಂಧನ | ಮೃತ ಕೃಷ್ಣಮೃಗ ವಶಕ್ಕೆ
Next Article ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ರೈತ ಸಂಘ ಆಕ್ರೋಶ; ಸಂಪುಟದಿಂದ ವಜಾಕ್ಕೆ ಆಗ್ರಹ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up