CHITRADURGA NEWS | 30 MAY 2025
ಚಿತ್ರದುರ್ಗ: ರೋಗ ರುಜಿನಗಳಿಗೆ ಸುಲಭವಾಗಿ ತುತ್ತಾಗುವಂತ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಒತ್ತಾಯಿಸಿದರು.
Also Read: ಕರಡಿಗೆ ಅಪರಿಚಿತ ವಾಹನ ಡಿಕ್ಕಿ | ಸ್ಥಳದಲ್ಲೇ ಸಾವು

ನಗರಸಭೆ ಮುಂಭಾಗ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೌರ ಕಾರ್ಮಿಕರು ನಾಲ್ಕು ದಿನಗಳಿಂದ ನಡೆಸುತ್ತಿರುವ ಮುಷ್ಕರ ನ್ಯಾಯಯುತವಾಗಿದೆ. ವಿಧಾನಸಭೆಯಲ್ಲಿ ಚರ್ಚಿಸುವಂತೆ ಬಿಜೆಪಿ ನಾಯಕರುಗಳಲ್ಲಿ ಮನವಿ ಮಾಡುವುದಾಗಿ ಭರವಸೆ ನೀಡಿದರು.
ದಲಿತರು, ಬಡವರ ಪರ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೌರ ಕಾರ್ಮಿಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು ಎಂದು ಹೇಳಿದರು.
ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಪೌರ ಕಾರ್ಮಿಕರು ಕೆಲಸ ಮಾಡಿದ್ದಾರೆ. ಬಿ.ಬಿ.ಎಂ.ಪಿ.ಯಲ್ಲಿನ ಪೌರ ಕಾರ್ಮಿಕರ ಸೇವೆಯನ್ನು ಹೇಗೆ ಖಾಯಂಗೊಳಿಸಲಾಗಿದೆಯೋ ಅದೇ ರೀತಿ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರ ಸೇವೆ ಖಾಯಂಗೊಳಿಸಿ ಜೀವನಕ್ಕೆ ಭದ್ರತೆ ಒದಗಿಸಲಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
Also Read: ರಾಜ್ಯದಲ್ಲಿ ಕರೋನಾ ಹೆಚ್ಚಳ | ಮುಂಜಾಗ್ರತಾ ಕ್ರಮಕ್ಕೆ ಬಿ.ಆನಂದ್ ಸೂಚನೆ
ಇ.ಎಸ್.ಐ. ಪಿ.ಎಫ್. ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳು ಪೌರ ಕಾರ್ಮಿಕರಿಗೆ ಸಿಗಬೇಕು. ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡುವುದನ್ನು ರದ್ದುಪಡಿಸಿ ನೇರ ನೇಮಕಾತಿ ಮಾಡಿಕೊಂಡು ಸರ್ಕಾರದಿಂದಲೇ ವೇತನ ಪಾವತಿಸಬೇಕು ಎಂದರು.
ಈ ವೇಳೆ ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್, ಹರೀಶ್, ದೀಪು, ನಾಮ ನಿರ್ದೇಶಕ ಸದಸ್ಯ ಕೃಷ್ಣ ಸೇರಿದಂತೆ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
