By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    48 minutes ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    1 hour ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    1 hour ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    3 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    13 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    14 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: ಅನಿಲ ಸೋರಿಕೆ ನಿರ್ವಹಣೆ | ಅಣಕು ಕಾರ್ಯಾಚರಣೆ | ಡಿಸಿ, ಜಿ.ಪಂ ಸಿಇಒ ವೀಕ್ಷಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅನಿಲ ಸೋರಿಕೆ ನಿರ್ವಹಣೆ | ಅಣಕು ಕಾರ್ಯಾಚರಣೆ | ಡಿಸಿ, ಜಿ.ಪಂ ಸಿಇಒ ವೀಕ್ಷಣೆ

News Desk Chitradurga News
Last updated: 7 January 2025 21:12
News Desk Chitradurga News
1 year ago
Share
Gas Leak Management, Mock Operation, DC, CEO Observation
ಅನಿಲ ಸೋರಿಕೆ ನಿರ್ವಹಣೆ, ಅಣಕು ಕಾರ್ಯಾಚರಣೆ, ಡಿಸಿ, ಸಿಇಒ ವೀಕ್ಷಣೆ
SHARE

CHITRADURGA NEWS | 07 JANUARY 2025

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜೆ.ಹಳ್ಳಿ ಹೋಬಳಿ ದಿಂಡಾವರ ಪಂಚಾಯಿತಿ ವ್ಯಾಪ್ತಿಯ ಮಾದೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಅನಿಲ ಸೋರಿಕೆ ಸಂದರ್ಭದ ಬಿಕ್ಕಟ್ಟು ನಿರ್ವಹಣೆಗೆ ಸಂಬಂಧಿಸಿದಂತೆ ಅಣಕು ಪ್ರಾತ್ಯಕ್ಷಿಕೆ ಕಾರ್ಯಚರಣೆ ನಡೆಸಲಾಯಿತು.

ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಜನವರಿ 7 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ಅನಿಲ ಸೋರಿಕೆ ತಡೆಗಟ್ಟುವಿಕೆ ತುರ್ತು ಅಣಕು ಕಾರ್ಯಾಚರಣೆಯನ್ನು ಹಾಸನ-ಚೆರ್ಲಪಲ್ಲಿ ಎಲ್‍ಪಿಜಿ ಪೈಪ್‍ಲೈನ್‍ನ ಹೆಚ್‍ಸಿಪಿಎಲ್ ಚೈನೇಜ್ 123ರಲ್ಲಿ ಆಫ್‍ಸೈಟ್-ಅಣುಕು ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಯಿತು.

ಅನಿಲ ಸೋರಿಕೆ ಪ್ರಾತ್ಯಕ್ಷಿಕೆ: 

ಅಣಕು ಪ್ರದರ್ಶನದಡಿ ಹಾಸನ-ಚೆರ್ಲಪಲ್ಲಿ ಎಲ್‍ಪಿಜಿ ಪೈಪ್‍ಲೈನ್‍ನ ಹೆಚ್‍ಸಿಪಿಎಲ್ ಚೈನೇಜ್ 123ರ ಮಾದೇನಹಳ್ಳಿ ಗ್ರಾಮದಲ್ಲಿ ಅನಿಲ ಸೋರಿಕೆಯಾದ ಮಾಹಿತಿ ಭದ್ರತಾ ಸಿಬ್ಬಂದಿಯಿಂದ ನಿಯಂತ್ರಣ ಕೊಠಡಿ ಅಧಿಕಾರಿಗೆ ವಾಕಿಟಾಕಿ ಮೂಲಕ ಪರಸ್ಪರ ಸಂವಹನ ನಡೆಯುತ್ತದೆ.

ತಕ್ಷಣವೇ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅನಿಲ ಸೋರಿಕೆಯಾದ ಸ್ಥಳದ ಸುತ್ತಮುತ್ತ ತುರ್ತು ಪರಿಸ್ಥಿತಿ ಘೋಷಿಸುತ್ತಾರೆ. ತಕ್ಷಣವೇ ಅನಿಲ ಸೋರಿಕೆ ಸಿಬ್ಬಂದಿ, ಅಂಬುಲೆನ್ಸ್ ಹಾಗೂ ವೈದ್ಯಕೀಯ ತಂಡವೂ ಬರುತ್ತದೆ.

ನಂತರ ಸಿಬ್ಬಂದಿ ಅನಿಲ ಸೋರಿಕೆಯಾದ ಸ್ಥಳ ಪರಿಶೀಲಿಸಿ ಅಸ್ವಸ್ಥಗೊಂಡ ಭದ್ರತಾ ಸಿಬ್ಬಂದಿಯನ್ನು ವೈದ್ಯಕೀಯ ತಂಡದವರು ಪ್ರಥಮ ಚಿಕಿತ್ಸೆ ನೀಡಿ ಅಂಬುಲೆನ್ಸ್‍ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಾರೆ. ಹೀಗೆ ಭದ್ರತೆ, ರಕ್ಷಣೆ, ಅಗ್ನಿಶಾಮಕದಳದ ಸಿಬ್ಬಂದಿಯ ಕಾರ್ಯಾಚರಣೆ ಹಂತ ಹಂತವಾಗಿ ನಡೆಯುತ್ತದೆ.

