By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    13 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    19 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    1 day ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    19 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    23 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    2 days ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    3 days ago
Reading: ಅನಿಲ ಸೋರಿಕೆ ನಿರ್ವಹಣೆ | ಅಣಕು ಕಾರ್ಯಾಚರಣೆ | ಡಿಸಿ, ಜಿ.ಪಂ ಸಿಇಒ ವೀಕ್ಷಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅನಿಲ ಸೋರಿಕೆ ನಿರ್ವಹಣೆ | ಅಣಕು ಕಾರ್ಯಾಚರಣೆ | ಡಿಸಿ, ಜಿ.ಪಂ ಸಿಇಒ ವೀಕ್ಷಣೆ

News Desk Chitradurga News
Last updated: 7 January 2025 21:12
News Desk Chitradurga News
2 years ago
Share
Gas Leak Management, Mock Operation, DC, CEO Observation
ಅನಿಲ ಸೋರಿಕೆ ನಿರ್ವಹಣೆ, ಅಣಕು ಕಾರ್ಯಾಚರಣೆ, ಡಿಸಿ, ಸಿಇಒ ವೀಕ್ಷಣೆ
SHARE

CHITRADURGA NEWS | 07 JANUARY 2025

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜೆ.ಹಳ್ಳಿ ಹೋಬಳಿ ದಿಂಡಾವರ ಪಂಚಾಯಿತಿ ವ್ಯಾಪ್ತಿಯ ಮಾದೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಅನಿಲ ಸೋರಿಕೆ ಸಂದರ್ಭದ ಬಿಕ್ಕಟ್ಟು ನಿರ್ವಹಣೆಗೆ ಸಂಬಂಧಿಸಿದಂತೆ ಅಣಕು ಪ್ರಾತ್ಯಕ್ಷಿಕೆ ಕಾರ್ಯಚರಣೆ ನಡೆಸಲಾಯಿತು.

ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಜನವರಿ 7 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ಅನಿಲ ಸೋರಿಕೆ ತಡೆಗಟ್ಟುವಿಕೆ ತುರ್ತು ಅಣಕು ಕಾರ್ಯಾಚರಣೆಯನ್ನು ಹಾಸನ-ಚೆರ್ಲಪಲ್ಲಿ ಎಲ್‍ಪಿಜಿ ಪೈಪ್‍ಲೈನ್‍ನ ಹೆಚ್‍ಸಿಪಿಎಲ್ ಚೈನೇಜ್ 123ರಲ್ಲಿ ಆಫ್‍ಸೈಟ್-ಅಣುಕು ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಯಿತು.

ಅನಿಲ ಸೋರಿಕೆ ಪ್ರಾತ್ಯಕ್ಷಿಕೆ: 

ಅಣಕು ಪ್ರದರ್ಶನದಡಿ ಹಾಸನ-ಚೆರ್ಲಪಲ್ಲಿ ಎಲ್‍ಪಿಜಿ ಪೈಪ್‍ಲೈನ್‍ನ ಹೆಚ್‍ಸಿಪಿಎಲ್ ಚೈನೇಜ್ 123ರ ಮಾದೇನಹಳ್ಳಿ ಗ್ರಾಮದಲ್ಲಿ ಅನಿಲ ಸೋರಿಕೆಯಾದ ಮಾಹಿತಿ ಭದ್ರತಾ ಸಿಬ್ಬಂದಿಯಿಂದ ನಿಯಂತ್ರಣ ಕೊಠಡಿ ಅಧಿಕಾರಿಗೆ ವಾಕಿಟಾಕಿ ಮೂಲಕ ಪರಸ್ಪರ ಸಂವಹನ ನಡೆಯುತ್ತದೆ.

