By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆ
    ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ
    1 hour ago
    ಅರ್ಜಿ ಅಹ್ವಾನ
    ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    13 hours ago
    ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
    13 hours ago
    jobs in chitradurga news
    ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ 
    13 hours ago
    Bhadra water flow
    ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್‌ ರವಿಶಂಕರ್‌ ಉತ್ತರ ಏನು ?
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    6 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    14 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    7 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    5 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    5 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    13 hours ago
    Taking deep breaths
    ಆಳವಾದ ಉಸಿರನ್ನು ತೆಗೆದುಕೊಳ್ಳುವುದರಿಂದ ದೇಹಕ್ಕೆ ಈ ಪ್ರಯೋಜನಗಳು ದೊರೆಯುತ್ತದೆಯಂತೆ
    14 hours ago
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    2 days ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    2 days ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    3 days ago
Reading: ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ

News Desk Chitradurga News
Last updated: 10 September 2026 20:17
News Desk Chitradurga News
1 hour ago
Share
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆ
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆ
SHARE

CHITRADURGA NEWS | 10 SEPTEMBER 2026

ಚಿತ್ರದುರ್ಗ: ಮುಂಬರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆಗಳ ವೇಳೆ ಕಾನೂನು ಪಾಲನೆ ಕಡ್ಡಾಯವಾಗಿದ್ದು, ಆಯೋಜಕರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ರಾಸಾಯನಿಕ ಬಣ್ಣ ಹಾಗೂ ಪ್ಲ್ಯಾಸ್ಟರ್ ಆಫ್ ಪ್ಯಾರಿಸ್ ಮುಕ್ತ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರ ಬಳಸಲು ಜಾಗೃತಿ ಮೂಡಿಸಬೇಕು ಎಂದರು.

ಕೇಂದ್ರಸ್ಥಾನದಲ್ಲಿ ಇರಲು ಸೂಚನೆ:

ಜನರ ಜೀವ ಮತ್ತು ಆಸ್ತಿಪಾಸ್ತಿಯ ರಕ್ಷಣೆಯು ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜವಾಬ್ದಾರಿಯಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮಗಳ ಯಶಸ್ಸಿಗೆ ಗಂಭೀರವಾಗಿ ಶ್ರಮಿಸಬೇಕು. ಸಣ್ಣ ಪುಟ್ಟ ಲೋಪದೋಷಗಳಿಗೂ ಆಸ್ಪದ ನೀಡದೆ ಪರಿಶೀಲನಾ ಪಟ್ಟಿ ಆಧಾರದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಬೇಕು. 

ಇದನ್ನೂ ಓದಿ: ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಗಣೇಶ ವಿಸರ್ಜನೆ ಹಾಗೂ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ನಗರಸಭೆ ಕಮಿಷನರ್, ತಹಶೀಲ್ದಾರ್, ಎಸಿ, ವೈದ್ಯಾಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ. ತುರ್ತು ಸಂದರ್ಭ ಎದುರಾದರೆ ಮೇಲಾಧಿಕಾರಿಗಳ ಹಂತದಲ್ಲಿ ಸಾಕು ಎನ್ನದೆ, ನೇರವಾಗಿ ಜಿಲ್ಲಾಧಿಕಾರಿಗಳಿಂದಲೇ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕ ಗಣೇಶೋತ್ಸವ – ಬಿಗಿ ಪೊಲೀಸ್ ಬಂದೋಬಸ್ತ್ :

ಜಿಲ್ಲಾದ್ಯಂತ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನೆರವೇರಿಸಲು ಪೊಲೀಸ್ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1,783 ಕಡೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. 3ನೇ ದಿನದಂದು ಸುಮಾರು 927, 5ನೇ ದಿನದಂದು 453 ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆಗಳು ನಡೆಯಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು ಸಭೆಯಲ್ಲಿ ತಿಳಿಸಿದರು.

