CHITRADURGA NEWS | 19 MARCH 2024
ಚಿತ್ರದುರ್ಗ: ಲೋಕಸಭೆ ಚುನಾವಣೆ ಕಾವಿನ ಜತೆಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರ ಕಾರ್ಯ ಕೂಡ ಪ್ರಾರಂಭವಾಗಿದೆ. ಸೋತ ಜಾಗದಲ್ಲೇ ಪುನಃ ಗೆಲುವಿನ ನಗೆ ಬೀರಬೇಕು ಎಂದು ಛಲ ತೊಟ್ಟು ಅಖಾಡಕ್ಕೆ ಧುಮುಕಿದ್ದಾರೆ ಪತಿ–ಪತ್ನಿ.
ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ದಂಪತಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ದಿನದಿಂದ ಕ್ಷೇತ್ರ ವ್ಯಾಪ್ತಿಯ5 ಜಿಲ್ಲೆಗಳ 35 ತಾಲ್ಲೂಕುಗಳಲ್ಲಿ ಸಭೆ, ಪ್ರಚಾರ ನಡೆಸುತ್ತಿದ್ದಾರೆ. ಎಲ್ಲಿಯೂ ಚಿಕ್ಕ ಅಸಮಾಧಾನ, ಗೊಂದಲ ಉಂಟಾಗದಂತೆ ಎಚ್ಚರವಹಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: https://chitradurganews.com/code-of-conduct-vigilance-for-hatti-tippesan-fair/
ಕ್ಲಿಕ್ ಮಾಡಿ ಓದಿ: https://chitradurganews.com/plying-squad-to-prevent-illegal-excise-duty/
‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆ. ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬುದನ್ನು ಎಲ್ಲರೂ ತಿಳಿಯಬೇಕು. ಲೋಕಸಭಾ ಚುನಾವಣೆ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು’ ಎಂದು ಮನವಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮಾತನಾಡಿ,‘ಕಾಂಗ್ರೆಸ್ ಸರ್ಕಾರದ ಪ್ರತಿಯೊಂದು ಸಾಧನೆಗಳನ್ನು ಜನರಿಗೆ ಮುಟ್ಟಿಸಬೇಕು. ಅಧಿಕಾರ, ಹಣ ಶಾಶ್ವತವಲ್ಲ, ಸೇವೆ ಮುಖ್ಯ’ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: https://chitradurganews.com/farmers-hard-work-made-the-canal-clean/
ಮುಖಂಡರಾದ ಗೀತಾ ನಂದಿನಿಗೌಡ, ಅಮೃತೇಶ್ವರಸ್ವಾಮಿ, ಕೃಷ್ಣಮೂರ್ತಿ, ಖಾದಿ ರಮೇಶ್, ಈರಲಿಂಗೇಗೌಡ, ಜೆ.ಆರ್. ಸುಜಾತಾ, ಬ್ರಿಜೇಶ್ ಎಸ್. ಯಾದವ, ತಿಪ್ಪೇಸ್ವಾಮಿ, ಆರ್.ನಾಗೇಂದ್ರ ನಾಯ್ಕ, ಚಂದ್ರಾನಾಯ್ಕ, ಚಿಗಳಿಕಟ್ಟೆ ಕಾಂತರಾಜ್, ಜ್ಞಾನೇಶ್, ವಿ.ಶಿವಕುಮಾರ್, ರಜಿಯಾ ಸುಲ್ತಾನಾ, ಮದಲಮರಿಯಾ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number