
CHITRADURGA NEWS | 16 NOVEMBER 2025
ಚಿತ್ರದುರ್ಗ: ರಾಜ್ಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ಹಾಗೂ ಬಿಸಿಯೂಟ ಯೋಜನೆ ಜಾರಿಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿರುವುದು ಸ್ವಾಗತರ್ಹ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಉದ್ಯಾನವನಕ್ಕೆ ಸಾಲುಮರದ ತಿಮ್ಮಕ್ಕ ಹೆಸರಿಡಿ | ಎಚ್.ಆಂಜನೇಯ

ಈ ಸೌಲಭ್ಯಗಳ ಜಾರಿಯ ಬಗ್ಗೆ ಚಿತ್ರದುರ್ಗದಲ್ಲಿ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಡೆದ ಶೈಕ್ಷಣೀಕ ಸಮ್ಮೇಳನದಲ್ಲಿ ಸರಕಾರಕ್ಕೆ ಹಕ್ಕೊತ್ತಾಯ ಮಂಡಿಸಿದ್ದು, ಸರಕಾರ ಈಗ ಇದರ ಬಗ್ಗೆ ಚರ್ಚಿಸಿ ತೀರ್ಮಾನಿಸಿರುವುದು ಸಂತಸದ ವಿಷಯ ಎಂದರು.
ಈ ಯೋಜನೆಗಳು ಜಾರಿಗೊಳಿಸುವುದರಿಂದ ಪಿಯುಸಿ ಫಲಿತಾಂಶ ಸುಧಾರಣೆ ಮಾಡಲು ಸಾಧ್ಯವಿಲ್ಲ. ಈಗಾಗಲೇ ಸರಕಾರ ಹಾಗೂ ಶಿಕ್ಷಣ ಇಲಾಖೆ ಫಲಿತಾಂಶ ಸುಧಾರಣೆ ತರುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಅದ್ಯಾವುದೇ ಕ್ರಮಗಳು ಪರಿಣಾಮ ಬೀರುವುದಿಲ್ಲ. ಇವುಗಳು ಕೇವಲ ನಾಮಾಕವಸ್ಥೆಗೆ ಮಾತ್ರವೇ ಅನ್ವಯಿಸುತ್ತವೆ.
ರಾಜ್ಯದಲ್ಲಿರುವ ಸರಕಾರಿ ಹಾಗೂ ಅನುದಾನಿತ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳು ಭರ್ತಿಯಾಗಬೇಕು. ಕೇವಲ ನಿಯೋಜನೆ ಮಾಡುವುದರಿಂದ ಮೂರು ದಿನಗಳು ಮಾತ್ರವೇ ಉಪನ್ಯಾಸಕರು ಮಕ್ಕಳಿಗೆ ಲಭ್ಯವಾಗುತ್ತಾರೆ.
ಇದನ್ನೂ ಓದಿ: ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ
ಇದರಿಂದ ಪಠ್ಯಕ್ರಮ ಪೂರ್ಣಗೊಳಿಸಲು ಮಾತ್ರ ಸಾಧ್ಯವಾಗುತ್ತ ದೆಯೇ ವಿನಹಾ ಮಕ್ಕಳಿಗೆ ಕಲಿಸಲು ಸಾಧ್ಯವಾಗುವುದಿಲ್ಲ.
ಆದ್ದರಿಂದ ಈಗಿರುವ ಉಪನ್ಯಾಸಕರಿಗೆ ಹೆಚ್ಚಿನ ಕಾರ್ಯ ಒತ್ತಡ ಹೇರುವ ಬದಲು ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು ಭರ್ತಿ ಮಾಡುವ ಮೂಲಕ ಫಲಿತಾಂಶ ಸುಧಾರಣೆಗೆ ಸರಕಾರ ಬದ್ದತೆ ತೋರಿಸಬೇಕಿದೆ. ಇಲ್ಲವಾದರೆ ಇದು ನೆಪಮಾತ್ರದ ಕಾರ್ಯಕ್ರಮವಾದಂತಾಗುತ್ತದೆ ಎಂದಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
