By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನರೇಗಾ ಕೂಲಿಗಾರರಿಗೆ ಖುದ್ದು ಅರೋಗ್ಯ ತಪಾಸಣೆ ಮಾಡಿಸಿದ ಜಿ.ಪಂ ಸಿಇಒ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನರೇಗಾ ಕೂಲಿಗಾರರಿಗೆ ಖುದ್ದು ಅರೋಗ್ಯ ತಪಾಸಣೆ ಮಾಡಿಸಿದ ಜಿ.ಪಂ ಸಿಇಒ

ಮುಖ್ಯ ಸುದ್ದಿ

ನರೇಗಾ ಕೂಲಿಗಾರರಿಗೆ ಖುದ್ದು ಅರೋಗ್ಯ ತಪಾಸಣೆ ಮಾಡಿಸಿದ ಜಿ.ಪಂ ಸಿಇಒ

News Desk Chitradurga News
Last updated: 31 May 2024 20:34
News Desk Chitradurga News
1 year ago
Share
ನರೇಗಾ ಯೋಜನೆಯಡಿ ಕೆಲಸ ಮಾಡುವರನ್ನು ಭೇಟಿ ಮಾಡಿದ ಜಿ.ಪಂ. ಸಿಇಒ
ನರೇಗಾ ಯೋಜನೆಯಡಿ ಕೆಲಸ ಮಾಡುವರನ್ನು ಭೇಟಿ ಮಾಡಿದ ಜಿ.ಪಂ. ಸಿಇಒ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 31 MAY 2024

ಚಿತ್ರದುರ್ಗ: ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವವರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಖುದ್ದು ಅರೋಗ್ಯ ತಪಾಸಣೆ ಮಾಡಿಸಿದರು.

ಇದನ್ನೂ ಓದಿ: ಡಿ.ಟಿ.ಶ್ರೀನಿವಾಸ್ ಪರ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮತಯಾಚನೆ 

ಮೊಳಕಾಲ್ಮುರು ತಾಲ್ಲೂಕು ತಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮದೇವರಹಳ್ಳಿ ಕೆರೆ ಅಂಗಳದಲ್ಲಿ ಹೂಳು ತೆಗೆಯುವ ಕಾಮಗಾರಿ ಮತ್ತು ಕೋನಪುರ ಗ್ರಾಮದ ಸರ್ಕಾರಿ ಹಳ್ಳ ಹೂಳು ತೆಗೆಯುವ ಕಾಮಗಾರಿ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೇರಹಳ್ಳದಲ್ಲಿ ಹೂಳು ತೆಗೆಯುವ ಚಾಲನೆಯಲ್ಲಿರುವ ಕಾಮಗಾರಿ ಸ್ಥಳಕ್ಕೆ ಜಿ.ಪಂ. ಸಿಇಒ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ ಹೂಳು ತೆಗೆಯುತ್ತಿದ್ದ ಕೂಲಿಗಾರರೊಂದಿಗೆ ಚರ್ಚಿಸಿ ಮಾತನಾಡಿದ ಅವರು.

ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭ

ಯಾವುದೋ ಒತ್ತಡದಲ್ಲಿ ಬಿಡುವಿಲ್ಲದೇ ಕೂಲಿಗಾರರು ಕೆಲಸ ಮಾಡುತ್ತಿರುತ್ತಾರೆ. ಅವರು ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳಲಾರದಷ್ಟು ಉದಾಸೀನ ತೋರಿರುತ್ತಾರೆ. ಆದ್ದರಿಂದ ನರೇಗಾ ಯೋಜನೆಯಡಿ ಕೂಲಿಗಾರರಿಗೆ ಕೆಲಸ ಒದಗಿಸುವುದರ ಜೊತೆಗೆ ಆರೋಗ್ಯವನ್ನೂ ಕಾಪಾಡುವ ನಿಟ್ಟಿನಲ್ಲಿ ಕಾಮಗಾರಿ ಸ್ಥಳಗಳಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ,

ಅವರುಗಳಿಗೆ ಪ್ರಥಮವಾಗಿ ರಕ್ತದ ಒತ್ತಡ, ಶುಗರ್, ಮೈಯಲ್ಲಾದ ಗಾಯಗಳು ಇನ್ನೀತರೆ ಕಾಯಿಲೆಗಳ ಬಗ್ಗೆ ಪರೀಕ್ಷಿಸಲಾಗುತ್ತದೆ. ಕಾಮಗಾರಿ ಮಾಡುವ ವೇಳೆ ಗಾಯಗೊಂಡರೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆಯನ್ನು ನೀಡಲಾಗುತ್ತದೆ.

