CHITRADURGA NEWS | 31 AUGUST 2024
ಚಿತ್ರದುರ್ಗ: ಆಹಾರ(Food) ಸುರಕ್ಷತೆ ಆಂದೋಲನದ ಅಂಗವಾಗಿ ಜಿಲ್ಲಾ ವ್ಯಾಪ್ತಿಯ 95 ಹೋಟೆಲ್, ಬೇಕರಿ, ರೆಸ್ಟೋರೆಂಟ್, ಬೀದಿ ಬದಿ ವ್ಯಾಪಾರಿಗಳ ತಪಾಸಣೆಯನ್ನು ಆಹಾರ ಸುರಕ್ಷತೆ(safety) ಮತ್ತು ಗುಣಮಟ್ಟ(Quality) ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಆಗಸ್ಟ್ 30 ಹಾಗೂ 31 ಜರುಗಿದ ತಪಾಸಣೆಯಲ್ಲಿ 61 ಆಹಾರ ಮಾದರಿ ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗಾಗಿ ಕಳುಹಿಸಲಾಗಿರುತ್ತದೆ. ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮ ಪಾಲಿಸದ 52 ವ್ಯಾಪಾರಿಗಳಿಗೆ ನೊಟೀಸು ಜಾರಿ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: Application: ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಸಲ್ಲಿಕೆ ಅವಧಿ ಸೆ.9 ರವರೆಗೆ ವಿಸ್ತರಣೆ
ಮುಂದಿನ ದಿನಗಳಲ್ಲಿ ನ್ಯೂನತೆ ಸರಿಪಡಿಸಿಕೊಳ್ಳದಿದ್ದರೆ, ತಪ್ಪು ಮರುಕಳಿಸಿದರೆ ದಂಡ ಜೊತೆಗೆ ಶಿಕ್ಷೆಯನ್ನು ವಿಧಿಸಲಾಗುವುದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಅಲ್ಲದೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಕುರಿತು, ವೈಯಕ್ತಿಕ ಸ್ವಚ್ಛತೆ ಕುರಿತು ಆರೋಗ್ಯ ಶಿಕ್ಷಣ ನೀಡಿ ಜಾಗೃತಿ ಮೂಡಿಸಿದ್ದಾರೆ.
ತಪಾಸಣೆ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ರಾಜಶೇಖರ ಪಾಳೇದವರ, ಆಹಾರ ಸುರಕ್ಷತಾ ಅಧಿಕಾರಿಗಳಾದ ನಂದಿನಿ ಕಡಿ, ತಿರುಮಲೇಶ್ ಎನ್.ಹೆಚ್ ಮಂಜುನಾಥ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