ನಗರದ ಹಿಂದೂ ಮಹಾಗಣಪತಿ ಅತಿ ದೊಡ್ಡ ಹಾಗೂ ಅತಿ ಸೂಕ್ಷ್ಮ ಮೆರವಣಿಗೆಯಾಗಿದ್ದು, ಶೋಭಾಯಾತ್ರೆ ಅಕ್ಟೋಬರ್ 3 ರಂದು ನಿಗದಿಯಾಗಿದೆ. ಸುಮಾರು 3.5 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದು ರಾಜ್ಯದಲ್ಲೇ ಅತಿ ದೊಡ್ಡ ಹಾಗೂ ದೇಶದಲ್ಲೇ ಎರಡನೇ ಜನಸಂದಣಿಯ ಮೆರವಣಿಯಾಗಿದೆ. ಇದರ ಜೊತೆಗೆ ಜಿಲ್ಲೆಯ 6 ಕಡೆ ಹಿಂದು ಮಹಾಗಣಪತಿ ವಿಸರ್ಜನೆ ಮೆರವಣಿಗೆ ನಡೆಯಲಿದೆ. 5000 ಕ್ಕೂ ಹೆಚ್ಚು ಜನ ಸೇರುವ ಎಲ್ಲಾ ಮೆರವಣಿಗೆಗಳನ್ನೂ ಸೂಕ್ಷ್ಮ ಎಂದು ಪರಿಗಣಿಸಿ ಸೂಕ್ತ ಬಂದೋಬಸ್ತ್ ಯೋಜನೆ ರೂಪಿಸಲಾಗಿದೆ. ಸಾರ್ವಜನಿಕರ ಭದ್ರತೆಗೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ

ಶೋಭಾ ಯಾತ್ರ ನಗರದ ಮರುಘರಾಜೇಂದ್ರ ಕ್ರೀಡಾಂಗಣದಿಂದ ಪ್ರಾರಂಭಗೊಂಡು ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಮದಕರಿ ಹಾಗೂ ನೆಹರೂ ವೃತ್ತದಂತಹ ಪ್ರಮುಖ ಜಂಕ್ಷನ್‍ಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗುವುದು. ಮೆರವಣಿಗೆ ಸಾಗುವ ಮಾರ್ಗದಲ್ಲಿರುವ ಮಸೀದಿಗಳ ಮುಂಭಾಗ ಸೂಕ್ತ ಭದ್ರತಾ ಹಾಗೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ಗಣೇಶೋತ್ಸವ ಬಂದೋಬಸ್ತ್ ಕಾರ್ಯವು ಕೇವಲ ಪೊಲೀಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ, ಇದಕ್ಕಾಗಿ ಜಿಲ್ಲೆಯ ಎಲ್ಲಾ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಹಿಂದೂ ಮಹಾಗಣಪತಿ ಶೋಭಾಯಾತ್ರೆಯನ್ನು ವಿಪತ್ತು ನಿರ್ವಹಣೆ ಮಾದರಿಯಲ್ಲಿ ಕೈಗೊಳ್ಳಲು ಅನುಮತಿ ಕೋರಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

ಮಾರ್ಗಸೂಚಿಗಳ ಪಾಲನೆ ಕಡ್ಡಾಯ

ಜನಸಂದಣಿ ಹಾಗೂ ಕಾಲ್ತುಳಿತ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ನೂತನ ಪ್ರಮಾಣಿತ ಕಾರ್ಯಾಚರಣೆ ವಿಧಾನ ಮತ್ತು ಮಾರ್ಗಸೂಚಿಗಳನ್ನು ಹೊರಡಿಸಿದೆ. ಗಣೇಶೋತ್ಸವ ಹಾಗೂ ಶೋಭಾಯಾತ್ರೆ ಆಯೋಜಕರು ಕಡ್ಡಾಯವಾಗಿ ಇವುಗಳನ್ನು ಪಾಲನೆ ಮಾಡಬೆಕು. ಸಂಬಂಧ ಪಟ್ಟ ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆಯಬೇಕು.