ಕ್ಲಿಕ್ ಮಾಡಿ ಓದಿ: ಶಿವಗಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಗಿರೀಶ್ ಮಾಧುರಿ ನೇತೃತ್ವದ ಗುಂಪಿಗೆ ಜಯ

ಅಂತಿಮವಾಗಿ ಎಲ್‍ಪಿಜಿ ಸೋರಿಕೆಯನ್ನು ಯಶಸ್ವಿಯಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳಿಗೆ ದೃಢಪಡಿಸಲಾಯಿತು. ನಂತರ ಸೈರನ್ ಮೊಳಗಿಸಿ, ಹಸಿರು ಬಾವುಟ ಹಾರಿಸಲಾಯಿತು.

ಚಿತ್ರದುರ್ಗ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಹಾಸನದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಸಹಯೋಗದೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಲವರ್ಧನೆ ಸಂಬಂಧ ಆಯೋಜಿಸಲಾಗಿದ್ದ ಅಣಕು ಪ್ರದರ್ಶನ ಕಾರ್ಯಕ್ರಮ ವೀಕ್ಷಿಸಿ ಮಾತನಾಡಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅನಿಲ ಸೋರಿಕೆ ಸಂದರ್ಭದಲ್ಲಿನ ಬಿಕ್ಕಟ್ಟು ಪರಿಸ್ಥಿತಿಯನ್ನು, ಸಂಭವಿಸುವ ಅನಾಹುತವನ್ನು ಯಾವ ರೀತಿಯಾಗಿ ನಿಭಾಯಿಸುವುದು ಹಾಗೂ ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂಬುದನ್ನು ಅಣಕು ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿದೆ ಎಂದರು.

ಅನಿಲ ಸೋರಿಕೆಯ ದುರಂತದಿಂದ ಸಾಕಷ್ಟು ನಷ್ಟ ಉಂಟಾಗುತ್ತದೆ. ಇಂತಹ ವಿಪತ್ತು ಸಂಭವಿಸಿದಾಗ ಯಾವ ರೀತಿ ಇದನ್ನು ತಡೆಗಟ್ಟಬಹುದು ಎಂಬುವುದರ ಕುರಿತು ಎಲ್ಲರಿಗೂ ಅರಿವು ಹಾಗೂ ಎಚ್ಚರಿಕೆ ಇರಬೇಕು ಎಂಬ ಕಾರಣದಿಂದ ಅನಿಲ ಸೋರಿಕೆ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಪೈಪ್‍ಲೈನ್ ಹಾದುಹೋಗಿರುವ ಎಲ್ಲ ಗ್ರಾಮಗಳಲ್ಲಿಯೂ ಸಹ ನಿರಂತರವಾಗಿ ಅನಿಲ ಸೋರಿಕೆ ಅಣಕು ಪ್ರದರ್ಶನ ಹಮ್ಮಿಕೊಳ್ಳುವುದರಿಂದ ಅರಿವು ಮೂಡಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಕ್ಲಿಕ್ ಮಾಡಿ ಓದಿ: ಮುಖ್ಯ ರಸ್ತೆ ಅಗಲೀಕರಣ ಫಿಕ್ಸ್ | 15 ದಿನಗಳಲ್ಲಿ ದಾಖಲೆ ಸಂಗ್ರಹಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಪೆಟ್ರೋಲಿಯಂ ಉತ್ಪನ್ನಗಳ ಪೈಪ್‍ಲೈನ್, ವಾಟರ್ ಪೈಪ್‍ಲೈನ್ ಸೇರಿದಂತೆ ಯಾವುದೇ ಪೈಪ್‍ಲೈನ್‍ಗಳನ್ನು ನಿರ್ವಹಣೆ ಮಾಡಲು ಅಗ್ನಿಶಾಮಕ ವಾಹನ ಸಂಚಾರ, ಅಂಬುಲೆನ್ಸ್, ಭದ್ರತಾ ತಂಡಗಳ ಸಂಚಾರಕ್ಕೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಲಾಗುತ್ತದೆ.

