CHITRADURGA NEWS | 25 JUNE 2025
ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಮೈಸೂರಿನಲ್ಲಿ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿ ಪ್ರಾರಂಭವಾಗಿದೆ. ಜುಲೈ 12 ಅರ್ಜಿ ಸಲ್ಲಿಸಲು ಕೊನೆಯ ದಿನ.
Also Read: ಗೈರು ಹಾಜರಿ | ಇಬ್ಬರು ಸರ್ಕಾರಿ ನೌಕರರ ಅಮಾನತು

ರಾಷ್ಟ್ರೀಯ ಪುನರ್ವಸತಿ ಮಂಡಳಿ (ಆರ್ಸಿಐ) ಪಠ್ಯಕ್ರಮ ಹಾಗೂ ಮಾರ್ಗಸೂಚಿಯನ್ವಯ ಡಿಪ್ಲೊಮೊ ಇನ್ ಸ್ಪೆಷನ್ ಎಜುಕೇಷನ್ (ದೃಷ್ಠಿದೋಷ), ಡಿಪ್ಲೊಮೊ ಇನ್ ಸ್ಪೆಷಲ್ ಎಜುಕೇಷನ್ (ಶ್ರವಣದೋಷ) ವಿಶೇಷ ಡಿ.ಎಡ್ ಕೋರ್ಸ್ಗಳನ್ನು ನಡೆಸಲಾಗುತ್ತಿದೆ.
ಈ ತರಬೇತಿ ಕೇಂದ್ರದಲ್ಲಿ 2025-26ನೇ ಸಾಲಿಗೆ ದೃಷ್ಠಿದೋಷ ಹಾಗೂ ಶ್ರವಣದೋಷ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೊಮೊ ಇನ್ ಸ್ಪೆಷಲ್ ಎಜುಕೇಷನ್ (ದೃಷ್ಠಿದೋಷ), ಡಿಪ್ಲೊಮೊ ಇನ್ ಸ್ಪೆಷಲ್ ಎಜುಕೇಷನ್ (ಶ್ರವಣದೋಷ) ವಿಶೇಷ ಡಿ.ಎಡ್ ಕೋರ್ಸ್ಗಳಿಗೆ ಉಚಿತ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ. ಉಚಿತವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ.
Also Read: ಹೊಸದುರ್ಗ ಪೊಲೀಸರಿಂದ ಕೊಲೆ ಆರೋಪಿಗಳ ಬಂಧನ | ಹುಣವಿನಡು ಗ್ರಾಮದಲ್ಲಿ ನಡೆದಿದ್ದ ಭೀಕರ ಹತ್ಯೆ
ಪಿಯುಸಿ ಉತ್ತೀರ್ಣರಾದವರು ಹಾಗೂ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಂಧ ಹಾಗೂ ಶ್ರವಣದೋಷ ಮಕ್ಕಳ ತರಬೇತಿ ಕೇಂದ್ರ, ತಿಲಕ್ ನಗರ, ಮೈಸೂರು, ದೂರವಾಣಿ ಸಂಖ್ಯೆ 0821-2491600 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