ಫ್ಲೆಕ್ಸ್ ಹಾಗೂ ಬ್ಯಾನರ್ ಅಳವಡಿಕೆ ಮಾರ್ಗಸೂಚಿ:

ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಮತ್ತು ಕಟೌಟ್‍ಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಬಿಗಿಯಾದ ಮಾರ್ಗಸೂಚಿಗಳನ್ನು ಹೊರಡಿಸುವ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿ: ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ 

ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಕೆಗೆ ಅನುಮತಿ ನೀಡುವಾಗ ‘ಎಲ್ಲಿ ಅಳವಡಿಸಬೇಕು, ಎಷ್ಟು ಪ್ರಮಾಣದಲ್ಲಿರಬೇಕು ಹಾಗೂ ಎಷ್ಟು ದಿನಗಳ ಕಾಲ ಇರಬೇಕು’ ಎಂಬುದರ ಕುರಿತು ಸ್ಪಷ್ಟ ಮತ್ತು ಕಟ್ಟುನಿಟ್ಟಾದ ಆದೇಶ ಹೊರಡಿಸಬೇಕು. ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳು, ಸರ್ಕಾರಿ ಕಚೇರಿಗಳ ಆವರಣ ಹಾಗೂ ಗೊಂದಲಗಳಿಗೆ ಕಾರಣವಾಗುವ ಸ್ಥಳಗಳಲ್ಲಿ ಫ್ಲೆಕ್ಸ್ ಅಳವಡಿಸುವುದನ್ನು ನಿಯಂತ್ರಿಸಬೇಕು. ಫ್ಲೆಕ್ಸ್ ಹಾಗೂ ಬ್ಯಾನರ್ ಮುದ್ರಣ ಮಾಡುವವರ (ಪ್ರಿಂಟಿಂಗ್ ಪ್ರೆಸ್) ಮಾಹಿತಿ ಹಾಗೂ ಅನುಮತಿ ಸಂಖ್ಯೆಯನ್ನು ಫ್ಲೆಕ್ಸ್ ಮೇಲೆ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಬೇಕು. 

ನಿಗದಿತ ಸಮಯ ಮುಗಿದ ತಕ್ಷಣ ಸಂಬಂಧಪಟ್ಟವರೇ ಅದನ್ನು ತೆರವುಗೊಳಿಸಬೇಕು, ಇಲ್ಲವೇ ನಗರಾಡಳಿತ ಕ್ರಮ ಕೈಗೊಳ್ಳಬೇಕು. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರು ನಗರದಲ್ಲಿ ಅನೇಕ ಆಕಾಂಕ್ಷಿಗಳು ಹಾಗೂ ಬೆಂಬಲಿಗರು ಮನಬಂದಂತೆ ಬ್ಯಾನರ್ ಹಾಕುತ್ತಾರೆ. ಇದು ಸ್ಥಳೀಯವಾಗಿ ಅನಗತ್ಯ ಗೊಂದಲ ಹಾಗೂ ಕಾನೂನು ಸುವ್ಯವಸ್ಥೆ ಸಮಸ್ಯೆಗೆ ದಾರಿಯಾಗುತ್ತದೆ. ಸ್ಥಳೀಯ ನಗರಾಡಳಿತ ಸಂಸ್ಥೆಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಇದನ್ನೂ ಓದಿ: ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್‌ ರವಿಶಂಕರ್‌ ಉತ್ತರ ಏನು ?

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕಾಂತರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಸಿ.ಸುನೀಲ್ ಕುಮಾರ್, ನಗರಸಭೆ ಆಯುಕ್ತೆ ಲಕ್ಷ್ಮಿ, ಪರಿಸರಾಧಿಕಾರಿ ಪಲ್ಲವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDistrict AdministrationGauri Ganesh Festivalಗೌರಿ ಗಣೇಶ ಹಬ್ಬಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಡಳಿತ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
jobs in chitradurga news
ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up