ಇದರಿಂದ ಕೂಲಿಗಾರರಿಗೆ ಅನುಕೂಲವಾಗುತ್ತದೆ. ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬಹುದು ಎಂಬುವುದರ ಬಗ್ಗೆ ತಿಳಿಸಿದ ಅವರು, ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಅರಿವು ಮೂಡಿಸಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ದಿನಗಣನೆ | ಮಧ್ಯಾಹ್ನದೊಳಗೆ ಫಲಿತಾಂಶ ಘೋಷಣೆ ಸಾಧ್ಯತೆ

ಖುದ್ದು ಅರೋಗ್ಯ ತಪಾಸಣೆ ಮಾಡಿಸಿದ ಜಿ.ಪಂ ಸಿಇಒ
ಖುದ್ದು ಅರೋಗ್ಯ ತಪಾಸಣೆ ಮಾಡಿಸಿದ ಜಿ.ಪಂ ಸಿಇಒ

ಜಾಬ್‍ಕಾರ್ಡ್ ಹೊಂದಿರುವ ಕೂಲಿಗಾರರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಒಂದು ಆರ್ಥಿಕ ವರ್ಷಕ್ಕೆ 100 ಉದ್ಯೋಗ ಕೊಡುವುದು ನಮ್ಮ ಜವಾಬ್ದಾರಿ ಯಾರು ಗುಳೆ ಹೊಗದೇ ತಮ್ಮ ತಮ್ಮ ಗ್ರಾಮಗಳಲ್ಲಿರುವ ಕೆರೆ, ಕಾಲುವೆ, ಗೋಕಟ್ಟೆ ಮತ್ತು ಚೆಕ್ ಡ್ಯಾಂ ಹೂಳು ತೆಗೆಯಬಹುದು.

ಮಹಿಳೆಯರು ಮತ್ತು ಪುರುಷರು ಕೂಲಿಕೆಲಸ ಮಾಡಿ ದಿನಕ್ಕೆ ರೂ.349/- ಗಳಿಸಿ, ಇಬ್ಬರಿಗೂ ಸಮಾನ ಕೂಲಿ ಇರುವುದರಿಂದ ಗ್ರಾಮೀಣ ಕುಟುಂಬಗಳು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮತ್ತು ಮಹಿಳೆಯರು ಹೆಚ್ಚಿನ ಸ್ವಾವಲಂಬನೆಯಿಂದ ಬದುಕಲು ಈ ಯೋಜನೆ ತುಂಬಾ ಸಹಕಾರಿಯಾಗಿದೆ. ಆದ್ದರಿಂದ ಮಹಿಳಾ ನರೇಗಾ ಕೂಲಿಗಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ: ಮದ್ಯಪ್ರಿಯರೇ ಗಮನಿಸಿ…ನಾಳೆಯಿಂದ ಮದ್ಯ ಮಾರಾಟ ಬಂದ್‌

ಕೂಲಿಗಾರರು ಸ್ವಂತ ಜಮೀನು ಹೊಂದಿದ್ದರೆ ಅಲ್ಲಿಯೂ ಕೂಡ ನರೇಗಾ ಯೋಜನೆಯಡಿ ಕೆಲಸ ಮಾಡಿಕೊಳ್ಳಬಹುದು. ಕೂಲಿಗಾರರ ಕುಟುಂಬದಲ್ಲಿ ಮೂರು ವರ್ಷದೊಳಗಿನ ಮಕ್ಕಳಿದ್ದಲ್ಲಿ ಅವರ ಹಾರೈಕೆಗಾಗಿ “ಕೂಸಿನ ಮನೆ” ಯನ್ನು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಯಲ್ಲಿ ತೆರೆಯಲಾಗಿದ್ದು, ಮಕ್ಕಳನ್ನು ಅಲ್ಲಿ ಬಿಟ್ಟು ನಿರ್ಭಿತಿಯಿಂದ ಕೆಲಸ ಮಾಡಬಹುದಾಗಿದೆ.

ಕೂಸಿನ ಮನೆಯಲ್ಲಿ ತರಬೇತಿ ಪಡೆದ ಮಹಿಳಾ ಕೇರ್ ಟೇಕರ್ಸ್ ಅವರು ಮಕ್ಕಳನ್ನು ತಾಯಿಯಂತೆ ನೋಡಿಕೊಳ್ಳುತ್ತಾರೆ. ಕೆಲಸ ಮುಗಿದ ಮೇಲೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಬಹುದು ಎಂದು ತಿಳಿಸಿದರು.

