By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    9 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    10 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    10 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    14 hours ago
    coconut water
    ಬೇಸಿಗೆಯಲ್ಲಿ ಎಳ ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಬೇಡಿ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    22 hours ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    22 hours ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    3 days ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅರೆಸ್ಟ್ | ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಆನೆದಂತ, ರಕ್ತಚಂದನ, ವನ್ಯಸಂಪತ್ತು ಜಪ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿಚಳ್ಳಕೆರೆತಾಲೂಕುಮುಖ್ಯ ಸುದ್ದಿಹಿರಿಯೂರುಹೊಳಲ್ಕೆರೆ

ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅರೆಸ್ಟ್ | ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಆನೆದಂತ, ರಕ್ತಚಂದನ, ವನ್ಯಸಂಪತ್ತು ಜಪ್ತಿ

chitradurganews.com
Last updated: 11 November 2023 20:28
chitradurganews.com
3 years ago
Share
ಚಿತ್ರಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆ
ಚಿತ್ರಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆ
SHARE

ಚಿತ್ರದುರ್ಗ ನ್ಯೂಸ್.ಕಾಂ: ಹೊಳಲ್ಕೆರೆ ಹಾಗೂ ಚಿತ್ರಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಬಲೆಗೆ ಬಿದ್ದಿದೆ.

ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳು ಬಳಿ ನ.10ರಂದು ಬೆಳಗಿನ ಜಾವ ಗಸ್ತಿನಲ್ಲಿದ್ದ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ ಪಿಎಸ್‍ಐ ಕಾಂತರಾಜು ನೇತೃತ್ವದ ತಂಡ ಶ್ರೀಗಂಧ ಕಳ್ಳತನ ಮಾಡುತ್ತಿದ್ದ 6 ಜನರನ್ನು ಬಂಧಿಸಿದೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಬಂಧಿತ 6 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ

ಇದನ್ನೂ ಓದಿ: ಚಿತ್ರಹಳ್ಳಿ ಪೊಲೀಸರ ಭರ್ಜರಿ ಭೇಟೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮೂಲದ ಚಂದ್ರಶೇಖರ ಅಲಿಯಾಸ್ ಬೋಟಿ ಚಂದ್ರ ಪ್ರಕರಣದ ಮೊದಲ ಆರೋಪಿ. ಆಂಧ್ರಪ್ರದೇಶದ ಕೊಪ್ಪಂನ ಖಲೀಲ್, ಮಾಹಿತಿದಾರರಾದ ಹೊಸದುರ್ಗ ತಾಲೂಕಿನ ಗೂಳಿಹಟ್ಟಿಯ ಟಿ.ಪ್ರಶಾಂತ್ ರಂಗಸ್ವಾಮಿ, ಕಡೂರು ತಾಲೂಕು ಆಲದಹಳ್ಳಿಯ ಪುನೀತ್ ನಾಯ್ಕ್ ಹಾಗೂ ರಾಮಾನಾಯ್ಕ್ ಬಂಧಿತರು.

ಬಂಧಿತರಿಂದ 91 ಕೆಜಿ 300 ಗ್ರಾಂ ಶ್ರೀಗಂಧ, 15 ಕೆಜಿ 500 ಗ್ರಾಂ ರಕ್ತಚಂದನ, 25 ಕೆ.ಜಿ 400 ಗ್ರಾಂ ತೂಕದ 2 ಆನೆ ದಂತಗಳು, 34 ಕೆ.ಜಿ.100 ಗ್ರಾಂ ತೂಕದ ಪಂಗೋಲಿಯನ್ ಚಿಪ್ಪುಗಳು, 1,10 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 2 ಕಾರು, 9 ಮೊಬೈಲ್, ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೊದಲನೆ ಆರೋಪಿ ಚಂದ್ರಶೇಖರ್ ಕಟಾವು ಮಾಡಿ ತಂದ ಶ್ರೀಗಂಧವನ್ನು ಖರೀಧಿಸುತ್ತಿದ್ದ. ಹೊಸದುರ್ಗ ತಾಲೂಕಿನ ಪ್ರಶಾಂತ್ ಮತ್ತು ರಂಗಸ್ವಾಮಿ ಜಿಲ್ಲೆಯ ಯಾವ ಭಾಗದಲ್ಲಿ ಶ್ರೀಗಂಧ ಬೆಳೆಯಲಾಗಿದೆ ಎನ್ನುವ ಮಾಹಿತಿ ನೀಡುತ್ತಿದ್ದರು. ಆಂಧ್ರದ ಖಲೀಲ್, ಪುನೀತ್ ನಾಯ್ಕ್ ಹಾಗೂ ರಾಮಾನಾಯ್ಕ್ ಸಹಾಯದಿಂದ ಕಟಾವು ಮಾಡುತ್ತಿದ್ದ ಎನ್ನುವ ಅಂಶಗಳು ಪ್ರಾಥಮಿಕ ತನಿಖೆಯಿಂದ ಪತ್ತೆಯಾಗಿವೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶರಾಗಿದ್ದ ಬಿ.ಎಸ್.ರೇಖಾ ವರ್ಗಾವಣೆ

