By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತಾವರೆ ಹೂವು ಮುಡಿದು ಸಂಸತ್‌ ಪ್ರವೇಶಿಸುತ್ತೇನೆ | ಸಿರಿಗೆರೆ ಮಠಕ್ಕೆ ಗಾಯತ್ರಿ ಸಿದ್ದೇಶ್ವರ ಭೇಟಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತಾವರೆ ಹೂವು ಮುಡಿದು ಸಂಸತ್‌ ಪ್ರವೇಶಿಸುತ್ತೇನೆ | ಸಿರಿಗೆರೆ ಮಠಕ್ಕೆ ಗಾಯತ್ರಿ ಸಿದ್ದೇಶ್ವರ ಭೇಟಿ

ಮುಖ್ಯ ಸುದ್ದಿ

ತಾವರೆ ಹೂವು ಮುಡಿದು ಸಂಸತ್‌ ಪ್ರವೇಶಿಸುತ್ತೇನೆ | ಸಿರಿಗೆರೆ ಮಠಕ್ಕೆ ಗಾಯತ್ರಿ ಸಿದ್ದೇಶ್ವರ ಭೇಟಿ

News Desk Chitradurga News
Last updated: 15 March 2024 15:21
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 MARCH 2024
ಚಿತ್ರದುರ್ಗ: ದುರ್ಗದ ಸೊಸೆ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಟಿಕೆಟ್‌ ಘೋಷಣೆಯಾದ ಬಳಿಕ ಮಠಗಳಿಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಗುರುವಾರ ಸಿರಿಗೆರೆ ಬೃಹನ್ಮಠ, ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಪುತ್ರ ಜಿ.ಎಸ್.ಅನಿತ್‌ ಕುಮಾರ್‌, ಪುತ್ರಿ ಅಶ್ವಿನಿ ಶ್ರೀನಿವಾಸ್‌ ಮುಖಂಡರ ಜತೆ ಸಿರಿಗೆರೆ ಮಠಕ್ಕೆ ಆಗಮಿಸಿದ ಗಾಯತ್ರಿ ಸಿದ್ದೇಶ್ವರ ಅವರು, ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಅವರು, ‘ಪತಿಯ ಸಹಕಾರದಿಂದ ಸಮರ್ಥವಾಗಿ ಕೆಲಸ ನಿಭಾಯಿಸುವೆ’ ಎಂದರು.

ಕ್ಲಿಕ್ ಮಾಡಿ ಓದಿ: https://chitradurganews.com/davangere-daughter-in-law-of-durga-is-a-bjp-candidate/

‘ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜನರ ಆಶೀರ್ವಾದ ಹಾಗೂ ಸಹಕಾರದಿಂದ ಕ್ಷೇತ್ರದಲ್ಲಿ ಮತ್ತೊಮ್ಮೆ ಖಂಡಿತವಾಗಿ ಕಮಲ ಅರಳಲಿದೆ. ತಾವರೆ ಹೂವು ಮುಡಿದು ಸಂಸತ್‌ ಪ್ರವೇಶಿಸುತ್ತೇನೆ ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ನನಗೆ ಟಿಕೆಟ್ ಸಿಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ರಾಷ್ಟ್ರದ ನಾಯಕರು ನನಗೆ ಅವಕಾಶ ನೀಡಿದ್ದಾರೆ. ಯಾವುದೇ ಕಳಂಕ ಬಾರದಂತೆ ಎಲ್ಲರ ಸಹಕಾರದಿಂದ ಗೆದ್ದು ಬರುತ್ತೇನೆ. ಪಕ್ಷದ ಹಿರಿಯರು, ಮುಖಂಡರು ದೇಶಸೇವೆಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಇಲ್ಲಿಯವರೆಗೆ ಮನೆಯೇ ನನ್ನ ಕುಟುಂಬವಾಗಿತ್ತು. ಇನ್ನು ಮುಂದೆ ಇಡೀ ದಾವಣಗೆರೆಯೇ ಕುಟುಂಬವಾಗಲಿದೆ’ ಎಂದರು.

‘ಕಳೆದ 28 ವರ್ಷಗಳಿಂದಲೂ ಕಾರ್ಯಕರ್ತರೊಂದಿಗೆ ಅವಿನಭಾವ ಒಡನಾಟವಿದೆ. ನಮ್ಮ ಮಾವನವರು ಏಳು ವರ್ಷ, ಪತಿ 20 ವರ್ಷ ಸಂಸದರಾಗಿ ಸೇವೆ ಮಾಡಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಎಲ್ಲ ಮನೆಗಳಿಗೆ ಹೋಗಿದ್ದೇನೆ. ಕಾರ್ಯಕರ್ತರ ಒಡನಾಟವಿದೆ. ಆದ್ದರಿಂದ ಸಕ್ರಿಯ ರಾಜಕಾರಣ ನನಗೇನು ಹೊಸದು ಅನಿಸುತ್ತಿಲ್ಲ’ ಎಂದರು.

ಕ್ಲಿಕ್ ಮಾಡಿ ಓದಿ: https://chitradurganews.com/former-mp-bn-chandrappa-is-upset/

‘ಪತಿ, ಸಂಸದರಾದ ಸಿದ್ದೇಶ್ವರ ಅವರು ಎಲ್ಲಿಯೂ ಹೋಗುವುದಿಲ್ಲ, ಕ್ಷೇತ್ರದ ಜನರೊಂದಿಗೆ ಇದ್ದೇ ಇರುತ್ತಾರೆ. 20 ವರ್ಷಗಳ ಕಾಲ ಉತ್ತಮ ಕೆಲಸ ಮಾಡಿದ್ದಾರೆ. ಮುಂದೆ ಅವರ ಸಲಹೆ, ಸಹಕಾರ ಪಡೆದು ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPDavangereElectionsLok SabhaRambhapuriSirigereಚುನಾವಣೆದಾವಣಗೆರೆಬಿಜೆಪಿರಂಭಾಪುರಿಲೋಕಸಭೆಸಿರಿಗೆರೆ
Share This Article
Facebook Email Print
Previous Article ಮಾದಾರ ಚನ್ನಯ್ಯ ಗುರುಪೀಠಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ್ ಭೇಟಿ
Next Article ಬೋರ್‌ವೆಲ್‌ ಕೊರೆಯಲು ಏಕರೂಪ ದರ ನಿಗದಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up