ಇದನ್ನೂ ಓದಿ: ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ | ವಿದ್ಯುತ್ ಪೂರೈಕೆ ಸಮಸ್ಯೆ

ಕೂಲಿಗಾರರ ಕುಂದು ಕೊರತೆಗಳಿಗೆ ಪ್ರತಿ ತಿಂಗಳು ಅಥವಾ 15 ದಿನಕ್ಕೊಮ್ಮೆ ನಡೆಯುವ “ರೋಜ್‍ಗಾರ್” ಸಭೆಯಲ್ಲಿ ಭಾಗವಹಿಸಿ, ಸಮಸ್ಯೆಗಳನ್ನು ಹೇಳಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ ಅವರು, ಅಲ್ಲೇ ಕೆಲಸ ಮಾಡುತ್ತಿದ್ದ ಮಹಿಳಾ ಕೂಲಿಗಾರರಿಗೆ ತಮ್ಮ ತಮ್ಮ ಖಾತೆಗಳಿಗೆ ಸರಿಯಾದ ಸಮಯಕ್ಕೆ ಕೂಲಿ ಹಣ ಬೀಳುತ್ತಿದೆಯಾ, ಪಿಡಿಒ ಅವರು ಸರಿಯಾಗಿ ಕೆಲಸ ನೀಡುತ್ತಾರಾ ಎಂಬುದಾಗಿ ವಿಚಾರಿಸಿದರು.

ನಮಗೆ ಯಾವುದೇ ತೊಂದರೆ ಇಲ್ಲ ನಮಗೆ ಸರಿಯಾಗಿ ಕೆಲಸ ಕೊಟ್ಟು, ಕೂಲಿಯನ್ನು ನಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಾರೆ. ನಾವು ಬೇರೆ ಕಡೆ ವಲಸೆ ಹೋಗದೇ ನಮ್ಮೂರಲ್ಲೇ ಉದ್ಯೋಗ ಖಾತ್ರಿ ಕೆಲಸ ಮಾಡ್ತಿವಿ. ಕೆರೆ-ಕಾಲುವೆಗಳನ್ನು ಹೂಳೆತ್ತುತ್ತಿವಿ ಎಂದು ತಿಳಿಸಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಡೆಂಗಿ ಬ್ರೇಕ್‌ಫೇಲ್‌ | ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್‌

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಮೊಳಕಾಲ್ಮುರು ತಾ.ಪಂ ಇಒ ಪ್ರಕಾಶ್, ಜಿಲ್ಲಾ ಪಂಚಾಯಿತಿ ನರೇಗಾ ವಿಭಾಗದ ಎಡಿಪಿಸಿ ಮೋಹನ್, ಜಿಲ್ಲಾ ಐಇಸಿ ಸಂಯೋಜಕ ಎಂ.ಎಸ್.ರವೀಂದ್ರ ನಾಥ್, ಸಹಾಯಕ ನಿರ್ದೇಶಕ ಗಣೇಶ್, ಪಿಡಿಒ ಗುಂಡಪ್ಪ, ತಾಂತ್ರಿಕ ಸಂಯೋಜಕ ಮಂಜುನಾಥ್, ಎಂಐಎಸ್ ಸಂಯೋಜಕ ಮಧುಸೂಧನ್, ತಾಲ್ಲೂಕು ಐಇಸಿ ದೇವರಾಜ್, ತಾಂತ್ರಿಕ ಸಹಾಯಕರು, ಬಿಎಫ್‍ಟಿಜಿಕೆ ಮತ್ತು ಕಾಯಕಬಂಧುಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CEO of G. PmChitradurga newsFor laborersHealthInspectionKannada NewsNarega Schemeಅರೋಗ್ಯಕನ್ನಡ ಸುದ್ದಿಕೂಲಿಗಾರರಿಗೆಚಿತ್ರದುರ್ಗ ಸುದ್ದಿಜಿ.ಪಂ ಸಿಇಒತಪಾಸಣೆನರೇಗಾ ಯೋಜನೆ
Share This Article
Facebook Email Print
Previous Article arecanut price list ಹೊಸನಗರ ಅಡಿಕೆ ಮಾರುಕಟ್ಟೆಯಲ್ಲಿ ರಾಶಿ ಬೆಲೆಯಲ್ಲಿ ಜಿಗಿತ
Next Article ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮುರುಘಾ ಶರಣರ ಪೋಕ್ಸೋ ಪ್ರಕರಣ | ಚಾರ್ಜ್‍ಶೀಟ್ ಮರು ನಿಗಧಿ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up