By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ | ಶಾಲೆ, ಹಾಸ್ಟೆಲ್, ಅಂಗನವಾಡಿಳಿಗೆ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ | ಶಾಲೆ, ಹಾಸ್ಟೆಲ್, ಅಂಗನವಾಡಿಳಿಗೆ ಸೂಚನೆ

ಮುಖ್ಯ ಸುದ್ದಿ

ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ | ಶಾಲೆ, ಹಾಸ್ಟೆಲ್, ಅಂಗನವಾಡಿಳಿಗೆ ಸೂಚನೆ

News Desk Chitradurga News
Last updated: 24 May 2024 19:22
News Desk Chitradurga News
1 year ago
Share
ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ
ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 MAY 2024

ಚಿತ್ರದುರ್ಗ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರವಾಗಿ ಶಾಲೆ, ಅಂಗನವಾಡಿ ಕೇಂದ್ರಗಳು, ಮಹಿಳಾ ಸೇವಾ ಸಂಘಗಳು, ನ್ಯಾಯಬೆಲೆ ಅಂಗಡಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧಿ ಅಂಗಡಿಗಳು, ವಸತಿ ನಿಲಯಗಳು ಆಹಾರ ಸುರಕ್ಷತೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಜೂನ್ ಮಾಹೆಯೊಳಗೆ ಶೇ.100ರಷ್ಟು ನೊಂದಣಿ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಕೈಜೋಡಿಸಿ ಆಹಾರ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಕಾಂಗ್ರೆಸ್‌ನಿಂದ ಲೋಕೇಶ್‌ ತಾಳಿಕಟ್ಟೆ ಉಚ್ಚಾಟನೆ

ಹೋಟೆಲ್, ಬೀದಿಬದಿಯ ಆಹಾರ ಪದಾರ್ಥಗಳ ಮಾರಾಟ ಮಾಡುವ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಗುಣಮಟ್ಟ ಹಾಗೂ ಸ್ವಚ್ಚತೆ ಕುರಿತು ತಪಾಸಣೆ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಆಹಾರ ಪಧಾರ್ಥಗಳ ಸಂಗ್ರಹಣೆ, ಮಾರಾಟ, ತಯಾರಿಕೆಯ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಮಾನದಂಡಗಳನ್ನು ಅನುಸರಿಸಬೇಕು. ಸಾರ್ವಜನಿಕರು ಹಾಗೂ ಸರ್ಕಾರಿ ಅಧಿಕಾರಿಗಳು ಸ್ಪಂದಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕು ಎಂದರು.

ಆಹಾರ ಸುರಕ್ಷತೆ ಅಂಕಿತ ಅಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ, ನಿಬಂಧನೆ 2011 ಆಗಸ್ಟ್ 5ರಂದು ದೇಶದಾದ್ಯಂತ ಜಾರಿಗೆ ಬಂದಿದೆ. ಆಹಾರ ಸುರಕ್ಷತೆ ಹಿನ್ನಲೆಯಲ್ಲಿ ಇಲಾಖೆವತಿಯಿಂದ ಪರವಾನಗಿ ಮತ್ತು ನೋಂದಣಿ ಕಾರ್ಯ ಮಾಡುತ್ತೇವೆ.

