CHITRADURGA NEWS | 11 JUNE 2024
ಚಿತ್ರದುರ್ಗ: ನನ್ನ ಪತಿ ಮನೆಯಿಂದ ಹೋಗುವಾಗ ಏನೂ ಹೇಳಿರಲಿಲ್ಲ, ಈಗ ನೋಡಿದರೆ ಅವರ ಹತ್ಯೆಯಾಗಿದೆ. ಈಗ ನಾನು ಹೇಗಿರಲಿ, ಮುಂದೇನು ಮಾಡಲಿ ಎಂದು ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಕಣ್ಣೀರಿಟ್ಟರು.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವಿಬ್ಬರು ಮದುವೆಯಾಗಿ ಒಂದು ವರ್ಷವಾಗಿದೆ. ನಾನೀಗ ಗರ್ಭಿಣಿ. ನಾನು ಗರ್ಭಿಣಿ, ತಾಯಿಯಾಗುತ್ತಿದ್ದೇನೆ. ಆದರೆ, ಪತಿಯೇ ಇಲ್ಲ. ಅವರ ಸಾವಿಗೆ ನ್ಯಾಯ ಕೊಡಿಸಿ ಎಂದು ದುಃಖಿಸಿದರು.

ಇದನ್ನೂ ಓದಿ: ಮಧ್ಯಾಹ್ನ ಊಟ ಬೇಡ ಎಂದು ಹೇಳಿ ಹೋದ ಮಗ ಶವವಾಗಿ ವಾಪಾಸು | ರೇಣುಕಾಸ್ವಾಮಿ ಕೊಲೆಗೆ ಮರುಗಿದ ಚಿತ್ರದುರ್ಗ
ನನ್ನ ಪತಿ ರೇಣುಕಾಸ್ವಾಮಿ ದರ್ಶನ್ ಅವರ ಅಭಿಮಾನಿ ಆಗಿರಲಿಲ್ಲ. ಅವರು ತಪ್ಪು ಮಾಡಿದ್ದರೆ ಎಚ್ಚರಿಕೆ ಕೊಡಬೇಕಿತ್ತು. ಜೀವವನ್ನೇ ಯಾಕೆ ತೆಗೆದಿದ್ದಾರೆ. ನನಗೆ ನನ್ನ ಗಂಡ ಬೇಕು ಎಂದರು.
ಸಹನಾ ಅವರ ಮಾತುಗಳನ್ನು ಕೇಳುತ್ತಿದ್ದಂತೆ ನೆರೆದವರು ಕಣ್ಣಾಲಿಗಳು ತೇವಗೊಂಡವು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
