CHITRADURGA NEWS | 05 NOVEMBER 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಗೀತಾ ಭರಮಸಾಗರ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ನಿರ್ದೇಶಕ ಸ್ಥಾನಕ್ಕೆ ಸೋಮವಾರ ನಾಮಪತ್ರ(Nomination) ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: BJP protest: ವಕ್ಫ್ ಕಾಯ್ದೆ ದುರ್ಬಳಕೆ | ಲ್ಯಾಂಡ್ ಜಿಹಾದ್ ಷಡ್ಯಂತ್ರ | ಬಿಜೆಪಿ ಪ್ರತಿಭಟನೆ
ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ, ಸಾಂಸ್ಕೃತಿಕ, ಸಾಹಿತ್ಯಿಕ ಪರಿಚಾರಕಿ, ಲೇಖಕಿ, ಸಂಪನ್ಮೂಲ ವ್ಯಕ್ತಿ ಚಿಂತಕಿಯಾಗಿರುವ ಗೀತಾ ಭರಮಸಾಗರ ಅವರು ಶಿಕ್ಷಣ ಇಲಾಖೆಯ ತಂಡದೊಂದಿಗೆ ಜಿಲ್ಲಾಧ್ಯಕ್ಷರಾದ ತಿಮ್ಮಾರೆಡ್ಡಿ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಅಧಿಕೃತವಾಗಿ ನಾಮ ಪತ್ರವನ್ನು ಚುನಾವಣಾ ಅಧಿಕಾರಿಗಳಾದ ಡಿ.ಟಿ. ಜಗನ್ನಾಥ್ ಅವರ ಪರವಾಗಿ ಬಿ.ಆರ್.ಸಿ ಸಂಪತ್ ಕುಮಾರ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ತಿಮ್ಮಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಂತೇಶ್ , ತಾಲ್ಲೂಕು ಅಧ್ಯಕ್ಷ ಕೆಂಚಪ್ಪ ಸೇರಿದಂತೆ ಇತರರು ಇದ್ದರು.
ಕ್ಲಿಕ್ ಮಾಡಿ ಓದಿ: ವಿಧಾನಸಭೆ ಉಪಚುನಾವಣೆ | NDA ಅಭ್ಯರ್ಥಿ ನಿಖಿಲ್ ಪರ ಶಾಸಕ ಎಂ.ಚಂದ್ರಪ್ಪ ಪ್ರಚಾರ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number