ತಕ್ಷಣವೇ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅನಿಲ ಸೋರಿಕೆಯಾದ ಸ್ಥಳದ ಸುತ್ತಮುತ್ತ ತುರ್ತು ಪರಿಸ್ಥಿತಿ ಘೋಷಿಸುತ್ತಾರೆ. ತಕ್ಷಣವೇ ಅನಿಲ ಸೋರಿಕೆ ಸಿಬ್ಬಂದಿ, ಅಂಬುಲೆನ್ಸ್ ಹಾಗೂ ವೈದ್ಯಕೀಯ ತಂಡವೂ ಬರುತ್ತದೆ.

ನಂತರ ಸಿಬ್ಬಂದಿ ಅನಿಲ ಸೋರಿಕೆಯಾದ ಸ್ಥಳ ಪರಿಶೀಲಿಸಿ ಅಸ್ವಸ್ಥಗೊಂಡ ಭದ್ರತಾ ಸಿಬ್ಬಂದಿಯನ್ನು ವೈದ್ಯಕೀಯ ತಂಡದವರು ಪ್ರಥಮ ಚಿಕಿತ್ಸೆ ನೀಡಿ ಅಂಬುಲೆನ್ಸ್‍ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಾರೆ. ಹೀಗೆ ಭದ್ರತೆ, ರಕ್ಷಣೆ, ಅಗ್ನಿಶಾಮಕದಳದ ಸಿಬ್ಬಂದಿಯ ಕಾರ್ಯಾಚರಣೆ ಹಂತ ಹಂತವಾಗಿ ನಡೆಯುತ್ತದೆ.

ಕ್ಲಿಕ್ ಮಾಡಿ ಓದಿ: ಶಿವಗಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಗಿರೀಶ್ ಮಾಧುರಿ ನೇತೃತ್ವದ ಗುಂಪಿಗೆ ಜಯ

ಅಂತಿಮವಾಗಿ ಎಲ್‍ಪಿಜಿ ಸೋರಿಕೆಯನ್ನು ಯಶಸ್ವಿಯಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳಿಗೆ ದೃಢಪಡಿಸಲಾಯಿತು. ನಂತರ ಸೈರನ್ ಮೊಳಗಿಸಿ, ಹಸಿರು ಬಾವುಟ ಹಾರಿಸಲಾಯಿತು.

ಚಿತ್ರದುರ್ಗ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಹಾಸನದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಸಹಯೋಗದೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಲವರ್ಧನೆ ಸಂಬಂಧ ಆಯೋಜಿಸಲಾಗಿದ್ದ ಅಣಕು ಪ್ರದರ್ಶನ ಕಾರ್ಯಕ್ರಮ ವೀಕ್ಷಿಸಿ ಮಾತನಾಡಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅನಿಲ ಸೋರಿಕೆ ಸಂದರ್ಭದಲ್ಲಿನ ಬಿಕ್ಕಟ್ಟು ಪರಿಸ್ಥಿತಿಯನ್ನು, ಸಂಭವಿಸುವ ಅನಾಹುತವನ್ನು ಯಾವ ರೀತಿಯಾಗಿ ನಿಭಾಯಿಸುವುದು ಹಾಗೂ ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂಬುದನ್ನು ಅಣಕು ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿದೆ ಎಂದರು.

