CHITRADURGA NEWS | 08 MARCH 2026
ಹೊಳಲ್ಕೆರೆ: ಭಾರತ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಡುತ್ತಿದ್ದು, ರಾಜ್ಯದಲ್ಲಿಯೂ ಶಿಕ್ಷಣಕ್ಕೆ ಒತ್ತು ಕೊಡುವ ಕೆಲಸವಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಗುರು-ಹಿರಿಯರು, ಪೋಷಕರುಗಳಿಗೆ ಕೀರ್ತಿ ತರುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.
ಇದನ್ನೂ ಓದಿ: ಉಪವಾಸ ಸತ್ಯಾಗ್ರಹ ಕುಳಿತಿದ್ದ ರೈತರು ಅಸ್ವಸ್ಥ | ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ತುಮಕೂರು ಆಸ್ಪತ್ರೆಗೆ ದಾಖಲು
ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಪಿಎಂ. ಉಷ ಸಾಫ್ಟ್ ಕಾಂಪೊನೆಂಟ್ ಐಕ್ಯುಎಸಿ ವಿಭಾಗದ ವತಿಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯದಲ್ಲಿಯೇ ಹೆಸರು ಪಡೆಯುವ ರೀತಿಯಲ್ಲಿ ಸಾಗುತ್ತಿದೆಯೆಂದರೆ ಇಲ್ಲಿನ ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರ ಪರಿಶ್ರಮವಿದೆ.
ಹೆಚ್ಚುವರಿ ಕಟ್ಟಡ, ಗ್ರಂಥಾಲಯ, ಕಂಪ್ಯೂಟರ್ ಸೌಲಭ್ಯ ಕಲ್ಪಿಸಿ ಶಿಕ್ಷಣಕ್ಕೆ ಪೂರಕವಾದ ಮೂಲಭೂತ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ದೊರಕಿಸಿ ಸದಾ ಸಹಕಾರ ಕೊಡುತ್ತೇನೆ. ಭಾರತ ಸರ್ಕಾರದ ಪಿಎಂ. ಉಷ ಯೋಜನೆಗಳನ್ನು ನಿಮಗೆ ಕಾಲೇಜಿನವರು ತಲುಪಿಸುತ್ತಾರೆ.
ಶಿಕ್ಷಣದ ಕಡೆ ಹೆಚ್ಚಿನ ನಿಗಾ ಹರಿಸಿ ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಕರೆ ನೀಡಿದರು.
ಇದನ್ನೂ ಓದಿ: ರೈತ ಮುಖಂಡ ಕೆ.ಟಿ.ತಿಪ್ಪೇಸ್ವಾಮಿ ಚಿಕಿತ್ಸಾ ವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಆಗ್ರಹ
ಎಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧನಾ ಪಾರ್ಕ್ ತಿರುವನಂತಪುರದ ಅಧ್ಯಕ್ಷ ಪ್ರೊ.ಸಾಬು ಥಾಮಸ್, ಬೆಂಗಳೂರು ಎಂ.ಎಸ್.ರಾಮಯ್ಯ ಇನ್ಸ್ಟಿಟ್ಯುಟ್ ಆಫ್ ಟೆಕ್ನಾಲಜಿಯ ಡಾ.ದಿನೇಶ್ ಪಿ.ಎ. ಬೆಂಗಳೂರು ಜವಾಹರಲಾಲ್ ನೆಹರು ಸುಧಾರಿತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಫ್ರೊಫೆಸರ್ ಪ್ರತಾಪ್ ವಿಷ್ಣೋಯಿ, ಬಳ್ಳಾರಿ ಕಿಷ್ಕಿಂದಾ ವಿಶ್ವವಿದ್ಯಾನಿಲಯದ ಡೀನ್ ಡಾ. ಮಂಜುನಾಥ ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ದಿನೇಶ್ಕುಮಾರ್ ಎಸ್.ಟಿ. ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಪಿ.ಹೆಚ್.ಮುರುಗೇಶ್, ಡಿ.ಸಿ.ಮೋಹನ್, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
