CHITRADURGA NEWS | 29 SEPTEMBER 2024
ಚಿತ್ರದುರ್ಗ: ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ನಗರದಲ್ಲಿ ಆಗಿರುವ ಗಲೀಜು, ಕಸವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ(Civil servants) ವಿಶೇಷ ಅನುದಾನ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳಕ್ಕೆ(Bajrang Dal) ಕರುನಾಡ ವಿಜಯಸೇನೆ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: Kannada Novel: 5. ಕೆನ್ನಳ್ಳಿಯ ದುರಂತ | ಹಬ್ಬಿದಾ ಮಲೆಮಧ್ಯದೊಳಗೆ

ಶೋಭಾಯಾತ್ರೆಯಲ್ಲಿ ಭಾಗವಹಿಸುವ ಜನರು ತಿಂಡಿ, ತಿನಸು ತಿಂದು ಕಸದ ರಾಶಿ ಮತ್ತು ಚಪ್ಪಲಿ, ಎಲ್ಲಿ ಅಂದರೆ ಅಲ್ಲಿ ಮೂತ್ರವಿಸರ್ಜನೆ ಮಾಡಿರುವುದನ್ನು ಮಾರನೇ ದಿನ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಯಾವುದೇ ಭತ್ಯೆ ಇರುವುದಿಲ್ಲ.
ಇವರುಗಳ ಕಷ್ಟಕ್ಕೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ಪಂದಿಸಿ, ಪೌರಕಾರ್ಮಿಕರನ್ನು ವಿಶೇಷವಾಗಿ ಪರಿಗಣಿಸಿ, ಅವರಿಗೆ ವಿಶೇಷ ಭತ್ಯೆ ಜೊತೆಗೆ ಶೋಭಾಯಾತ್ರೆಯ ಒಂದು ದಿನದ ಮುಂಚೆ ಸನ್ಮಾನಿಸಬೇಕು.
ಇವರ ಶ್ರಮ ಅತ್ಯಂತ ಮುಖ್ಯ ಪಾತ್ರವಾಗಿರುವುದರಿಂದ ಹೊರಗುತ್ತಿಗೆ ಪೌರಕಾರ್ಮಿಕರಿಗೆ ರೂ.20000 ಹಾಗೂ ಕಾಯಂ ಪೌರಕಾರ್ಮಿಕರಿಗೆ ರೂ.10000 ಹಣದ ಸಹಾಯ ಮಾಡಬೇಕು ಎಂದು ಕರುನಾಡ ವಿಜಯಸೇನೆಯ ಜಿಲ್ಲಾಧ್ಯಕ್ಷ ಕೆ.ಟಿ.ಶಿವುಕುಮಾರ್ ವಿಶ್ವ ಹಿಂದೂ ಪರಿಷತ್ ಬಜರಂಗದಳಕ್ಕೆ ಮನವಿ ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: FIRE INCIDENT: ಹೊತ್ತಿ ಉರಿದ ಕಂಟೈನರ್ | ಜನವಸತಿ ಪ್ರದೇಶದ ಬಳಿ ತಪ್ಪಿದ ಅನಾಹುತ
ಈ ವೇಳೆ ಅವಿನಾಶ್, ಗೋಪಿನಾಥ್ ಸೇರಿದಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
