Connect with us

ಮಹನೀಯರು ಒಂದು ಜಾತಿಗೆ ಸೀಮಿತವಾಗದಿರಲಿ | ADC ಬಿ.ಟಿ.ಕುಮಾರಸ್ವಾಮಿ

ಮುಖ್ಯ ಸುದ್ದಿ

ಮಹನೀಯರು ಒಂದು ಜಾತಿಗೆ ಸೀಮಿತವಾಗದಿರಲಿ | ADC ಬಿ.ಟಿ.ಕುಮಾರಸ್ವಾಮಿ

CHITRADURGA NEWS | 14 JANUARY 2025

ಚಿತ್ರದುರ್ಗ: ಮಹನೀಯರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಸಿದ್ಧರಾಮೇಶ್ವರರು ಇಂತಹದೇ ಜಾತಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಜನಿಸಲಿಲ್ಲ, ಅವರ ಕೊಡುಗೆಗಳು ಸಹ ಒಂದು ಜಾತಿಗೆ ಸೀಮಿತವಾಗಿಲ್ಲ, ಸಮಾಜದ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಿದರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

Also Read: ಶಾಸಕ ಎಂ.ಚಂದ್ರಪ್ಪ ಮನೆಯಲ್ಲಿ ಪೌರಕಾರ್ಮಿಕರ ಜೊತೆ ಸಹಪಂಕ್ತಿ ಭೋಜನ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಭಕ್ತಿ ಹಾಗೂ ಕಾಯಕ ನಿಷ್ಠೆ ಮೂಲಕ ಸಮಾಜಮುಖಿ ಕಾರ್ಯಗಳನ್ನು ಸಿದ್ಧರಾಮೇಶ್ವರರು ಕೈಗೊಂಡರು. ಅವರ ವಚನಗಳು ಇಂದಿನ ಸಮಾಜದಲ್ಲೂ ಪ್ರಸ್ತುತ ಎನಿಸಿವೆ. ರಾಷ್ಟ್ರಕವಿ ಕುವೆಂಪು ಅವರು ಹೇಳಿದಂತೆ ಸಿದ್ಧರಾಮೇಶ್ವರರು ವಿಶ್ವ ಮಾನವರಾಗಿದ್ದಾರೆ ಎಂದರು.

ಭೋವಿ ಸಮಾಜದವರು ಶ್ರಮ ಜೀವಿಗಳಾಗಿದ್ದು, ಕಾಯಕ ನಿಷ್ಠೆ ಹೊಂದಿದ್ದಾರೆ. ಶಿಕ್ಷಣ ಹಾಗೂ ಸಂಘಟನೆ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

Also Read: ಸಂಕ್ರಾಂತಿ ವಿಶೇಷ ಲೇಖನ

ವಚನಗಳು ಪಠ್ಯಕ್ಕೆ ಮಾತ್ರ ಸೀಮಿತವಲ್ಲ. ವಿದ್ಯಾರ್ಥಿಗಳು ಅವುಗಳ ಆಳ-ಅಗಲ ತಿಳಿದಾಗ ಮಾತ್ರ ಮಹನೀಯರ ಚಿಂತನೆಗಳನ್ನು ಅರ್ಥೈಸಿಕೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಮಾತನಾಡಿ, 12ನೇ ಶತಮಾನದಲ್ಲಿ ಕಾಯಕಯೋಗಿ ಸಿದ್ಧರಾಮರು ಮಾಡಿದ ಕಾಯಕದಿಂದಾಗಿ ಇಂದು ನಾವು ಸಿದ್ಧರಾಮೇಶ್ವರರ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಕಾಯಕದಿಂದ ಕೈಲಾಸ ಕಂಡ ಪುಣ್ಯಾತ್ಮರು ಸಿದ್ಧರಾಮರು ಎಂದು ಅಭಿಪ್ರಾಯಪಟ್ಟರು.

ಶಿವಯೋಗಿ ಸಿದ್ಧರಾಮರು ಕಾಯಕದ ಜೊತೆಗೆ ಹಲವಾರು ವಚನಗಳನ್ನು ರಚನೆ ಮಾಡಿದ್ದಾರೆ. ಕೆರೆ-ಕಟ್ಟೆ, ಬಾವಿ ನಿರ್ಮಾಣ, ರಸ್ತೆ ನಿರ್ಮಾಣ ಸೇರಿದಂತೆ ಸಿದ್ಧರಾಮರು ಹೇಳಿದ ಕಾಯಕವನ್ನು ಇಂದಿಗೂ ಸಮಾಜ ಮುಂದುವರೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಬಿ.ಎಂ.ಗುರುನಾಥ ಉಪನ್ಯಾಸ ನೀಡಿದರು.

Also Read: ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು

ಜಯಂತಿ ಅಂಗವಾಗಿ ಮೊಳಕಾಲ್ಮುರು ತಾಲ್ಲೂಕು ಚಿಕ್ಕೋಬನಹಳ್ಳಿಯ ಮುರಾರ್ಜಿ ಮತ್ತು ತಂಡದವರು ಗೀತಗಾಯನ ಪ್ರಸ್ತುತ ಪಡಿಸಿದರು. ಸಿ.ರಂಗನಾಯ್ಕ್ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಭೋವಿ ಸಂಘದ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಕೋಶಾಧ್ಯಕ್ಷ ಮಂಜುನಾಥ್, ನಿಕಟಪೂರ್ವ ಅಧ್ಯಕ್ಷ ತಿಮ್ಮಣ್ಣ, ಭೋವಿ ಗುರುಪೀಠದ ಸಿಇಒ ಗೌನಹಳ್ಳಿ ಗೋವಿಂದಪ್ಪ, ಬಂಜಾರ ಸಮಾಜದ ಮುಖಂಡ ನರೇನಹಳ್ಳಿ ಅರುಣ್ ಕುಮಾರ್, ಸಮಾಜದ ಮುಖಂಡರಾದ ಭರತ್, ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version