ಆದರೆ ಈ ಪೈಪ್‍ಲೈನ್‍ಗೆ ಎಲ್ಲಿಯೂ ಆ ತರಹದ ರಸ್ತೆ ಇಲ್ಲ. ತುರ್ತು ಅವಘಡಗಳು ಸಂಭವಿಸಿದಾಗ ತಕ್ಷಣ ಆ ಸ್ಥಳಕ್ಕೆ ತಲುಪಲು ಸಮೀಪದ ರಸ್ತೆ ಅವಲಂಬಿಸಬೇಕಾಗುತ್ತದೆ. ಆ ರಸ್ತೆಯ ಮೂಲಕ ಆಗಮಿಸಿ ಪರಿಸ್ಥಿತಿ ನಿಭಾಯಿಸಬೇಕಾಗುತ್ತದೆ.

ಆದರೆ ಈ ಪೈಪ್‍ಲೈನ್‍ಗೆ ಜಿಯೋ ಪೆನ್ಸಿಂಗ್ ಇದ್ದು, ಇದರ ಮೂಲಕ ಯಾವ ಸ್ಥಳದಲ್ಲಿ ಪೈಪ್‍ಲೈನ್ ಡ್ಯಾಮೇಜ್ ಆಗಿದೆ ಎಂಬುದನ್ನು ನಿಖರವಾಗಿ ಪತ್ತೆಹಚ್ಚಬಹುದಾಗಿದೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ರಸ್ತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಲ್‍ಪಿಜಿ ಪೈಪ್‍ಲೈನ್ ಹಾದು ಹೋಗಿರುವ ಎಲ್ಲ ಗ್ರಾಮಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿಯೂ ಅನಿಲ ಸೋರಿಕೆ ತಡೆ ಸುರಕ್ಷತಾ ಅಭಿಯಾನಯನ್ನು ನಿರಂತರವಾಗಿ ಮಾಡಬೇಕು. ರೈತರು, ಸಾರ್ವಜನಿಕರು, ಮಕ್ಕಳು, ಸುತ್ತಮುತ್ತಲಿನ ಗ್ರಾಮಸ್ಥರಿಗೆ ಪೈಪ್‍ಲೈನ್ ಹಾದುಹೋಗಿರುವ ಮಾಹಿತಿ ತಿಳಿದಿರಬೇಕು.

ಕ್ಲಿಕ್ ಮಾಡಿ ಓದಿ: ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

 ಒಂದು ವೇಳೆ ಅನಿಲ ಸೋರಿಕೆಯಾದರೆ ಯಾವ ರೀತಿಯ ಅನಾಹುತ ಸಂಭವಿಸುತ್ತದೆ. ಅನಾಹುತ ಉಂಟಾದಾಗ ಯಾರಿಗೆ ಸಂಪರ್ಕಿಸಬೇಕು ಎಂಬ ಮಾಹಿತಿ ಅತ್ಯಗತ್ಯ. ಹಾಗಾಗಿ ದುರ್ಘಟನೆ ತಡೆಯಲು ಹಾಗೂ ತಕ್ಷಣ ಮಾಹಿತಿ ತಿಳಿಸಲು ಸಹಾಯವಾಣಿ ಸಂಖ್ಯೆಯ ಮಾಹಿತಿ ಎಲ್ಲರೂ ತಿಳಿದಿರಬೇಕು ಎಂದು ಹೇಳಿದರು.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‍ನ ಚೀಪ್ ಸ್ಟೇಷನ್ ಮ್ಯಾನೇಜರ್ ಅಭಿಷೇಕ್ ಮಾತನಾಡಿ, ಮಂಗಳೂರು-ಹಾಸನ-ಮೈಸೂರು-ಬೆಂಗಳೂರು-ಚೆರ್ಲಪಲ್ಲಿ ಎಲ್‍ಪಿಜಿ ಪೈಪ್‍ಲೈನ್ ಭಾರತ ಸರ್ಕಾರದ ಅಧೀನ ಸಂಸ್ಥೆಯಾದ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‍ನ ಕಂಪನಿಯವರು ನಿರ್ವಹಿಸಿ ನಿರ್ವಹಿಸುತ್ತಿರುವ ಮಹತ್ವಪೂರ್ಣ ರಾಷ್ಟ್ರೀಯ ಯೋಜನೆ.

ಈ ಪೈಪ್‍ಲೈನ್ ಮಂಗಳೂರಿನಿಂದ ಎಲ್‍ಪಿಜಿಯನ್ನು ರವಾನೆ ಮಾಡುತ್ತಾ ಹಾಸನದ ಮೂಲಕ ಯಡಿಯೂರು ಹಾಗೂ ಮೈಸೂರು, ಚೆರ್ಲಪಲ್ಲಿಯಲ್ಲಿ ಅಂತ್ಯಗೊಳ್ಳುತ್ತದೆ. ಈ ಪೈಪ್‍ಲೈನ್ ಉದ್ದೇಶವು ಕರ್ನಾಟಕ ಮತ್ತು ನೆರೆಯ ರಾಜ್ಯಗಳ ಬೆಳೆಯುತ್ತಿರುವ ಎಲ್‍ಪಿಜಿ ಬೇಡಿಕೆ ಪೂರೈಸುವುದಲ್ಲದೇ ಪಶ್ಚಿಮ ಘಟ್ಟ ಮತ್ತು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಂಚಾರ ವ್ಯವಸ್ಥೆಯನ್ನೂ ಸುಗಮಗೊಳಿಸುತ್ತದೆ ಎಂದರು.

