CHITRADURGA NEWS | 31 JULY 2026
ಚಿತ್ರದುರ್ಗ: ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಜಿಲ್ಲಾಮಲಯ ಯೋಜನೆ ಕಾರ್ಯಕ್ರಮದಡಿ ಜಿಲ್ಲೆಯ ಪರಿಶಿಷ್ಟ ಜಾತಿ 130 ಜನ ಫಲಾನುಭವಿಗಳು ಮತ್ತು ಪರಿಶಿಷ್ಟ ಪಂಗಡದ 60 ಜನ ಫಲಾನುಭವಿಗಳಿಗೆ ಸಲಕರಣೆ ಕಿಟ್, 20 ಜನ ಫಲಾನುಭವಿಗಳಿಗೆ ಮೀನು ಮಾರಾಟಗಾರಿಗೆ ದ್ವಿಚಕ್ರ ವಾಹನ ಖರೀದಿಸಲು ಶೇ.40 ರಷ್ಟು ಅಥವಾ ಗರಿಷ್ಠ 0.03ಲಕ್ಷ ಆರ್ಥಿಕ ನೆರವು ಮತ್ತು ಮೀನುಗಾರಿಕೆ ಅಭಿವೃದ್ಧಿ ಕಾರ್ಯಕ್ರಮದಲ್ಲಿ, ಮೀನುಮರಿ ಖರೀದಿ ಸಹಾಯಕ, 81 ಮೀನುಗಾರಿಕೆ ಸಲಕರಣೆ ಕಿಟ್, ಕೆರೆ ಅಂಚಿನಲ್ಲಿ ಮೀನುಮರಿ ಪಾಲನೆ ಮತ್ತು ಗ್ರಾಮ ಪಂಚಾಯಿತಿ ಕೆರೆಗಳಿಗೆ ಉಚಿತ ಮೀನು ಮರಿ ದಾಸ್ತಾನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಆ.31 ರ ಒಳಗೆ ಆಯಾ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಹಾಗೂ ಮೊಳಕಾಲ್ಮೂರು ಸಹಾಯಕ ನಿರ್ದೇಶಕ ತುಳಿಸಿದಾಸ್ ಮೊಬೈಲ್ ಸಂಖ್ಯೆ 9342187356, ಚಳ್ಳಕೆರೆ ಸಹಾಯಕ ನಿರ್ದೇಶಕಿ ದೀಪಾಲಿ ಮೊಬೈಲ್ ಸಂಖ್ಯೆ 9740900866, ಹಿರಿಯೂರು ಸಹಾಯಕ ನಿರ್ದೇಶಕ ಮಂಜುನಾಥ ಮೊಬೈಲ್ ಸಂಖ್ಯೆ 7022933310, ಹಾಗೂ ಹೊಸದುರ್ಗ ಮತ್ತು ಹೊಳಲ್ಕೆರೆ ಸಹಾಯಕ ನಿರ್ದೇಶಕ ವೆಂಕಟೇಶ್ವರ ಮೊಬೈಲ್ ಸಂಖ್ಯೆ 9945004235 ಕರೆ ಮಾಡಬಹುದು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

