ಮುಖ್ಯ ಸುದ್ದಿ
Free Health Checkup; ಗುಡ್ಡದರಂಗವ್ವನಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ


CHITRADURGA NEWS | 19 OCTOBER 2024
ಚಿತ್ರದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಾಡನಾಯಕನಹಳ್ಳಿ ವಲಯದ ಗುಡ್ಡದರಂಗವ್ವನಹಳ್ಳಿಯಲ್ಲಿ ಲಕ್ಷ್ಮಿಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಹಾಗೂ ಸ್ವ-ಸಹಾಯ ಸಂಘದ ಸದಸ್ಯರುಗಳಿಗೆ ಉಚಿತ ಆರೋಗ್ಯ ತಪಾಸಣಾ(Free Health Checkup) ಶಿಬಿರ ನಡೆಸಲಾಯಿತು.
ಕ್ಲಿಕ್ ಮಾಡಿ ಓದಿ: APMC; ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ಇಂದಿನ ಹತ್ತಿ ರೇಟ್
ತಾಲ್ಲೂಕು ವೈದ್ಯಾಧಿಕಾರಿ ಡಾ.ಗಿರೀಶ್ ಮಾತನಾಡಿ ಆರೋಗ್ಯವೇ ಭಾಗ್ಯ. ಮನೆಯಲ್ಲಿ ಎಲ್ಲರೂ ಆರೋಗ್ಯವಾಗಿದ್ದರೆ ಮಾತ್ರ ಕುಟುಂಬ ನೆಮ್ಮದಿಯಾಗಿರಲು ಸಾಧ್ಯ. ಸಮಯಕ್ಕೆ ಸರಿಯಾಗಿ ಆಹಾರ ಮತ್ತು ನೀರು ಸೇವಿಸಿ. ಜಂಕ್ಫುಡ್ಗಳನ್ನು ಯಥೇಚ್ಚವಾಗಿ ಬಳಸಬಾರದು ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ಆಧುನಿಕ ಜೀವನದಲ್ಲಿನ ಒತ್ತಡ ಹಾಗೂ ಬದಲಾದ ಆಹಾರ ಪದ್ದತಿಯಿಂದ ಎಲ್ಲರೂ ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಆಗಿಂದಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸಕಾಲಕ್ಕೆ ಚಿಕಿತ್ಸೆ ಪಡೆಯಬೇಕೆಂದು ತಿಳಿಸಿದರು.
ಮಹಿಳೆಯರು ಸದಾ ಆರೋಗ್ಯವಾಗಿರಬೇಕೆಂಬ ಉದ್ದೇಶವಿಟ್ಟುಕೊಂಡು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಉಚಿತವಾಗಿ ರಕ್ತದೊತ್ತಡ, ಶುಗರ್, ಹಿಮೊಗ್ಲೋಬಿನ್, ಕಣ್ಣು ಹಾಗೂ ಎಚ್.ಐ.ವಿ. ತಪಾಸಣೆ ನಡೆಸಿ ಆರೋಗ್ಯದ ಮಹತ್ವ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದರು.
ಕ್ಲಿಕ್ ಮಾಡಿ ಓದಿ: Bsc Student: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ಇಡೀ ದಿನ ಏನೇನಾಯ್ತು | ಪೋಷಕರು ಹೇಳಿದ್ದೇನು
ಮಿತವಾದ ಆಹಾರ, ಯೋಗಾಸನ, ಧ್ಯಾನ, ವಾಯು ವಿಹಾರ ಕಡ್ಡಾಯವಾಗಿ ಮಾಡಬೇಕು. ಅತಿಯಾದ ಮೊಬೈಲ್ ಬಳಕೆಯಿಂದ ಕೂಡ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಹಾಗಾಗಿ ಸಾಧ್ಯವಾದಷ್ಟು ಮೊಬೈಲ್ನಿಂದ ದೂರವಿರುವುದು ಒಳ್ಳೆಯದು ಎಂದು ಮಹಿಳೆಯರಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ 95 ಜನ ಮಹಿಳೆಯರು ಅಸಂಕ್ರಾಮಿಕ ರೋಗಗಳ ತಪಾಸಣೆಗೆ ಒಳಪಟ್ಟರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 10 ಜನ ಜನರಿಗೆ ಕನ್ನಡಕ ವಿತರಣೆ, ಔಷಧೋಪಚಾರ ನೀಡಲಾಯಿತು.
ಕ್ಲಿಕ್ ಮಾಡಿ ಓದಿ: ನಾಳೆ ಚಿತ್ರದುರ್ಗದಲ್ಲಿ RSS ಪಥಸಂಚಲನ
ಶಿಬಿರದಲ್ಲಿ ವಿಶ್ವಬಂಧು ಆಸ್ಪತ್ರೆಯ ಡಾ.ಅಣ್ಣೇಶ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ಡಾ.ಬಿ.ಗೀತ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೂಪ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಲೀಲಾ ಎಸ್.ಬಾಗೋಡಿ ಸೇರಿದಂತೆ ಜ್ಞಾನವಿಕಾಸ ಕೇಂದ್ರದ ಮಹಿಳೆಯರು, ಸ್ವ-ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