ಅನಿಲ ಸೋರಿಕೆಯ ದುರಂತದಿಂದ ಸಾಕಷ್ಟು ನಷ್ಟ ಉಂಟಾಗುತ್ತದೆ. ಇಂತಹ ವಿಪತ್ತು ಸಂಭವಿಸಿದಾಗ ಯಾವ ರೀತಿ ಇದನ್ನು ತಡೆಗಟ್ಟಬಹುದು ಎಂಬುವುದರ ಕುರಿತು ಎಲ್ಲರಿಗೂ ಅರಿವು ಹಾಗೂ ಎಚ್ಚರಿಕೆ ಇರಬೇಕು ಎಂಬ ಕಾರಣದಿಂದ ಅನಿಲ ಸೋರಿಕೆ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಪೈಪ್‍ಲೈನ್ ಹಾದುಹೋಗಿರುವ ಎಲ್ಲ ಗ್ರಾಮಗಳಲ್ಲಿಯೂ ಸಹ ನಿರಂತರವಾಗಿ ಅನಿಲ ಸೋರಿಕೆ ಅಣಕು ಪ್ರದರ್ಶನ ಹಮ್ಮಿಕೊಳ್ಳುವುದರಿಂದ ಅರಿವು ಮೂಡಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಕ್ಲಿಕ್ ಮಾಡಿ ಓದಿ: ಮುಖ್ಯ ರಸ್ತೆ ಅಗಲೀಕರಣ ಫಿಕ್ಸ್ | 15 ದಿನಗಳಲ್ಲಿ ದಾಖಲೆ ಸಂಗ್ರಹಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಪೆಟ್ರೋಲಿಯಂ ಉತ್ಪನ್ನಗಳ ಪೈಪ್‍ಲೈನ್, ವಾಟರ್ ಪೈಪ್‍ಲೈನ್ ಸೇರಿದಂತೆ ಯಾವುದೇ ಪೈಪ್‍ಲೈನ್‍ಗಳನ್ನು ನಿರ್ವಹಣೆ ಮಾಡಲು ಅಗ್ನಿಶಾಮಕ ವಾಹನ ಸಂಚಾರ, ಅಂಬುಲೆನ್ಸ್, ಭದ್ರತಾ ತಂಡಗಳ ಸಂಚಾರಕ್ಕೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಲಾಗುತ್ತದೆ.

ಆದರೆ ಈ ಪೈಪ್‍ಲೈನ್‍ಗೆ ಎಲ್ಲಿಯೂ ಆ ತರಹದ ರಸ್ತೆ ಇಲ್ಲ. ತುರ್ತು ಅವಘಡಗಳು ಸಂಭವಿಸಿದಾಗ ತಕ್ಷಣ ಆ ಸ್ಥಳಕ್ಕೆ ತಲುಪಲು ಸಮೀಪದ ರಸ್ತೆ ಅವಲಂಬಿಸಬೇಕಾಗುತ್ತದೆ. ಆ ರಸ್ತೆಯ ಮೂಲಕ ಆಗಮಿಸಿ ಪರಿಸ್ಥಿತಿ ನಿಭಾಯಿಸಬೇಕಾಗುತ್ತದೆ.

ಆದರೆ ಈ ಪೈಪ್‍ಲೈನ್‍ಗೆ ಜಿಯೋ ಪೆನ್ಸಿಂಗ್ ಇದ್ದು, ಇದರ ಮೂಲಕ ಯಾವ ಸ್ಥಳದಲ್ಲಿ ಪೈಪ್‍ಲೈನ್ ಡ್ಯಾಮೇಜ್ ಆಗಿದೆ ಎಂಬುದನ್ನು ನಿಖರವಾಗಿ ಪತ್ತೆಹಚ್ಚಬಹುದಾಗಿದೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ರಸ್ತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಲ್‍ಪಿಜಿ ಪೈಪ್‍ಲೈನ್ ಹಾದು ಹೋಗಿರುವ ಎಲ್ಲ ಗ್ರಾಮಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿಯೂ ಅನಿಲ ಸೋರಿಕೆ ತಡೆ ಸುರಕ್ಷತಾ ಅಭಿಯಾನಯನ್ನು ನಿರಂತರವಾಗಿ ಮಾಡಬೇಕು. ರೈತರು, ಸಾರ್ವಜನಿಕರು, ಮಕ್ಕಳು, ಸುತ್ತಮುತ್ತಲಿನ ಗ್ರಾಮಸ್ಥರಿಗೆ ಪೈಪ್‍ಲೈನ್ ಹಾದುಹೋಗಿರುವ ಮಾಹಿತಿ ತಿಳಿದಿರಬೇಕು.