ವಿವಿಧ ಠಾಣೆಗಳ 7 ಪ್ರಕರಣಗಳಲ್ಲಿ ಬೇಕಾಗಿದ್ದವರು:

ಬಂಧಿತ ಆರೋಪಿಗಳ ವಿರುದ್ಧ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ 166/2023 ಕಲಂ 399, 402 ಐಪಿಸಿ ಅಡಿಯಲ್ಲಿ ದೂರು ದಾಖಲಿಸಿದ್ದು, ಆರೋಪಿತರು ಗ್ಯಾಂಗ್ ಕಟ್ಟಿಕೊಂಡು ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮದ ದಿನೇಶ್, ಸಾಸಲು ಗ್ರಾಮದ ಪ್ರಶಾಂತ್‍ಕುಮಾರ್, ಚಿಕ್ಕಂದವಾಡಿ ಗ್ರಾಮದ ಸುರೇಶ್, ಹೊಳಲ್ಕೆರೆಯ ಆನಂದಪ್ಪ, ಎನ್.ಜಿ.ಹಳ್ಳಿಯ ದ್ಯಾಮಪ್ಪ, ಶ್ರೀರಾಂಪುರದ ವಿನಯ್, ಐಮಂಗಲ ಠಾಣೆ ವ್ಯಾಪ್ತಿಯ ಗೋಗುದ್ದು ಗ್ರಾಮದ ನಾಗರಾಜ ಎಂಬುವವರ ತೋಟಗಳಲ್ಲಿ ಗಂಧದ ಮರಗಳನ್ನು ಕಳ್ಳತನ ಮಾಡಿದ್ದಾರೆ.

ಸದರಿ ಆರೋಪಿಗಳು, ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ 2, ರಾಂಪುರ ಠಾಣೆಯ 1, ಐಮಂಗಲ ಠಾಣೆಯ 2 ಪ್ರಕರಣಗಳು ಸೇರಿದಂತೆ ಒಟ್ಟು 7 ಪ್ರಕರಣಗಳಲ್ಲಿ ಬೇಕಾಗಿದ್ದರು.

ಶ್ರೀಗಂಧದ ಜೊತೆ ರಕ್ತಚಂದನ, ಆನೆ ದಂತ, ಚಿಪ್ಪುಗಳು:

ಶ್ರೀಗಂಧದ ಜೊತೆಗೆ ಬಂಧಿತರು ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಹೊರವಲಯದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ರಕ್ತಚಂದನ, ಆನೆದಂತ, ಪೆಂಗೋಲಿಯನ್ ಚಿಪ್ಪುಗಳನ್ನು ಜಪ್ತಿ ಮಾಡಲಾಗಿದೆ. ಇದಕ್ಕಾಗಿಯೇ ಚಂದ್ರಶೇಖರ್ ಹಿರಿಯೂರು ಮತ್ತು ಹೊಸದುರ್ಗದಲ್ಲಿ ಎರಡು ಬಾಡಿಗೆ ಮನೆ ಮಾಡಿಕೊಂಡಿದ್ದ ಎಂದು ಎಸ್ಪಿ ಹೇಳಿದ್ದಾರೆ.

ಚಿತ್ರಹಳ್ಳಿ ಗೇಟ್ ಠಾಣೆಯ ಪಿಎಸ್‍ಐ ಕಾಂತರಾಜ್ ತಮ್ಮ ಸಿಬ್ಬಂದಿಯೊಂದಿಗೆ ಹೊಳಲ್ಕೆರೆ ತಾಲೂಕು ಕೊಳಾಳು ಬಳಿ ನ.10ರಂದು ಬೆಳಗಿನ ಜಾವ ಗಸ್ತಿನಲ್ಲಿದ್ದಾಗ ಅನುಮಾನಾಸ್ಪದವಾಗಿ ನಿಂತಿದ್ದ ಮಾರುತಿ ಇಕೋ ವಾಹನ ಪರಿಶೀಲಿಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಶ್ರೀಗಂಧ ಬೆಳೆಗಾರರಿಗೆ ತಲೆನೋವಾಗಿದ್ದ ಗ್ಯಾಂಗ್:

ಜಿಲ್ಲೆಯಲ್ಲಿ ಆಗಿಂದ್ದಾಗ್ಗೆ ಶ್ರೀಗಂಧ ಬೆಳೆಗಾರರು ತೊಟದಲ್ಲಿ ಬೆಳೆದಿರುವ ಮರಗಳಿಗೆ ರಕ್ಷಣೆ ಕೊಡಿ ಎಂದು ಪೊಲೀಸರು, ಅರಣ್ಯ ಇಲಾಖೆಗೆ ಮನವಿ ಸಲ್ಲಿಸುತ್ತಿದ್ದರು. ಕಳ್ಳತನ ನಡೆದಾಗೆಲ್ಲಾ ಬಂದು ದೂರು ನೀಡುತ್ತಿದ್ದರು. ಆದರೆ, ಕಿಲಾಡಿ ಗ್ಯಾಂಗ್ ಎಲ್ಲಿಯೂ ಸಿಕ್ಕಿರಲಿಲ್ಲ.