ಇದನ್ನೂ ಓದಿ: ಉಚ್ಚಂಗಿ ಯಲ್ಲಮ್ಮ ದೇವಿಯ ವೈಭವದ ಮೆರವಣಿಗೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದರೆ ನಿಯಮಾನುಸಾರ ದಂಡ ವಿಧಿಸಲಾಗುತ್ತದೆ. ಜಿಲ್ಲಾ ವ್ಯಾಪ್ತಿಯಲ್ಲಿನ ವಿವಿಧ ಸ್ಥಳಗಳಲ್ಲಿ ಆಹಾರ ಪದಾರ್ಥಗಳ ವ್ಯಾಪಾರಸ್ಥರಿಗೆ ಹಾಗೂ ಗ್ರಾಹಕರಿಗೆ ಆಹಾರ ಸುರಕ್ಷತೆ ಕುರಿತು ಮಾಹಿತಿ ನೀಡಿದೆ ಹಾಗೂ ಉದ್ದಿಮೆ ತಪಾಸಣೆ ನಡೆಸಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಆಹಾರ ಸೇವಿಸುವ ಮಕ್ಕಳ ಸುರಕ್ಷತೆ ಪ್ರಮುಖವಾದದು. ಮಧ್ಯಾಹ್ನದ ಬಿಸಿಯೂಟ ನೀಡುವ ಶಾಲೆಗಳು, ಅಂಗನವಾಗಿ, ವಿವಿಧ ಇಲಾಖೆಗಳ ವಸತಿ ನಿಲಯಗಳು, ಎಲ್ಲಾ ನ್ಯಾಯಬೆಲೆ ಅಂಗಡಿಗಳು, ಎಪಿಎಂಸಿ ಆವರಣದಲ್ಲಿರುವ ಎಲ್ಲಾ ತರಹದ ವ್ಯಾಪಾರಸ್ಥರು ಹಾಗೂ ದಲ್ಲಾಳಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧಿ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು, ಕಡ್ಡಾಯವಾಗಿ ಆಹಾರ ಸುರಕ್ಷತೆಯ ನೋಂದಣಿ ಮಾಡಿಸಬೇಕು.

ಇದನ್ನೂ ಓದಿ: ಲೋಕಸಭೆ ಚುನಾವಣೆ | ಎಷ್ಟು ಸುತ್ತಿನಲ್ಲಿ ಮತ ಎಣಿಕೆ | ಎಷ್ಟು ಟೇಬಲ್ ಇರಲಿದೆ | ಏಜೆಂಟರೇಷ್ಟು ಗೊತ್ತಾ ?

ಜಿಲ್ಲೆಯಲ್ಲಿ 2225 ಶಾಲೆಗಳಲ್ಲಿ ಈಗಾಗಲೇ 1371 ಶಾಲೆಗಳು ನೋಂದಣಿ ಮಾಡಿಕೊಂಡಿದ್ದು, 1146 ಶಾಲೆಗಳು ನೋಂದಣಿ ಬಾಕಿ ಇದೆ. 2331 ಅಂಗನವಾಡಿ ಕೇಂದ್ರಗಳ ಪೈಕಿ 1367 ಅಂಗನವಾಡಿಗಳು ನೋಂದಣಿಯಾಗಿದ್ದು, 964 ಅಂಗನವಾಡಿಗಳು ಬಾಕಿ ಇವೆ. 607 ನ್ಯಾಯಬೆಲೆ ಅಂಗಡಿಗಳ ಪೈಕಿ 328 ಅಂಗನವಾಡಿಗಳು ನೊಂದಣಿಗೆ ಬಾಕಿ ಇವೆ. ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ತಮ್ಮ ಆಧಾರ್ ಕಾರ್ಡ್ ಹಾಗೂ ರೂ.100 ಶುಲ್ಕವನ್ನು ಪಾವತಿಸಿ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳಿಂದ ಕಡ್ಡಾಯವಾಗಿ ಆಹಾರ ಸುರಕ್ಷತೆಯ ನೊಂದಣಿ ಮಾಡಿಸಬೇಕು ಎಂದು ಹೇಳಿದರು.

ಮಕ್ಕಳಿಗೆ ಊಟ ತಯಾರಿಸುವ ಬಾಣಿಸಿಗರು ಹಾಗೂ ಬಡಿಸುವವರು ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕು. ನೀರಿನ ಪರೀಕ್ಷೆ, ಅಡುಗೆಯವರು, ಕೆಲಸಗಾರರಿಗೆ ಕೈಗವಚ, ತಲೆಗವಚ ಧರಿಸಬೇಕು. ಅಡುಗೆ ಸ್ಥಳ ಸ್ವಚ್ಛವಾಗಿರಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaCompulsoryFoodKannada NewsNoticeregistersafetyಆಹಾರಕಡ್ಡಾಯಕನ್ನಡ ನ್ಯೂಸ್ಚಿತ್ರದುರ್ಗನೊಂದಣಿಸುರಕ್ಷತೆಸೂಚನೆ
Share This Article
Facebook Email Print
Previous Article jobs in chitradurga news ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
Next Article arecanut price list ಅಡಿಕೆ ಧಾರಣೆ | ಮೇ.24 ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up