ಕ್ಲಿಕ್ ಮಾಡಿ ಓದಿ: ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

 ಒಂದು ವೇಳೆ ಅನಿಲ ಸೋರಿಕೆಯಾದರೆ ಯಾವ ರೀತಿಯ ಅನಾಹುತ ಸಂಭವಿಸುತ್ತದೆ. ಅನಾಹುತ ಉಂಟಾದಾಗ ಯಾರಿಗೆ ಸಂಪರ್ಕಿಸಬೇಕು ಎಂಬ ಮಾಹಿತಿ ಅತ್ಯಗತ್ಯ. ಹಾಗಾಗಿ ದುರ್ಘಟನೆ ತಡೆಯಲು ಹಾಗೂ ತಕ್ಷಣ ಮಾಹಿತಿ ತಿಳಿಸಲು ಸಹಾಯವಾಣಿ ಸಂಖ್ಯೆಯ ಮಾಹಿತಿ ಎಲ್ಲರೂ ತಿಳಿದಿರಬೇಕು ಎಂದು ಹೇಳಿದರು.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‍ನ ಚೀಪ್ ಸ್ಟೇಷನ್ ಮ್ಯಾನೇಜರ್ ಅಭಿಷೇಕ್ ಮಾತನಾಡಿ, ಮಂಗಳೂರು-ಹಾಸನ-ಮೈಸೂರು-ಬೆಂಗಳೂರು-ಚೆರ್ಲಪಲ್ಲಿ ಎಲ್‍ಪಿಜಿ ಪೈಪ್‍ಲೈನ್ ಭಾರತ ಸರ್ಕಾರದ ಅಧೀನ ಸಂಸ್ಥೆಯಾದ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‍ನ ಕಂಪನಿಯವರು ನಿರ್ವಹಿಸಿ ನಿರ್ವಹಿಸುತ್ತಿರುವ ಮಹತ್ವಪೂರ್ಣ ರಾಷ್ಟ್ರೀಯ ಯೋಜನೆ.

ಈ ಪೈಪ್‍ಲೈನ್ ಮಂಗಳೂರಿನಿಂದ ಎಲ್‍ಪಿಜಿಯನ್ನು ರವಾನೆ ಮಾಡುತ್ತಾ ಹಾಸನದ ಮೂಲಕ ಯಡಿಯೂರು ಹಾಗೂ ಮೈಸೂರು, ಚೆರ್ಲಪಲ್ಲಿಯಲ್ಲಿ ಅಂತ್ಯಗೊಳ್ಳುತ್ತದೆ. ಈ ಪೈಪ್‍ಲೈನ್ ಉದ್ದೇಶವು ಕರ್ನಾಟಕ ಮತ್ತು ನೆರೆಯ ರಾಜ್ಯಗಳ ಬೆಳೆಯುತ್ತಿರುವ ಎಲ್‍ಪಿಜಿ ಬೇಡಿಕೆ ಪೂರೈಸುವುದಲ್ಲದೇ ಪಶ್ಚಿಮ ಘಟ್ಟ ಮತ್ತು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಂಚಾರ ವ್ಯವಸ್ಥೆಯನ್ನೂ ಸುಗಮಗೊಳಿಸುತ್ತದೆ ಎಂದರು.

