CHITRADURGA NEWS | 15 DECEMBER 2024
ಚಿತ್ರದುರ್ಗ: ವೇದಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಯುವಕ ಶಿಡ್ಲಯ್ಯನಕೋಟೆ ಶ್ರೀಧರ(40) ಬೆಳಗಿನ ಜಾವ 4.30ರ ವೇಳೆಗೆ ನದಿಯಲ್ಲಿ ಮೀನು ಎತ್ತಲು ಹೋದಾಗ ಕಾಲಿಗೆ ಬಲೆ ಸಿಲುಕಿ ನೀರಿನಿಂದ ಹೊರಬರಲಾಗದೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಮತ್ತೆ ಆರಂಭವಾಯ್ತು ಒಳಹರಿವು | ಇಂದಿನ ನೀರಿನ ಮಟ್ಟ ಎಷ್ಟು ?
ಮೂಲತಃ ಮೀನು ಹಿಡಿಯುತ್ತಿದ್ದ ಶ್ರೀಧರ, ಈಜು ಬಲ್ಲವನಾಗಿದ್ದ. ಆದರೆ, ಅಚಾನಕ್ ಕಾಲಿಗೆ ಬಲೆ ತೊಡರು ಹಾಕಿಕೊಂಡಿದ್ದು, ಬಿಡಿಸಿಕೊಳ್ಳಲು ಸಾಧ್ಯವಾಗಿಲ್ಲ.
ಹಿರಿಯೂರು ತಾಲೂಕಿನ ಹೊಸಹಳ್ಳಿ ಬಳಿಯಿರುವ ಚೆಕ್ ಡ್ಯಾಂ ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಠಾಣೆ ಪೊಲೀಸರು ಅಗ್ನಿಶಾಮಕ ದಳ ತೆರಳಿ ಪರಿಶೀಲನೆ ನಡೆಸಿದ್ದು, ಯುವಕ ಮೃತ ದೇಹವನ್ನು ನೀರಿನಿಂದ ಮೇಲೆ ತೆಗೆದಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
