CHITRADURGA NEWS | 06 NOVEMBER 2024
ಚಿತ್ರದುರ್ಗ: ಕರ್ನಾಟಕ ಅಂಚೆ, ದೂರಸಂಪರ್ಕ ನಿವೃತ್ತ ನೌಕರರ ಸಂಘ ಬೆಂಗಳೂರು(BANGALORE) ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ(Post Office)ಯಲ್ಲಿ ನ.09 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕೇಂದ್ರ ರಾಜ್ಯ ಹಾಗೂ ಸಾರ್ವಜನಿಕ ಕ್ಷೇತ್ರದ ನಿವೃತ್ತ ನೌಕರರಿಗೆ ಪಿಂಚಣಿ ಮುಂದುವರೆಸಲು ಬೇಕಾಗುವ ಜೀವನ ಪ್ರಮಾಣ ಪತ್ರ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕ್ಲಿಕ್ ಮಾಡಿ ಓದಿ: ಜಾನುಕೊಂಡ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುಳಾ ಸ್ವಾಮಿ ಆಯ್ಕೆ
ಅಭಿಯಾನಕ್ಕೆ ಸ್ವಯಂಸೇವಕರಾಗಿ ಸಂಘದ ಉಪಾಧ್ಯಕ್ಷ ಬೆಂಗಳೂರಿನ ಜನರಲ್ ಮ್ಯಾನೇಜರ್ ಫೈನಾನ್ಸ್ ಅಂಡ್ ಅಕೌಂಟ್ಸ್ ಕಛೇರಿಯ ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ಎನ್.ನಾಗಲಕ್ಷ್ಮೀ, ಮೈಸೂರಿನ ಅಂಚೆ ತರಬೇತಿ ಕೇಂದ್ರದ ನಿವೃತ್ತ ಉಪ ನಿರ್ದೇಶಕ ಎಸ್.ರಾಜಶೇಖರ್, ನಿವೃತ್ತ ಹಿರಿಯ ಅಂಚೆ ಅಧೀಕ್ಷಕರಾದ ಡಿ.ಶಿವಯ್ಯ, ಪ್ರಕಾಶ್, ದಾವಣಗೆರೆಯ ನಿವೃತ್ತ ಉಪ ಅಂಚೆ ಪಾಲಕ ಬಿ. ಟಿ.ಚಂದ್ರಶೇಖರ್ ಭಾಗವಹಿಸಲಿದ್ದಾರೆ.
ಚಿತ್ರದುರ್ಗದ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿವೃತ್ತ ನೌಕರರು ಹಾಗೂ ಕೇಂದ್ರ ಸಾರ್ವಜನಿಕ ಸಂಸ್ಥೆಯ ನಿವೃತ್ತ ನೌಕರರು ಅಭಿಯಾನದ ಸದುಪಯೋಗ ಪಡೆದುಕೊಂಡು ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕೆಂದು ವಿನಂತಿಸಿಕೊಳ್ಳಲಾಗಿದೆ.
ಕ್ಲಿಕ್ ಮಾಡಿ ಓದಿ: ಗ್ರಾ.ಪಂ ಉಪಚುನಾವಣೆ | ವೇಳಾಪಟ್ಟಿ ಪ್ರಕಟ
ಜೀವನ ಪ್ರಮಾಣ ಪತ್ರಕ್ಕೆ ಬೇಕಾದ ದಾಖಲೆಗಳು :
ಪಿಂಚಣಿ ಪುಸ್ತಕ, ಪಿಂಚಣಿ ಜಮಾ ಆಗುತ್ತಿರುವ ಬ್ಯಾಂಕ್ ಅಥವಾ ಅಂಚೆ ಇಲಾಖೆಯ ಉಳಿತಾಯ ಖಾತೆ ಪಾಸ್ ಬುಕ್, ಆಧಾರ್ ಕಾರ್ಡ್, ಆಧಾರ್ ಕಾರ್ಡಿಗೆ ಜೋಡಣೆ ಯಾಗಿರುವ ಮೊಬೈಲ್ ತರಬೇಕೆಂದು ಕರ್ನಾಟಕ ಅಂಚೆ ಮತ್ತು ದೂರಸಂಪರ್ಕ ನಿವೃತ್ತ ನೌಕರರ ಸಂಘ ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number