ಪೈಪ್‍ಲೈನ್‍ಗಳು ಅತ್ಯಂತ ನುರಿತ ಮತ್ತು ಅನುಭವಿ ಸಂಸ್ಥೆಗಳಿಂದ ನಿರ್ಮಿಸಿದ್ದು, ಅತ್ಯಂತ ಸುರಕ್ಷಾ ಮತ್ತು ಪರಿಸರಸ್ನೇಹಿ ಸಾಗಾಣಿಕಾ ಮಾರ್ಗವಾಗಿದೆ. ಆದರೆ ಕೆಲವು ಬಾರಿ ಸಮಾಜ ವಿರೋಧಿಗಳು ಪೈಪ್‍ಲೈಬ್‍ನಿಂದ ಎಲ್‍ಪಿಜಿಯನ್ನು ಕಳವು, ಹಾನಿ, ಯಾವುದೇ ವಿಧ್ವಂಸಕ ಕೃತ್ಯ ಎಸಗಲು ಪ್ರಯತ್ನಿಸಿದಾಗ ಇಂತಹ ಸಮಾಜಘಾತಕ ಪ್ರಯತ್ನಗಳಿಂದ ರಾಷ್ಟ್ರೀಯ, ಸಾರ್ವಜನಿಕ ಆಸ್ತಿಗಳು ತೊಂದರೆಗೆ ಸಿಲುಕುತ್ತವೆ.

ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಇವುಗಳನ್ನು ಗಮನದಲ್ಲಿಟ್ಟುಕೊಂಡು ಎಲ್‍ಪಿಜಿ ಪೈಪ್‍ಲೈನ್ ಹಾದು ಹೋಗುವ ಎಲ್ಲಾ ಗ್ರಾಮಗಳಲ್ಲಿಯೂ ಸುರಕ್ಷತಾ ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿನೊಂದಿಗೆ ಕೈಜೋಡಿಸುತ್ತಾ ಜನರಿಗೆ ಪೈಪ್‍ಲೈನ್‍ನ ಸುರಕ್ಷತೆ ಮತ್ತು ಭದ್ರತೆಯ ಅರಿವು ಮೂಡಿಸುವುದು ಈ ಸುರಕ್ಷಾ ಅಭಿಯಾನದ ಉದ್ದೇಶ ಎಂದು ಹೇಳಿದರು.

ಮಂಗಳೂರು-ಹಾಸನ-ಮೈಸೂರು-ಬೆಂಗಳೂರು-ಚೆರ್ಲಪಲ್ಲಿ ಅನಿಲ ಸೋರಿಕೆ ಉಂಟಾದ ಸಂದರ್ಭದಲ್ಲಿ ಟೋಲ್ ಫ್ರೀ ಸಂಖ್ಯೆ 18001801276 ಹಾಗೂ ಮಂಗಳೂರು ನಿಯಂತ್ರಣ ಕೊಠಡಿ ಮೊಬೈಲ್ ನಂ 8861986057 ಗೆ ಸಂಪರ್ಕಿಸಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಪೌರಾಯುಕ್ತ ವಾಸೀಂ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವಿ ಅಗಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಪೊಲೀಸ್ ಇನ್ಸ್‍ಪೆಕ್ಟರ್ ಕಾಳಿಕೃಷ್ಣ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಹೆಚ್.ಎನ್.ಸಮರ್ಥ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‍ನ ಚೀಪ್ ಸ್ಟೇಷನ್ ಮ್ಯಾನೇಜರ್ ಅಭಿಷೇಕ್, ಭದ್ರತಾ ಅಧಿಕಾರಿ ಟಿ.ಎಂ.ಶಿವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CEOChitradurgaChitradurga newsChitradurga UpdatesDCGas leakHassan-CherlapallyHiriyurKannada Latest NewsKannada NewsLPGmock operationಅಣಕು ಕಾರ್ಯಾಚರಣೆಅನಿಲ ಸೋರಿಕೆಎಲ್‍ಪಿಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಡಿಸಿಸಿಇಒಹಾಸನ-ಚೆರ್ಲಪಲ್ಲಿಹಿರಿಯೂರು
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಜನವರಿ 7 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article today bhavishya Astrology: ದಿನ ಭವಿಷ್ಯ | ಜನವರಿ 08 | ಅನಿರೀಕ್ಷಿತ ಆರ್ಥಿಕ ಲಾಭ, ಹೊಸ ವಾಹನ ಖರೀದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
Dina Bhavishya
ವಾಣಿವಿಲಾಸ ಸಾಗರ ಜಲಾಶಯ
ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up