ಶ್ರೀಗಂಧ ಬೆಳೆಗಾರ ಉಪ್ಪರಿಗೇನಹಳ್ಳಿಯ ಕೆ.ಸಿ.ದಿನೇಶ್ ಅವರ ತೋಟದಲ್ಲಿ ಅಕ್ಟೊಬರ್ 22 ಮತ್ತು ನ.4 ರಂದು ರಾತ್ರಿ ಸಮಯದಲ್ಲಿ ಶ್ರೀಗಂಧದ ಮರಗಳ ಕಳ್ಳತನ ನಡೆದಿರುವ ಬಗ್ಗೆ ದೂರು ದಾಖಲಿಸಿದ್ದರು.

ಇದರೊಟ್ಟಿಗೆ ರೈತ ಸಂಘಟನೆಗಳು ಹಾಗೂ ಶ್ರೀಗಂಧ ಬೆಳೆಗಾರರ ಸಂಘದ ಪದಾಧಿಕಾರಿಗಳು ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮಾಡಿ ತಮ್ಮ ಸಂಕಷ್ಟ ಹೇಳಿಕೊಂಡಿದ್ದರು.

ಚಿತ್ರಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆ
ಚಿತ್ರಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆ

ಈ ಹಿನ್ನೆಲೆಯಲ್ಲಿ ಎಎಸ್‍ಪಿ ಕುಮಾರಸ್ವಾಮಿ, ಡಿವೈಎಸ್‍ಪಿ ಅನಿಲ್‍ಕುಮಾರ್, ಹೊಳಲ್ಕೆರೆ ಸಿಪಿಐ ಎಂ.ಬಿ.ಚಿಕ್ಕಣ್ಣನವರಿಗೆ ರಾತ್ರಿ ಗಸ್ತು ಹೆಚ್ಚಿಸುವಂತೆ ಎಸ್ಪಿ ಧಮೇಂದ್ರಕುಮಾರ್ ಮೀನಾ ಸೂಚನೆ ನೀಡಿದ್ದರು.

ಇದನ್ನೂ ಓದಿ: ದೀಪಾವಳಿಗೆ ಜಿಲ್ಲಾಧಿಕಾರಿ ಮಹತ್ವದ ಸೂಚನೆ

ಸದರಿ ಶ್ರೀಗಂಧ ಕಳ್ಳರ ಅಂದರ್ ಕಾರ್ಯಾಚರಣೆಯಲ್ಲಿ ಹೊಳಲ್ಕೆರೆ ಸಿಪಿಐ ಎಂ.ಬಿ.ಚಿಕ್ಕಣ್ಣನವರ್, ಚಿತ್ರಹಳ್ಳಿ ಠಾಣೆ ಪಿಎಸ್‍ಐ ಕಾಂತರಾಜು, ಪಿಎಸ್‍ಐ ಸುರೇಶ್, ಸಿಬ್ಬಂದಿಗಳಾದ ರುದ್ರೇಶ್, ರಾಜಶೇಖರ್, ಆರ್.ಡಿ.ರಮೇಶ್‍ಕುಮಾರ್, ನಿರಂಜನ, ರಮೇಶ, ಅವಿನಾಶ, ಮಂಜುನಾಥ, ಶ್ರೀಧರ, ಶೌರ್ಯ, ಯಶೋಧರ, ಅಹಮ್ಮದ್ ನದಾಫ್, ಶೋಭಾ ಹಾಗೂ ಸುಲೋಚನ ಭಾಗವಹಿಸಿದ್ದರು.

ಎಲ್ಲ ಸಿಬ್ಬಂದಿಗಳ ಪತ್ತೆ ಕಾರ್ಯವನ್ನು ಎಸ್ಪಿ ಧಮೇಂದ್ರಕುಮಾರ್ ಮೀನಾ ಶ್ಲಾಘಿಸಿ, ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ನೀಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitrahallielephant tuskgang of thievesHiriyurHolalkereHosadurgaInterstatepangolin shellPolicesandalwoodTheftಅಂತರ್ ರಾಜ್ಯಆನೆ ದಂತಕಳ್ಳತನಕಳ್ಳರ ಗ್ಯಾಂಗ್ಚಿತ್ರದುರ್ಗಚಿತ್ರಹಳ್ಳಿಪೆಂಗೊಲಿಯನ್ ಚಿಪ್ಪುಪೊಲೀಸ್ರಕ್ತಚಂದನಶ್ರೀಗಂಧಹಿರಿಯೂರುಹೊಸದುರ್ಗಹೊಳಲ್ಕೆರೆ
Share This Article
Facebook Email Print
Previous Article SRS ಶಾಲೆಯಲ್ಲಿ ಬೆಳಗಿದವು ಸಾವಿರಾರು ದೀಪಗಳು
Next Article FIR ಪಾದಾಚಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು
Leave a Comment

Leave a Reply Cancel reply

Your email address will not be published. Required fields are marked *

ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
ಮುಖ್ಯ ಸುದ್ದಿ
ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
ಮುಖ್ಯ ಸುದ್ದಿ
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up