
CHITRADURGA NEWS | 26 AUGUST 2025
ಚಿತ್ರದುರ್ಗ: ಫಹಲ್ಗಾಮ್ ಹತ್ಯಾಕಾಂಡ ವಿರೋಧಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಹೆಸರಿನಲ್ಲೇ ಕೋಟೆನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ ವೇದಿಕೆ ಸಿದ್ಧವಾಗಿರುವುದು ಈ ವರ್ಷದ ವಿಶೇಷವಾಗಿದೆ.
ಇದನ್ನೂ ಓದಿ: ಕೋಟೆ ನಾಡಿಗೆ ಆಗಮಿಸಿದ ಹಿಂದೂ ಮಹಾಗಣಪ | ಈ ಬಾರಿ ಎಷ್ಟು ಅಡಿ, ಯಾವ ರೂಪ ಗೊತ್ತಾ….
ನಗರದ ಬಿ.ಡಿ.ರಸ್ತೆಯಲ್ಲಿರುವ ಜೈನಧಾಮದಲ್ಲಿ ಮಂಗಳವಾರ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕುರಿತು ಮಾಹಿತಿ ನೀಡಿದರು.
ಈ ವೇಳೆ ವಿಷಯ ಪ್ರಸ್ತಾಪಿಸಿದ ಶ್ರೀಗಳು, ಈ ವರ್ಷದ ಹಿಂದೂ ಮಹಾಗಣಪತಿ ವಿಜಯದ ಸಂಕೇತವಾಗಿದೆ. ಗಣಪತಿ ಪ್ರತಿಷ್ಠಾಪನೆ ಮಾಡುವ ವೇದಿಕೆಗೆ ಸಿಂಧೂರ ಎಂದು ಹೆಸರಿಡಲಾಗಿದೆ. ಕಾಶ್ಮೀರದಲ್ಲಿ ನಡೆದ ದುರ್ಘಟನೆ, ಆಧಾರಲ್ಲಿ ಭಾರತ ದೇಶದ ವಿಜಯದ ಸಂಕೇತವಾಗಿ ಸಿಂಧೂರ ವೇದಿಕೆ ಎಂದು ಹೆಸರಿಡಲಾಗಿದೆ ಎಂದರು.
ಗಣಪನ ಮೂರ್ತಿ 18 ಅಡಿ ಎತ್ತರವಿದೆ. ಸಾಗರದ ಕಂಪನಿಯವರು ಮಂಟಪವನ್ನು ಸುಂದರ ಹಾಗೂ ವೈಭವದಿಂದ ಮಂಟಪ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಿದರು.
ಹಿಂದೂ ಮಹಾ ಗಣಪತಿ ಮಹೋತ್ಸವ ಮಧ್ಯಕರ್ನಾಟಕದ ಸಾಂಸ್ಕೃತಿಕ ಉತ್ಸವವಾಗಿ, ಇಡೀ ದೇಶಕ್ಕೆ ಬಹು ದೊಡ್ಡ ಸಂದೇಶ ಕೊಡುವ ಶೋಭಯಾತ್ರೆ ನಡೆಯುತ್ತಿರುವುದು ನಮ್ಮೆಲ್ಲರಿಗೂ ಸಂತೋಷದ ಸಂಗತಿ ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಸಮಗ್ರ ಪಶುಪಾಲನಾ ಪದ್ದತಿ ಕುರಿತು ಉಚಿತ ತರಬೇತಿ
ವಿಶ್ವ ಹಿಂದೂ ಪರಿಷದ್ ಬಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಮಹೋತ್ಸವ ಸಮಿತಿ ಸಹಯೋಗದಲ್ಲಿ ಆಯೋಜಿಸಿರುವ 18ನೇ ವರ್ಷದ ಹಿಂದೂ ಮಹಾ ಗಣಪತಿ ಮಹೋತ್ಸವದ ಗಣಪತಿ ಮೂರ್ತಿ ಆ.27ರ ಬೆಳಗ್ಗೆ 10.55ಕ್ಕೆ ವಿದ್ಯುಕ್ತವಾಗಿ ಪ್ರತಿಷ್ಠಾಪನೆಗೊಳ್ಳಲಿದೆ ಎಂದರು.
