
CHITRADURGA NEWS | 17 SEPTEMBER 2025
ಚಿತ್ರದುರ್ಗ: ಕೆ.ಓ.ಎಫ್-ಚಿತ್ರದುರ್ಗ ಒಕ್ಕೂಟದ 35ನೇ ವರ್ಷದ ಸರ್ವ ಸಧಸ್ಯರ ಸಾಮಾನ್ಯ ಮಹಾಸಭೆಯು ಈಚೆಗೆ ಚಿತ್ರದುರ್ಗ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಒಕ್ಕೂಟದ ಕೇಂದ್ರ ಕಚೇರಿಯಲ್ಲಿ ನಡೆಯಿತು.
ಇದನ್ನೂ ಓದಿ: ಸೆ.18 ರಂದು ಚಿತ್ರದುರ್ಗ-SSS ಹಬ್ಬಳ್ಳಿ ಎಕ್ಸ್ಪ್ರೆಸ್ ರೈಲು ರದ್ದು

ಹಿರಿಯ ಸಹಕಾರಿ, ಮಾಜಿ ಸಚಿವರು ಹಾಗೂ ಕೆಓಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡರು ಸಭೆ ಉದ್ದೇಶಿಸಿ, ಎಣ್ಣೆಬೀಜ ಬೆಳೆಯುವ ರೈತರಿಗೆ ಸಹಕಾರ ತತ್ವದ ಆದಾರದಲ್ಲಿ ಪ್ರಾಥಮಿಕ ಎಣ್ಣೆಬೀಜ ಸಹಕಾರ ಸಂಘಗಳ ಮತ್ತು ರೈತರ ಸರ್ವತೋಮುಖ ಅಭಿವೃದ್ದಿಯ ಬಗ್ಗೆ ಮಾರ್ಗದರ್ಶನ ನೀಡಿದರು.
ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಮಾತನಾಡಿ, ಎಣ್ಣೆಕಾಳು ಬೆಳೆಯುವ ರೈತರಿಗೆ ಹೊಸ ಹೊಸ ತಳಿಗಳ ಶೇಂಗಾ, ಸೂರ್ಯಕಾಂತಿ, ಔಡಲ, ಹರಳು, ತೊಗರಿ, ಇತ್ಯಾದಿ ಬೀಜೋತ್ಪಾದನೆ ಮಾಡಿ ರೈತರು ಕೃಷಿಯಿಂದ ಹೇಗೆ ಲಾಭ ಪಡೆಯಬಹುದು ಎಂದು ವಿವರಿಸಿದರು.
ಕೆಓಎಫ್ ವ್ಯವಸ್ಥಾಪಕ ಡಾ.ಎಂ.ಜಯಕೃಷ್ಣ ಅವರು, ಒಕ್ಕೂಟದ ಕಾರ್ಯಕ್ರಮ, ಸಾಧನೆ, ವ್ಯವಹಾರ, ಮುಂದಿನ ಯೋಜನೆ, ಆರ್ಥಿಕ ತಖ್ತೆಗಳ ಬಗ್ಗೆ ವಿವರಿಸಿದರು.
ಕೆಓಎಫ್ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರು ಸಭೆಯ ಎಲ್ಲಾ ಜವಾದ್ದಾರಿ ವಹಿಸಿಕೊಂಡು ಸಭೆಯು ಸುಸೂತ್ರವಾಗಿ ನಡೆಯಲು ಸಹಕಾರಿಯಾದರು.
ಒಕ್ಕೂಟದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಮತ್ತು ನೌಕರರು ಒಕ್ಕೂಟವನ್ನು ಮುಂದಿನ ದಿನಗಳಲ್ಲಿ ರಾಷ್ಠ್ರ ಮಟ್ಟದಲ್ಲಿಯೇ ಅತ್ಯುತ್ತಮ ಸಹಕಾರಿ ಸಂಸ್ಥೆಯಾಗಿ ರೈತರಿಗೆ ಮತ್ತು ಗ್ರಾಹಕರಿಗೆ ಅತ್ಯುತ್ತಮ ಸೇವೆ ಕೊಡುವ ವಾಗ್ದಾನ ಮಾಡಿದರು.
ಇದನ್ನೂ ಓದಿ: ಮೂಲ ಜಾತಿಯಲ್ಲಿ ಗುರುತಿಸಿಕೊಳ್ಳದಿದ್ದರೆ ಚಿಪ್ಪೇ ಗತಿ | ಎಚ್.ಆಂಜನೇಯ
ರೈತರ ಉತ್ಪನ್ನಗಳಾದ “ಸಫಲ್, ಸನ್ಗೋಲ್ಡ್ ಶ್ರೇಣಿಯ ಖಾಧ್ಯ ತೈಲಗಳು ಮತ್ತು ಕೃಷಿ ಉತ್ಪನ್ನಗಳನ್ನು ಖರೀದಿಸಿ ರೈತರಿಗೆ ಮತ್ತು ರೈತ ಸಹಕಾರಿ ಸಂಸ್ಥೆಗೆ ಗೌರವಕೊಡಬೇಕೆಂದು ಕೆ.ಓ.ಎಫ್-ಚಿತ್ರದುರ್ಗದ ಆಡಳಿತ ಮಂಡಳಿಯು ಮನವಿ ಮಾಡಿತು.
ಚಿತ್ರದುರ್ಗ ಕೆಒಎಫ್ ಒಕ್ಕೂಟದ ಅಧ್ಯಕ್ಷ ಜಿ.ವಿ.ಉದಯಕುಮಾರ್, ರಾಯಚೂರು ಕೆಒಎಫ್ ಅಧ್ಯಕ್ಷ ಸುರೇಶ ರೆಡ್ಡಿ, ಹುಬ್ಬಳ್ಳಿ ಕೆಒಎಫ್ ನಿರ್ದೇಶಕ ಬಿ.ಟಿ.ಬೆನಕಟ್ಟೆ ಸೇರಿದಂತೆ ಮತ್ತಿತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