ಪೈಪ್‍ಲೈನ್‍ಗಳು ಅತ್ಯಂತ ನುರಿತ ಮತ್ತು ಅನುಭವಿ ಸಂಸ್ಥೆಗಳಿಂದ ನಿರ್ಮಿಸಿದ್ದು, ಅತ್ಯಂತ ಸುರಕ್ಷಾ ಮತ್ತು ಪರಿಸರಸ್ನೇಹಿ ಸಾಗಾಣಿಕಾ ಮಾರ್ಗವಾಗಿದೆ. ಆದರೆ ಕೆಲವು ಬಾರಿ ಸಮಾಜ ವಿರೋಧಿಗಳು ಪೈಪ್‍ಲೈಬ್‍ನಿಂದ ಎಲ್‍ಪಿಜಿಯನ್ನು ಕಳವು, ಹಾನಿ, ಯಾವುದೇ ವಿಧ್ವಂಸಕ ಕೃತ್ಯ ಎಸಗಲು ಪ್ರಯತ್ನಿಸಿದಾಗ ಇಂತಹ ಸಮಾಜಘಾತಕ ಪ್ರಯತ್ನಗಳಿಂದ ರಾಷ್ಟ್ರೀಯ, ಸಾರ್ವಜನಿಕ ಆಸ್ತಿಗಳು ತೊಂದರೆಗೆ ಸಿಲುಕುತ್ತವೆ.

ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಇವುಗಳನ್ನು ಗಮನದಲ್ಲಿಟ್ಟುಕೊಂಡು ಎಲ್‍ಪಿಜಿ ಪೈಪ್‍ಲೈನ್ ಹಾದು ಹೋಗುವ ಎಲ್ಲಾ ಗ್ರಾಮಗಳಲ್ಲಿಯೂ ಸುರಕ್ಷತಾ ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿನೊಂದಿಗೆ ಕೈಜೋಡಿಸುತ್ತಾ ಜನರಿಗೆ ಪೈಪ್‍ಲೈನ್‍ನ ಸುರಕ್ಷತೆ ಮತ್ತು ಭದ್ರತೆಯ ಅರಿವು ಮೂಡಿಸುವುದು ಈ ಸುರಕ್ಷಾ ಅಭಿಯಾನದ ಉದ್ದೇಶ ಎಂದು ಹೇಳಿದರು.

ಮಂಗಳೂರು-ಹಾಸನ-ಮೈಸೂರು-ಬೆಂಗಳೂರು-ಚೆರ್ಲಪಲ್ಲಿ ಅನಿಲ ಸೋರಿಕೆ ಉಂಟಾದ ಸಂದರ್ಭದಲ್ಲಿ ಟೋಲ್ ಫ್ರೀ ಸಂಖ್ಯೆ 18001801276 ಹಾಗೂ ಮಂಗಳೂರು ನಿಯಂತ್ರಣ ಕೊಠಡಿ ಮೊಬೈಲ್ ನಂ 8861986057 ಗೆ ಸಂಪರ್ಕಿಸಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಪೌರಾಯುಕ್ತ ವಾಸೀಂ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವಿ ಅಗಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಪೊಲೀಸ್ ಇನ್ಸ್‍ಪೆಕ್ಟರ್ ಕಾಳಿಕೃಷ್ಣ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಹೆಚ್.ಎನ್.ಸಮರ್ಥ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‍ನ ಚೀಪ್ ಸ್ಟೇಷನ್ ಮ್ಯಾನೇಜರ್ ಅಭಿಷೇಕ್, ಭದ್ರತಾ ಅಧಿಕಾರಿ ಟಿ.ಎಂ.ಶಿವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CEOChitradurgaChitradurga newsChitradurga UpdatesDCGas leakHassan-CherlapallyHiriyurKannada Latest NewsKannada NewsLPGmock operationಅಣಕು ಕಾರ್ಯಾಚರಣೆಅನಿಲ ಸೋರಿಕೆಎಲ್‍ಪಿಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಡಿಸಿಸಿಇಒಹಾಸನ-ಚೆರ್ಲಪಲ್ಲಿಹಿರಿಯೂರು
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಜನವರಿ 7 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article today bhavishya Astrology: ದಿನ ಭವಿಷ್ಯ | ಜನವರಿ 08 | ಅನಿರೀಕ್ಷಿತ ಆರ್ಥಿಕ ಲಾಭ, ಹೊಸ ವಾಹನ ಖರೀದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up