ಹದಿನೆಂಟನೇ ದಿನ ಶೋಭಯಾತ್ರೆ ನಡೆಸಲಾಗುತ್ತಿದೆ. ಹದಿನೆಂಟು ದಿನಗಳ ಕಾಲ ನಡೆಯುವ ಪೂಜಾ, ಧಾರ್ಮಿಕ ಕಾರ್ಯಕ್ರಮಗಳು, ಚಂತನೆಗಳು, ಗೋಷ್ಠಿಗಳು, ವಿವಿಧ ವಿಷಯಗಳಲ್ಲಿ ಪ್ರವಚನ, ಭಾಷಣಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಾಡಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಸೌಹಾರ್ಧತೆ, ಸಹಬಾಳ್ವೆ, ಸಾಮರಸ್ಯದ ಸಂಕೇತವಾಗಿ ಹಬ್ಬದ ರೀತಿಯಲ್ಲಿ ಉತ್ಸವ ಆಚರಿಸಬೇಕು ಎಂಬುದು ನಮ್ಮ ಸಮಿತಿಯವರ ಮನವಿ ಎಂದರು. ಪ್ರತಿ ವರ್ಷಕ್ಕಿಂತ ಈ ವರ್ಷ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ಶೋಭಯಾತ್ರೆ ನಡೆಯಲು ಸಮಿತಿಯವರು ವ್ಯವಸ್ಥೆ ಮಾಡಿಕೊಂಡಿದ್ದಾರೆ ಎಂದರು.
ಶೋಭಯಾತ್ರೆಯಲ್ಲಿ ಡಿಜೆ ಬಳಸುವಂತಿಲ್ಲ ಎಂದು ಈಗಾಗಲೇ ಪೊಲೀಸ್ ಇಲಾಖೆಯವರು ನಮ್ಮ ಗಮನಕ್ಕೆ ತಂದಿದ್ದಾರೆ. ಆದರೆ ಜನಾಭಿಪ್ರಾಯದ ವಿರುದ್ಧವಾಗಿ ಸರಕಾರ ತೀರ್ಮಾನ ತೆಗೆದುಕೊಳ್ಳಬಾರದು ಎಂಬುದು ನಮ್ಮ ಮನವಿ. ಈ ವಿಚಾರವಾಗಿ ರಾಜ್ಯಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನಾವು ಕೂಡಾ ಸರ್ಕಾರಕ್ಕೆ ಮನವಿ ಮಾಡಲು ಚಿಂತನೆ ನಡೆಸುತ್ತಿದ್ದೇವೆ. ಗಣಪತಿ ಪ್ರತಿಷ್ಠಾಪನೆ ಆದ ನಂತರ ಈ ವಿಚಾರವಾಗಿ ಯೋಚಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 26 | ಹತ್ತಿ ರೇಟ್ ಎಷ್ಟಿದೆ?
ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿ ಅಧ್ಯಕ್ಷ ಶರಣ್ಕುಮಾರ್ ಮಾತನಾಡಿ, ಆ.27ರ ಬೆಳಗ್ಗೆ 10.52ಕ್ಕೆ ಗಣಪತಿ ಪ್ರತಿಷ್ಠಾಪನೆ ಆಗಲಿದೆ. ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ, ಬಳಿಕ ಶಾಸ್ತ್ರೋಕ್ತವಾಗಿ ವಿಧಿ ವಿಧಾನಗಳು ನಡೆಯುತ್ತವೆ. ರಾಜಸ್ಥಾನ ಮತ್ತು ಜೈಪುರ ಶೈಲಿಯ ಮಾದರಿಯಲ್ಲಿ ಮಂಟಪ ನಿರ್ಮಿಸಲಾಗಿದೆ. ಗಣಪತಿ ಜತೆ ಎರಡು ಹುಲಿಗಳಿವೆ. ಆ.28ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಮಾಹಿತಿ ನೀಡಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
